Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯಮಟ್ಟದ ಅಂಚೆ ಚೀಟಿ ಪ್ರದರ್ಶನಕ್ಕೆ...

ರಾಜ್ಯಮಟ್ಟದ ಅಂಚೆ ಚೀಟಿ ಪ್ರದರ್ಶನಕ್ಕೆ ಚಾಲನೆ

‘ಕನ್ನಡ ಕಲಿ- ಕನ್ನಡ ನುಡಿ’ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ14 July 2017 6:51 PM IST
share

ಬೆಂಗಳೂರು,ಜು.14: ಅಂಚೆ ಚೀಟಿ ಮಹತ್ವ ಕುರಿತು ಇಂದಿನ ಯುವಪೀಳಿಗೆಗೆ ಅರಿವು ಮೂಡಿಸಲು ಕರ್ನಾಟಕ ಫಿಲಾಟೆಲಿಕ್ ಸೊಸೈಟಿ ವತಿಯಿಂದ ಇಂದಿನಿಂದ ಮೂರು ದಿನಗಳ ಕಾಲ ನಗರದಲ್ಲಿ ಹಮ್ಮಿಕೊಂಡಿರುವ ‘ಕರ್‌ಫಿಲೆಕ್ಸ್ -2017’ ರಾಜ್ಯಮಟ್ಟದ ಅಂಚೆ ಚೀಟಿ ಪ್ರದರ್ಶನಕ್ಕೆ ಕರ್ನಾಟಕ ವೃತ್ತದ ಚೀಫ್ ಪೋಸ್ಟ್‌ಮಾಸ್ಟರ್ ಜನರಲ್ ಡಾ. ಚಾರ್ಲ್ಸ್ ಲೋಬೊ ವಿದ್ಯುಕ್ತವಾಗಿ ಚಾಲನೆ ನೀಡಿದರು.

ನಗರದ ಶ್ರೀರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಅಂಚೆ ಚೀಟಿ ಪ್ರದರ್ಶನದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಅಂಚೆ ಚೀಟಿ ಸಂಗ್ರಾಹಕಿ ಡಾ. ಸೀತಾ ಭತೇಜ ಅವರು ‘ಕನ್ನಡ ಕಲಿ- ಕನ್ನಡ ನುಡಿ’ ಹಾಗೂ ಕ್ರೀಡಾಪಟುಗಳಾದ ಅನಿಲ್ ಕುಂಬ್ಳೆ, ಪ್ರಕಾಶ್ ಪಡುಕೋಣೆ, ಪಂಕಜ್ ಅಡ್ವಾನಿ ಅವರ ಅಂಚೆ ಚೀಟಿಗಳನ್ನು ಲೋಕಾರ್ಪಣೆಗೊಳಿಸಿದರು. ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಜನರಲ್ಲಿ ಅಂಚೆ ಚೀಟಿ ಮಹತ್ವ ಮತ್ತು ಸಂಗ್ರಹ ಹವ್ಯಾಸ ಉತ್ತೇಜಿಸುವ ಸಲುವಾಗಿ ಏರ್ಪಡಿಸಿರುವ ಅಂಚೆ ಚೀಟಿ ಪ್ರದರ್ಶನದಲ್ಲಿ ಸಾವಿರಾರು ಬಗೆಯ ಅಂಚೆಚೀಟಿಗಳು ಆಕರ್ಷಣೀಯವಾಗಿವೆ.

ಪ್ರದರ್ಶನದಲ್ಲಿ ಡಾ. ಚಾರ್ಲ್ಸ್ ಲೋಬೊ ಸಂಗ್ರಹಿಸಿರುವ ಗೋವಾದ ಇತಿಹಾಸ ಕುರಿತ ಅಂಚೆ ಚೀಟಿ, ಡಾ. ಸೀತಾ ಭತೇಜ ಸಂಗ್ರಹಿಸಿರುವ ಬ್ರಿಟಿಷ್ ಇಂಡಿಯಾ ಹಾಗೂ ಕೆ. ಚೈತನ್ಯದೇವ್ ಸಂಗ್ರಹದ ಫ್ರೆಂಚ್ ಇಂಡಿಯಾ ಕುರಿತು ಅಂಚೆ ಚೀಟಿಗಳು, ಪೋರ್ಚುಗೀಸ್ ಇಂಡಿಯಾ, ಒಲಿಂಪಿಯಾಡ್, ಕ್ರೀಡೆ, ಸ್ವಾತಂತ್ರ್ಯ ಹೋರಾಟಗಾರರು ಸೇರಿದಂತೆ ವಿಶ್ವದ ಎಲ್ಲ ದೇಶಗಳ ಅಂಚೆ ಚೀಟಿಗಳನ್ನು ನೋಡಬಹುದು.

ಅಂಚೆ ಪ್ರದರ್ಶನದ ಜತೆಗೆ ಶಾಲಾ ವಿದ್ಯಾರ್ಥಿಗಳಿಗೆಂದು ಅಂಚೆ ಚೀಟಿಗಳಿಗೆ ಸಂಬಂಧಿಸಿದಂತೆ ರಸಪ್ರಶ್ನೆ, ಪತ್ತೆ ಹಚ್ಚುವ ಸ್ಪರ್ಧೆ ಸೇರಿದಂತೆ ನಾನಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಪ್ರದರ್ಶನದಲ್ಲಿ 103 ಮಂದಿ ಅಂಚೆ ಚೀಟಿ ಸಂಗ್ರಹಕಾರರಿಂದ ಅಂಚೆ ಚೀಟಿಗಳ ಸಂಗ್ರಹಗಳು, ಲಕೋಟೆಗಳು ಪ್ರದರ್ಶನಗೊಂಡಿವೆ. ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ ಏಳು ಮಂದಿ ಸಂಗ್ರಹಕಾರರ ಅಂಚೆ ಚೀಟಿಗಳ ಸಂಗ್ರಹದಲ್ಲಿವೆ. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಕೆ. ಚೈತನ್ಯದೇವ್, ಪ್ರಧಾನ ಕಾರ್ಯದರ್ಶಿ ನಿಖಿಲೇಶ್ ಮೇಲ್ಕೋಟೆ, ನಾನಾ ಭಾಗಗಳಿಂದ ಆಗಮಿಸಿದ್ದ ಅಂಚೆ ಚೀಟಿ ಸಂಗ್ರಹಕಾರರು ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X