Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಾರಾಪುಂಜಗಳ ಮಹಾಸಮೂಹ ‘ಸರಸ್ವತಿ’ ಪತ್ತೆ...

ತಾರಾಪುಂಜಗಳ ಮಹಾಸಮೂಹ ‘ಸರಸ್ವತಿ’ ಪತ್ತೆ ಹಚ್ಚಿದ ಭಾರತೀಯ ವಿಜ್ಞಾನಿಗಳು

ವಾರ್ತಾಭಾರತಿವಾರ್ತಾಭಾರತಿ14 July 2017 7:35 PM IST
share
ತಾರಾಪುಂಜಗಳ ಮಹಾಸಮೂಹ ‘ಸರಸ್ವತಿ’ ಪತ್ತೆ ಹಚ್ಚಿದ ಭಾರತೀಯ ವಿಜ್ಞಾನಿಗಳು

ಪುಣೆ,ಜು.14: ಬ್ರಹ್ಮಾಂಡದಲ್ಲಿ ತಾರಾಪುಂಜಗಳ ಮಹಾಸಮೂಹವೊಂದನ್ನು ಪತ್ತೆ ಹಚ್ಚಿರುವುದಾಗಿ ಪುಣೆಯ ವಿಜ್ಞಾನಿಗಳ ತಂಡವೊಂದು ಪ್ರಕಟಿಸಿದ್ದು, ಅದನ್ನು ‘ಸರಸ್ವತಿ’ ಎಂದು ಹೆಸರಿಸಿದೆ.

ಮೀನ ರಾಶಿಯ ದಿಕ್ಕಿನಲ್ಲಿ 400 ಶತಕೋಟಿ ಜೋತಿರ್ವರ್ಷಗಳ ದೂರದಲ್ಲಿರುವ ಈ ತಾರಾಪುಂಜಗಳ ಮಹಾಸಮೂಹದ ಬೆಳಕು ಈಗಷ್ಟೇ ಭೂಮಿಯನ್ನು ತಲುಪಿದ್ದು, ಅದು ಹಿಂದೆ ಹೇಗಿತ್ತು ಎಂಬ ಬಗ್ಗೆ ಅಧ್ಯಯನ ನಡೆಸಲು ಸಾಧ್ಯವಾಗಲಿದೆ ಎಂದು ಈ ವಿಜ್ಞಾನಿಗಳು ತಿಳಿಸಿದ್ದಾರೆ.
ಇದು ಬ್ರಹ್ಮಾಂಡದಲ್ಲಿಯ ತಾರಾಪುಂಜಗಳ ಮಹಾಸಮೂಹವಾಗಿದ್ದು, ಅತ್ಯಂತ ಅಪರೂಪದ್ದಾಗಿದೆ. ಈವರೆಗೆ ಇಂತಹ ಕೆಲವೇ ರಚನೆಗಳು ನಿರೀಕ್ಷಣೆಗೆ ಲಭಿಸಿದ್ದು, ಎಲ್ಲ ಸಂಶೋಧಕರು ಭಾರತದವರೇ ಆಗಿರುವುದರಿಂದ ಇದು ಖಂಡಿತವಾಗಿಯೂ ಭಾರತದ ಮೊದಲ ಶೋಧವಾಗಿದೆ ಎಂದು ಸಂಶೋಧನಾ ವರದಿಯ ಸಹಲೇಖಕರಾಗಿರುವ ಇಲ್ಲಿಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ(ಐಐಎಸ್‌ಇಆರ್) ಯ ಶಿಶಿರ್ ಸಾಂಖ್ಯಾಯನ ಅವರು ಹೇಳಿದರು.

ಈಗ ಪುಣೆಯ ಖಗೋಳ ವಿಜ್ಞಾನ ಮತ್ತು ಖಗೋಳ ಭೌತಶಾಸ್ತ್ರ ಅಂತರ್ ವಿವಿ ಕೇಂದ್ರ (ಐಯುಸಿಎಎ)ದ ನಿರ್ದೇಶಕರಾಗಿರುವ ಸೋಮಕ್ ರಾಯ್‌ಚೌಧುರಿ ಅವರು 1989ರಲ್ಲಿ ಬ್ರಿಟನ್ನಿನ ಕ್ಯಾಂಬ್ರಿಡ್ಜ್ ವಿವಿಯಲ್ಲಿ ಪಿಎಚ್‌ಡಿ ಅಧ್ಯಯನ ನಡೆಸುತ್ತಿದ್ದಾಗ ಇಂತಹ ತಾರಾಪುಂಜಗಳ ಮಹಾಸಮೂಹವೊಂದನ್ನು ಪತ್ತೆ ಹಚ್ಚಿದ್ದರು ಎಂದು ತಿಳಿಸಿದ ಸಾಂಖ್ಯಾಯನ, ಕ್ಷೀರಪಥ ಅಥವಾ ಆಕಾಶಗಂಗೆ ತಾರಾಪುಂಜಕ್ಕೆ ಸೇರಿರುವ ಭೂಮಿಯು ವಾಸ್ತವದಲ್ಲಿ ಲನಿಯಕಾ ಮಹಾಸಮೂಹದ ಭಾಗವೂ ಆಗಿದೆ ಎಂದರು.

ಈಗ ಪತ್ತೆಯಾಗಿರುವ ತಾರಾಪುಂಜಗಳ ಮಹಾಸಮೂಹವು ಭೂಮಿಯಿಂದ ತುಂಬ ದೂರದಲ್ಲಿದೆ ಮತ್ತು ಅಲ್ಲಿಂದ ಹೊರಟ ಬೆಳಕು ಭೂಮಿಯನ್ನು ತಲುಪಲು ಅತಿಯಾದ ಸಮಯವನ್ನು ತೆಗೆದುಕೊಂಡಿದೆ. ಹೀಗಾಗಿ ಈಗ ವಿಜ್ಞಾನಿಗಳು ಅಂದಿನ ತಾರಾಪುಂಜ ವನ್ನು ನೋಡುತ್ತಿದ್ದಾರೆ. ಇದು ಬ್ರಹ್ಮಾಂಡವು ಕೋಟ್ಯಂತರ ವರ್ಷಗಳ ಹಿಂದೆ ಹೇಗೆ ಇತ್ತು ಎನ್ನುವುದನ್ನು ತಿಳಿದುಕೊಳ್ಳಲು ನಮಗೆ ನೆರವಾಗಲಿದೆ. ಬ್ರಹ್ಮಾಂಡದ ವಿಸ್ತರಣೆಯ ಹಿಂದೆ ಡಾರ್ಕ್ ಎನರ್ಜಿ ಅಥವಾ ಕಪ್ಪು ಶಕ್ತಿ ಇದೆ ಎನ್ನುವುದು ಎಲ್ಲರಿಗೂ ಗೊತ್ತು, ಆದರೆ ವಾಸ್ತವದಲ್ಲಿ ಯಾರೂ ಅದನ್ನು ಪತ್ತೆ ಹಚ್ಚಿಲ್ಲ. ಆದರೆ ಆ ಬಗ್ಗೆ ಎಲ್ಲರೂ ಅಧ್ಯಯನ ನಡೆಸುತ್ತಿದ್ದಾರೆ. ಸರಸ್ವತಿಯ ಶೋಧವು ಈ ಕಪ್ಪು ಶಕ್ತಿಯನ್ನು ಮತ್ತು ಬ್ರಹ್ಮಾಂಡದ ವಿಸ್ತರಣೆಯಲ್ಲಿ ಅದರ ಪಾತ್ರವನ್ನು ತಿಳಿದುಕೊಳ್ಳಲು ನಮಗೆ ನೆರವಾಗಲಿದೆ ಎಂದು ಸಾಂಖ್ಯಾಯನ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X