Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹೆದ್ದಾರಿ ಟೋಲ್ ಸಂಗ್ರಹ ನಿರ್ಧಾರ...

ಹೆದ್ದಾರಿ ಟೋಲ್ ಸಂಗ್ರಹ ನಿರ್ಧಾರ ಹಿಂಪಡೆಯಲು ಆಗ್ರಹ

ಜು.23 ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ14 July 2017 6:41 PM IST
share

ಬೆಂಗಳೂರು, ಜು.14: ರಾಜ್ಯದ 19 ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಮಾಡಲು ಸರಕಾರ ಕೈಗೊಂಡಿರುವ ನಿರ್ಧಾರವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಜು.23 ರ ನಂತರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಬೇಕಾಗುತ್ತದೆ ಎಂದು ರಾಜ್ಯ ಲಾರಿ ಮಾಲಕರ ಮತ್ತು ಏಜೆನ್ಸಿಗಳ ಅಸೋಸಿಯೇಷನ್ ಎಚ್ಚರಿಕೆ ನೀಡಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ, ದೇಶದಲ್ಲಿಯೇ ಅತಿ ಅಧಿಕವಾದ ಟೋಲ್ ಶುಲ್ಕವನ್ನು ವಿಧಿಸಲು ಹೊರಟಿರುವ ಸರಕಾರದ ಕ್ರಮ ಲಾರಿ ಮಾಲಕ ಹಾಗೂ ಏಜೆನ್ಸಿಗಳಿಗೆ ಆಘಾತವನ್ನುಂಟು ಮಾಡಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಅನಿವಾರ್ಯವಾಗಿ ಸಾಗಾಣಿಕೆ ದರ ಹೆಚ್ಚಳ ಮಾಡಬೇಕಾಗುತ್ತದೆ. ಇದರ ಪರಿಣಾಮ ದಿನ ಬಳಕೆ ವಸ್ತುಗಳ ಮೇಲೆ ಬೀರಲಿದೆ ಎಂದು ಹೇಳಿದರು.

ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಮಾಡಲು ಸರಕಾರದಲ್ಲಿ ಸ್ಥಾನಮಾನ ಸಿಗದ ರಾಜಕಾರಣಿಗಳಿಗೆ ನೀಡಲಾಗುತ್ತಿದೆ. ಈಗಾಗಲೇ ವಿವಿಧ ಹಂತಗಳಲ್ಲಿ ಲಕ್ಷಾಂತರ ರೂ.ಗಳ ಟೋಲ್ ಶುಲ್ಕಗಳನ್ನು ಸಂಗ್ರಹ ಮಾಡಲಾಗುತ್ತಿದೆ. ಅದರ ಜೊತೆಗೆ ಈ 19 ಹೆದ್ದಾರಿಗಳ ಮೂಲಕ 1500 ಕಿ.ಮೀ.ಗಳಲ್ಲಿ ಸಂಚರಿಸುವ ವಾಹನಗಳ ಮೇಲೆ ಟೋಲ್ ವಿಧಿಸುತ್ತಿರುವುದು ಸರಿಯಲ್ಲ. ಹೀಗಾಗಿ ಕೂಡಲೇ ಸರಕಾರ ತನ್ನ ನಿರ್ಣಯವನ್ನು ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದರು.

ರಾಜ್ಯಾದ್ಯಂತ ಪ್ರತಿದಿನ 2 ಲಕ್ಷ ಲಾರಿಗಳು ಸಂಚಾರ ಮಾಡುತ್ತಿವೆ. ಇವುಗಳಿಂದ ಒಂದು ಲಾರಿಗೆ ಒಂದು ದಿನಕ್ಕೆ 10 ಸಾವಿರ ಟೋಲ್ ಶುಲ್ಕ ಕಟ್ಟುತ್ತಿದ್ದು, ಒಟ್ಟಾರೆ ಒಂದು ತಿಂಗಳಿನಲ್ಲಿ ಸರಾಸರಿ ಮೂರು ಲಕ್ಷ ರೂ.ಗಳಷ್ಟು ಟೋಲ್ ಶುಲ್ಕ ಪಾವತಿಸಲಾಗುತ್ತಿದೆ. ಇದರ ನಡುವೆಯೂ ಹೆದ್ದಾರಿಗಳಲ್ಲಿ ಸಾರಿಗೆ ಅಧಿಕಾರಿಗಳು ತಪಾಸಣೆ ನೆಪದಲ್ಲಿ ಲೂಟಿ ಮಾಡುತ್ತಿದ್ದಾರೆ. ಎಲ್ಲ ದಾಖಲೆಗಳೂ ಸರಿ ಇದ್ದರೂ ವಿನಾಕಾರಣ ಚಾಲಕರಿಗೆ ಕಿರುಕುಳ ನೀಡುತ್ತಿದ್ದಾರೆ. ಪ್ರತಿ 30 ಕಿ.ಮೀ.ಗೆ ಲಾರಿ ತಡೆದು ತಪಾಸಣೆ ನಡೆಸುತ್ತಾರೆ. ಇದರಿಂದ ನಿಗದಿತ ಸಮಯದಲ್ಲಿ ಸ್ಥಳ ತಲುಪಲು ಸಾಧ್ಯವಾಗುತ್ತಿಲ್ಲ. ಏಕರೂಪ ಸರಕು ಮತ್ತು ಸೇವಾ ತೆರಿಗೆ ಜಾರಿಯಾದ ನಂತರ ಎಲ್ಲ ರಾಜ್ಯಗಳಲ್ಲಿಯೂ ತಪಾಸಣಾ ಠಾಣೆಗಳನ್ನು ಸಂಪೂರ್ಣವಾಗಿ ರದ್ಧು ಮಾಡಿ ಮುಕ್ತ ಹಾಗೂ ತ್ವರಿತ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ, ರಾಜ್ಯ ಸರಕಾರ ಈ-ಸುಮಗ್ ಅನ್ನು ಜಾರಿ ಮಾಡಿ ಅನಗತ್ಯವಾಗಿ ಲಾರಿಗಳ ಮೇಲೆ ದಾಳಿ ನಡೆಸಿ ಶೋಷಣೆ ಮಾಡುತ್ತಿರುವುದು ಖಂಡನೀಯ. ಇದರ ಜೊತೆಗೆ ರಾಜ್ಯ ಹೆದ್ದಾರಿಗಳಲ್ಲಿ ಪ್ರತಿ 30 ಕಿ.ಮೀ.ಗೆ ಒಂದರಂತೆ ಆರ್‌ಟಿಒ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಿಕೊಂಡು ಅನಗತ್ಯ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಹೀಗಾಗಿ ನೆರೆ ರಾಷ್ಟ್ರಗಳಲ್ಲಿ ಅನೇಕ ತಪಾಸಣಾ ಕೇಂದ್ರಗಳನ್ನು ರದ್ಧು ಮಾಡಿರುವ ರೀತಿಯಲ್ಲಿ ರಾಜ್ಯದಲ್ಲಿಯೂ ರದ್ದು ಮಾಡಬೇಕು. 19 ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಮಾಡುವ ನಿರ್ಣಯ ಕೈಬಿಡಬೇಕು. ಆರ್‌ಟಿಒ ಅಧಿಕಾರಿಗಳ ಕಿರುಕುಳ ತಪ್ಪಿಸಬೇಕು. ನೈಸ್ ರಸ್ತೆಯಲ್ಲಿ ಹೆಚ್ಚುವರಿಯಾಗಿ ಟೋಲ್ ವಸೂಲಿ ಮಾಡುತ್ತಿದ್ದು, ಈ ಕುರಿತು ಕ್ರಮ ಕೈಗೊಳ್ಳಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅವರು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X