Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 2 ವರ್ಷದ ಅವಧಿಯಲ್ಲಿ ಜಿಲ್ಲೆಯೊಳಗೆ...

2 ವರ್ಷದ ಅವಧಿಯಲ್ಲಿ ಜಿಲ್ಲೆಯೊಳಗೆ ಎಂದೆಂದೂ ಕಾಣದ ಅಭಿವೃದ್ಧಿ: ಎ.ಮಂಜು

ಮಾಜಿ ಪ್ರಧಾನಿಗೆ ಎ. ಮಂಜು ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ14 July 2017 7:53 PM IST
share
2 ವರ್ಷದ ಅವಧಿಯಲ್ಲಿ ಜಿಲ್ಲೆಯೊಳಗೆ ಎಂದೆಂದೂ ಕಾಣದ ಅಭಿವೃದ್ಧಿ: ಎ.ಮಂಜು

ಹಾಸನ, ಜು.14: ನನ್ನ ಎರಡು ವರ್ಷದ ಅಧಿಕಾವಧಿಯಲ್ಲಿ ಜಿಲ್ಲೆಯಲ್ಲಿ ಎಂದೆಂದೂ ಆಗದ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ತಿರುಗೇಟು ನೀಡಿದರು.
        
ತಾಲೂಕಿನ ಗೊರೂರು ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಅತಿಹೆಚ್ಚು ಅಧಿಕಾರ ಅನುಭವಿಸಿರುವ ಕುಟುಂಬ ಇದ್ದರೇ ಅದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬವಾಗಿದೆ. ಈಗಲಾದರೂ ಜಿಲ್ಲೆಯು ಅಭಿವೃದ್ಧಿಯಾಗಿಲ್ಲ ಎಂದು ಅವರೇ ಒಪ್ಪಿಕೊಂಡಿದ್ದಾರೆ. ಈ ಹಿಂದೆ ಎಂದು ಅಭಿವೃದ್ಧಿ ಆಗದ ಕೆಲಸವನ್ನು ನನ್ನ ಎರಡು ವರ್ಷದ ಅಧಿಕಾರವಧಿಯಲ್ಲಿ ಮಾಡಲಾಗಿದೆ ಎಂದು ಮಾತಿನ ಚಾಟಿ ಬೀಸಿದರು.

ಈ ಬಗ್ಗೆ ಅತಿ ಶೀಘ್ರದಲ್ಲಿಯೇ ಶ್ವೇತ ಪತ್ರ ಹೊರಡಿಸಲಾಗುವುದಾಗಿ ಹೇಳಿದರು. ಗೊರೂರಿನ ಪ್ರವಾಸಿ ಮಂದಿರದಲ್ಲಿಂದು ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ದೇವೇಗೌಡರು, ಮತ್ತು ಅವರ ಕುಟುಂಬ ಅನುಭವಿಸಿರುವಷ್ಟು ಅಧಿಕಾರವಧಿ ಸಿಕ್ಕಿಲ್ಲ. ಅವರೇ ಜಿಲ್ಲೆ ಅಭಿವೃದ್ಧಿಯಾಗಿಲ್ಲ ಎಂದು ಒಪ್ಪಿಕೊಂಡಿರುವುದಕ್ಕೆ ಧನ್ಯವಾದಗಳು. ಅವರು ಹಿರಿಯ ಮತ್ತು ಮುತ್ಸದ್ದಿ ರಾಜಕಾರಣಿಯಾಗಿದ್ದು, ನಮ್ಮಂತಹವರಿಗೆ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.

ಜಿಲ್ಲೆ ಅಭಿವೃದ್ಧಿಯಾಗಿಲ್ಲ. ಜಿಲ್ಲಾಡಳಿತ ಕುಸಿತ ಕಂಡಿದೆ ಎಂದು ನನ್ನ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ನನ್ನ ಎರಡು ವರ್ಷದ ಅಧಿಕಾವಧಿಯಲ್ಲಿ ಜಿಲ್ಲೆಯಲ್ಲಿ ಎಂದೆಂದೂ ಆಗದ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಜಿಲ್ಲಾಡಳಿತ ಎಂದೂ ಕೂಡ ಕುಸಿತ ಕಂಡಿಲ್ಲ. ಈ ವಿಚಾರವಾಗಿ ಅಧಿಕಾರಿಗಳು ಹೇಳಿದರೆ ನಾನು ತಕ್ಷಣವೇ ರಾಜಿನಾಮೆ ನೀಡುತ್ತೇನೆ ಎಂದು ಸವಾಲು ಹಾಕಿದರು. ಜಿಲ್ಲಾಡಳಿತ ಕುಸಿತ ಕಂಡಿದ್ದರೇ ಹಿರಿಯರಾದ ನೀವು ನನಗೆ ನಿರ್ದೇಶನ ನೀಡಬಹುದಿತ್ತು. ಆದರೇ ಈಗ ಮಾಡುತ್ತಿರುವುದು ಕೇವಲ ಚುನಾವಣೆಯನ್ನು ಮುಂದಿಟ್ಟುಕೊಂಡು ನಮ್ಮ ಮೇಲೆ ಇಲ್ಲ ಸಲ್ಲದ ಆರೋಪವನ್ನು ಮಾಡುವುದು ಕಂಡು ಬರುತ್ತಿದೆ ಎಂದರು.

ದೇವೇಗೌಡರು ಮುಖ್ಯ ಮಂತ್ರಿಯಾಗಿ, ಪ್ರಧಾನಿಯಾಗಿ, ಅವರ ಮಕ್ಕಳು ಮುಖ್ಯ ಮಂತ್ರಿಯಾಗಿ ಜಿಲ್ಲೆಯನ್ನು ಅಭಿವೃದ್ಧಿಪಡಿಸಲಾಗದೇ ಇದ್ದವರು ಈಗ ಅಭಿವೃದ್ಧಿ ಪಡಿಸಲಾಗುತ್ತದೆಯೇ? ಎಂದು ಪ್ರಶ್ನಿಸಿದ ಎ. ಮಂಜು, ಇವರ ಅವಧಿಯಲ್ಲಿ ಕೇವಲ ಹೊಳೆನರಸೀಪುರ ಅಭಿವೃದ್ಧಿಗೆ ಮಾತ್ರ ಸೀಮಿತವಾಗಿತ್ತು. ಈಗ ಮಾತನಾಡುವ ದೇವೆಗೌಡರು, ಅವಕಾಶ ಸಿಕ್ಕಿದಾಗ ಜಿಲ್ಲೆಯನ್ನು ಯಾಕೆ ಅಭಿವೃದ್ಧಿ ಮಾಡಲಿಲ್ಲ ಎಂದು ಪ್ರಶ್ನೆ ಮಾಡಿದರು. ಅಭಿವೃದ್ಧಿಗೆ ನಾನು ಬಂದಾಗ ಅದಕ್ಕೆ ಸ್ವಾಗತಿಸಬೇಕು ಎಂದು ಹೇಳಿದರು.
ಇದೆ ವೇಳೆ ಹೇಮಾವತಿ ಜಲಾಶಯದ ಇಂಜಿನಿಯರ್ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X