Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಾಮಾಜಿಕ ತಾಣಗಳಲ್ಲಿ ನೊಬೆಲ್ ವಿಜೇತನ...

ಸಾಮಾಜಿಕ ತಾಣಗಳಲ್ಲಿ ನೊಬೆಲ್ ವಿಜೇತನ ಶ್ರದ್ಧಾಂಜಲಿ ಹತ್ತಿಕ್ಕಿದ ಚೀನಾ

ವಾರ್ತಾಭಾರತಿವಾರ್ತಾಭಾರತಿ14 July 2017 7:29 PM IST
share
ಸಾಮಾಜಿಕ ತಾಣಗಳಲ್ಲಿ ನೊಬೆಲ್ ವಿಜೇತನ ಶ್ರದ್ಧಾಂಜಲಿ ಹತ್ತಿಕ್ಕಿದ ಚೀನಾ

ಬೀಜಿಂಗ್, ಜು. 14: ಗುರುವಾರ ಬಂಧನದಲ್ಲೇ ಮೃತಪಟ್ಟ ಚೀನಾದ ಪ್ರಜಾಪ್ರಭುತ್ವ ಹೋರಾಟಗಾರ ಹಾಗೂ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಸಾಹಿತಿ ಲಿಯು ಕ್ಸಿಯಾವೊಬೊ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಚರ್ಚೆಯಾಗುವುದನ್ನು ತಪ್ಪಿಸಲು ಚೀನಾ ಹಲವಾರು ದಮನಕಾರಿ ಕ್ರಮಗಳನ್ನು ತೆಗೆದುಕೊಂಡಿದೆ.

ಅದರ ಭಾಗವಾಗಿ, ಸಾಮಾಜಿಕ ಜಾಲ ತಾಣಗಳಲ್ಲಿ ಅವರ ಪರವಾಗಿ ಕ್ಯಾಂಡಲ್‌ಗಳನ್ನು ಹೊತ್ತಿಸುವುದು, ಸಂತಾಪ ಸೂಚಕ ಸಂದೇಶಗಳನ್ನು (ರಿಪ್) ರವಾನಿಸುವುದು ಹಾಗೂ ಇತರ ರೀತಿಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸುವುದನ್ನು ನಿಷೇಧಿಸಿದೆ.

ಲಿವರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ 61 ವರ್ಷದ ಪ್ರಜಾಪ್ರಭುತ್ವ ಹೋರಾಟಗಾರ ಗುರುವಾರ ಶೆನ್ಯಾಂಗ್ ನಗರದ ಆಸ್ಪತ್ರೆಯೊಂದರಲ್ಲಿ ಮೃತಪಟ್ಟರು.

 ಆದರೆ, ಹೆಚ್ಚಿನ ಚೀನೀಯರಿಗೆ ಅವರ ಸಾವಿನ ಬಗ್ಗೆ ಅಥವಾ ಅವರು ಯಾರು ಎಂಬ ಬಗ್ಗೆಯೂ ಮಾಹಿತಿಯಿಲ್ಲ. ಗೂಗಲ್ ಮಾದರಿಯ ಚೀನಾದ ಮಾಹಿತಿ ಹುಡುಕುವ ಸರ್ಚ್ ಇಂಜಿನ್ ‘ಬೈಡು’ನಲ್ಲಿ ಅವರ ಸಾವಿನ ಬಗ್ಗೆ ಮಾಹಿತಿ ಹುಡುಕಿದರೆ, ‘ಯಾವುದೇ ಮಾಹಿತಿಯಿಲ್ಲ’ ಎಂಬ ಉತ್ತರ ನೀಡಿತು. ಟ್ವಿಟರ್‌ನಂತೆ ಕೆಲಸ ಮಾಡುವ ಚೀನಾದ ‘ವೈಬೊ’ ಅವರ ಹೆಸರು ಮತ್ತು ಅವರ ಹೆಸರಿನ ಸಂಕ್ಷಿಪ್ರ ರೂಪ ‘ಎಲ್‌ಎಕ್ಸ್‌ಬಿ’ಯನ್ನು ನಿಷೇಧಿಸಿದೆ.

ಅತ್ಯಂತ ಗುಪ್ತವಾಗಿ ಲಿಯು ಅವರಿಗೆ ಸಲ್ಲಿಸಲಾದ ಶ್ರದ್ಧಾಂಜಲಿಗಳನ್ನೂ ವೈಬೊ ತೆಗೆದುಹಾಕಿದೆ.ಶೋಕತಪ್ತ ಅಭಿಮಾನಿಗಳು ವೈಬೊದಲ್ಲಿ ಹಾಕಿರುವ ಮೇಣದಬತ್ತಿಯ ಚಿತ್ರಗಳನ್ನೂ ಅಳಿಸಿಹಾಕಲಾಗಿದೆ.

ಲಿಯು ಸಾವಿನ ಹೊಣೆ ಚೀನಾ ಸರಕಾರದ ಮೇಲೆ: ನಾರ್ವೆ ನೊಬೆಲ್ ಸಮಿತಿ

ಓಸ್ಲೊ (ನಾರ್ವೆ), ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಹಾಗೂ ಪ್ರಜಾಪ್ರಭುತ್ವ ಹೋರಾಟಗಾರ ಲಿಯು ಕ್ಸಿಯಾವೊಬೊ ಸಾವಿನ ಹೊಣೆ ಚೀನಾ ಸರಕಾರದ ಮೇಲಿದೆ ಎಂದು ನಾರ್ವೆ ನೊಬೆಲ್ ಸಮಿತಿಯ ಮುಖಂಡ ಬೆರಿಟ್ ರೀಸ್-ಆ್ಯಂಡರ್‌ಸನ್ ಗುರುವಾರ ಹೇಳಿದ್ದಾರೆ.

ನೊಬೆಲ್ ಪ್ರಶಸ್ತಿಗಳ ಘೋಷಣೆಯನ್ನು ನಾರ್ವೆ ನೊಬೆಲ್ ಸಮಿತಿ ಮಾಡುತ್ತದೆ.

‘‘ಕ್ಯಾನ್ಸರ್ ಗುಣಪಡಿಸಲಾಗದ ಹಂತ ತಲುಪುವವರೆಗೂ ಸರಿಯಾದ ಚಿಕಿತ್ಸೆ ಪಡೆಯುವ ಸ್ಥಳಕ್ಕೆ ಅವರನ್ನು ಕರೆದೊಯ್ಯದಿರುವುದು ಆಘಾತಕಾರಿಯಾಗಿದೆ’’ ಎಂದು ಅವರು ‘ರಾಯ್ಟರ್ಸ್’ಗೆ ನೀಡಿದ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

‘‘ಕ್ಸಿಯಾವೊಬೊ ಅವರ ಅಕಾಲಿಕ ಸಾವಿನ ಸಂಪೂರ್ಣ ಹೊಣೆಯನ್ನು ಚೀನಾ ಸರಕಾರ ಹೊರುತ್ತದೆ’’ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X