Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಜಿನ್ನಾ ಚಿತ್ರದ ಬಸ್'ಗೆ ಬೆಂಕಿ ಹಚ್ಚಿ,...

'ಜಿನ್ನಾ ಚಿತ್ರದ ಬಸ್'ಗೆ ಬೆಂಕಿ ಹಚ್ಚಿ, ಬಸ್ ಮಾಲಕನನ್ನು ಕೊಲ್ಲಹೊರಟ ಸಂಘಪರಿವಾರದ ಮಂದಿ!

ನಿಜವಾಗಿ ನಡೆದದ್ದೇನು?

ವಾರ್ತಾಭಾರತಿವಾರ್ತಾಭಾರತಿ14 July 2017 8:22 PM IST
share
ಜಿನ್ನಾ ಚಿತ್ರದ ಬಸ್ಗೆ ಬೆಂಕಿ ಹಚ್ಚಿ, ಬಸ್ ಮಾಲಕನನ್ನು ಕೊಲ್ಲಹೊರಟ ಸಂಘಪರಿವಾರದ ಮಂದಿ!

ಬೆಂಗಳೂರು, ಜು.14: ಮುಹಮ್ಮದ್ ಅಲಿ ಜಿನ್ನಾ ಚಿತ್ರ ಅಂಟಿಸಿರುವ ಬಸ್ಸೊಂದು ಬೆಂಗಳೂರು ನಗರದಲ್ಲಿ ಓಡಾಡುತ್ತಿದೆ ಎನ್ನುವ ಫೋಟೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ಬಗ್ಗೆ ನಮೋ ಬ್ರಿಗೇಡ್ ನ ನೀರಜ್ ಕಾಮತ್ ಎಂಬವನು ಟ್ವಿಟ್ಟರ್ ನಲ್ಲಿ ಪೋಸ್ಟೊಂದನ್ನು ಮಾಡಿದ್ದು, 1000ಕ್ಕೂ ಹೆಚ್ಚು ಶೇರ್ ಆಗಿತ್ತು. ಇಷ್ಟೇ ಅಲ್ಲದೆ ಪೋಸ್ಟ್ ಕಾರ್ಡ್ ನ್ಯೂಸ್ ನ ಅಭಿಷೇಕ್ ಸಿಂಗ್ ಎಂಬಾತ, "ಇದರ ವಿರುದ್ಧ ನಿಮ್ಮಲ್ಲಿ ಎಷ್ಟು ಮಂದಿ ಹೋರಾಟ ನಡೆಸುತ್ತೀರಿ. ಈ ಬಸ್ ಮಾಲಕನನ್ನು ಇರಿದು ಕೊಂದು ಬಸ್ಸನ್ನು ಹೊತ್ತಿಸುವ ಪ್ರತಿಜ್ಞೆಯನ್ನು ಎಷ್ಟು ಮಂದಿ ಮಾಡುತ್ತೀರಿ” ಎಂದು ಪ್ರಶ್ನಿಸಿ ಪ್ರಚೋದಿಸಿದ್ದ.

ಆದರೆ ಈ ಸುದ್ದಿಯ ಹಿಂದಿನ ಅಸಲಿಯತ್ತನ್ನು ಆಲ್ಟ್ ನ್ಯೂಸ್ (altnews.in) ಬಹಿರಂಗಪಡಿಸಿದೆ.

ಈ ಫೋಟೊ ವೈರಲ್ ಆಗುತ್ತಿದ್ದಂತೆ ಸಂಘಪರಿವಾರದ ಮಂದಿ ಈ ಸುದ್ದಿಯ ಹಿಂದಿನ ಸತ್ಯಾಸತ್ಯತೆಯನ್ನೂ ಅರಿಯುವ ಗೋಜಿಗೆ ಹೋಗದೆ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸತೊಡಗಿದರು. ನಂತರ ಈ ಸುದ್ದಿಯನ್ನು ಸಂಘಪರಿವಾರದ ಹಲವು ವೆಬ್ ಸೈಟ್ ಗಳು ಪ್ರಕಟಿಸಿದವು.

ವಾಸ್ತವವೇನು?:

ಬೆಂಗಳೂರಿನಲ್ಲಿ ಓಡಾಡಿದ ಈ ಬಸ್ ಮಲಯಾಳಂ ಚಲನಚಿತ್ರ “ಆಭಾಸಂ”ನ ಚಿತ್ರೀಕರಣಕ್ಕಾಗಿ ಬಳಸಲಾಗಿತ್ತು. ಈ ಚಿತ್ರದ ಚಿತ್ರೀಕರಣ ನಗರದಲ್ಲಿ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿನ್ನಾ ಚಿತ್ರವಿರುವ ಬಸ್ ನಗರದ ರಸ್ತೆಗಳಲ್ಲಿ ಓಡಾಡಿತ್ತು. ಈ ಬಗ್ಗೆ ಆಲ್ಟ್ ನ್ಯೂಸ್ (altnews.in)  ಚಿತ್ರತಂಡದ ಜೊತೆ ಮಾತನಾಡಿದ್ದು, ಚಿತ್ರತಂಡ ಕೂಡ ಇದನ್ನು ಸ್ಪಷ್ಟಪಡಿಸಿದೆ.

ಆದರೆ ಒಂದು ವಿಷಯದ ಸತ್ಯಾಸತ್ಯತೆಯನ್ನೂ ಅರಿಯದ ದುಷ್ಕರ್ಮಿಗಳು ಕೊಲ್ಲುವ, ಬೆಂಕಿ ಹಚ್ಚುವ, ಪ್ರತಿಭಟಿಸುವ ಅಪಾಯಕಾರಿ ಚಟುವಟಿಕೆಗಳಿಗೆ ಅಮಾಯಕರನ್ನು ಪ್ರೇರೇಪಿಸುವುದು ವಿಪರ್ಯಾಸವೇ ಸರಿ.

Bus With Muhammad Ali Jinnah's Photo In Bengaluru @CPBlr @narendramodi @HMOIndia @CMofKarnataka @KirenRijiju @PTI_News @republic @TimesNow pic.twitter.com/gAYPE8naEq

— Neeraj Kamath C (@kamathneeraj) 13 July 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X