Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಮೊದಲ ಸೌರಶಕ್ತಿ ರೈಲು ಆರಂಭ

ಭಾರತದ ಮೊದಲ ಸೌರಶಕ್ತಿ ರೈಲು ಆರಂಭ

ವಾರ್ತಾಭಾರತಿವಾರ್ತಾಭಾರತಿ14 July 2017 8:50 PM IST
share
ಭಾರತದ ಮೊದಲ ಸೌರಶಕ್ತಿ ರೈಲು ಆರಂಭ

ಹೊಸದಿಲ್ಲಿ, ಜು. 13: ದೇಶದ ಮೊದಲ ಸೌರ ಶಕ್ತಿ ಹೊಂದಿದ ಡೆಮು ರೈಲು (ಡೀಸೆಲ್ ಎಲೆಕ್ಟಿಕಲ್ ಮಲ್ಟಿಪಲ್ ಯೂನಿಟ್)ನ್ನು ಭಾರತೀಯ ರೈಲ್ವೇ ಇಂದು ಲೋಕಾರ್ಪಣೆಗೊಳಿಸಿತು. ಡೆಮು ಬೋಗಿಯ ಮಾಡಿಗೆ ಅಳವಡಿಸಲಾದ ಸೌರ ಫಲಕಗಳು ಬೋಗಿಗಳ ಲೈಟ್, ಫ್ಯಾನ್ ಹಾಗೂ ಪ್ರದರ್ಶನ ವ್ಯವಸ್ಥೆಗಳಿಗೆ ಬೇಕಾದ ಸಂಪೂರ್ಣ ವಿದ್ಯುತ್ ಒದಗಿಸುತ್ತದೆ.

ಈ ರೈಲು ದಿಲ್ಲಿಯ ಸರೈ ರೋಹಿಲ್ಲಾದಿಂದ ಹರ್ಯಾಣದ ಫಾರೂಕ್ ನಗರದ ವರೆಗೆ ಸಂಚರಿಸಲಿದೆ. ಈ ರೈಲಿನಲ್ಲಿ ಒಟ್ಟು 16 ಸೌರ ಫಲಕಗಳಿವೆ. ಪ್ರತಿ ಫಲಕ 300 ಡಬ್ಲು. ಪಿ. ವಿದ್ಯುತ್ ಉತ್ಪಾದಿಸಲಿದೆ. ಇದನ್ನು ಆರು ಬೋಗಿಗಳಿಗೆ ಅಳವಡಿಸಲಾಗಿದೆ. ಮೇಕ್ ಇನ್ ಇಂಡಿಯಾ ಯೋಜನೆಯಲ್ಲಿ 54 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಸೌರ ಫಲಕಗಳನ್ನು ಉತ್ಪಾದಿಸಲಾಗಿದೆ. ರೈಲ್ವೇ ಗ್ರಿಡ್‌ಗಳಿಗೆ ಸೌರ ಫಲಕಗಳನ್ನು ಅಳವಡಿಸುವುದು ಜಗತ್ತಿನಲ್ಲಿ ಇದೇ ಮೊದಲು. ಕಳೆದ ವರ್ಷ ರೈಲ್ವೇ ಬಜೆಟ್ ಸಂದರ್ಭ, ರೈಲ್ವೇ ಸಚಿವ ಸುರೇಶ್ ಪ್ರಭು, ಮುಂದಿನ ಐದು ವರ್ಷಗಳಲ್ಲಿ ರೈಲ್ವೇ 1 ಸಾವಿರ ಮೆಗಾವ್ಯಾಟ್ ಸೌರ ಶಕ್ತಿ ಉತ್ಪಾದಿಸಲಿದೆ ಎಂದು ಹೇಳಿದ್ದರು.

ಸೌರ ಶಕ್ತಿ ಹೊಂದಿದ ಈ ಡೆಮು ರೈಲು ಯೋಜನೆಯ ಭಾಗ. ಶುದ್ದ ಹಾಗೂ ಮರುಬಳಕೆಯ ಇಂಧನಕ್ಕೆ ಉತ್ತೇಜನ ನೀಡಲು ಭಾರತೀಯ ರೈಲ್ವೇ ಬದ್ಧವಾಗಿದೆ ಎಂದು ಸೌರ ಶಕ್ತಿ ಹೊಂದಿದ ರೈಲನ್ನು ಲೋಕಾರ್ಪಣೆಗೊಳಿಸುವ ಸಂದರ್ಭ ಸುರೇಶ್ ಪ್ರಭು ಹೇಳಿದ್ದಾರೆ. ಇಂತಹ 50ಕ್ಕೂ ಹೆಚ್ಚು ಬೋಗಿಗಳನ್ನು ಪರಿಚಯಿಸಲು ರೈಲ್ವೇ ಯೋಜನೆ ರೂಪಿಸಿದೆ.

ಈ ಯೋಜನೆ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾದರೆ, ಭಾರತೀಯ ರೈಲ್ವೇಗೆ 700 ಸಾವಿರ ಕೋಟಿ ರೂ. ಲಾಭವಾಗಲಿದೆ ಎಂದು ಭಾರತೀಯ ರೈಲ್ವೇಯ ಪರ್ಯಾಯ ಇಂಧನಕ್ಕಿರುವ ಸಂಘಟನೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದರ್ ಗುಪ್ತಾ ಹೇಳದ್ದಾರೆ. ಇದರಿಂದ ರೈಲ್ವೇ ಮಂದಿನ 25 ವರ್ಷಗಳಲ್ಲಿ 5.25 ಲಕ್ಷ ಲೀಟರ್ ಡೀಸೆಲ್ ಉಳಿಸಲಿದೆ. ಇದೇ ಅವಧಿಯಲ್ಲಿ ಒಂದು ರೈಲಿನಿಂದ 3 ಕೋಟಿ ರೂ. ಉಳಿತಾಯವಾಗಲಿದೆ. 25 ವರ್ಷಗಳಲ್ಲಿ 1,350 ಟನ್ ಕಾರ್ಬನ್ ಡಯಾಕ್ಸೈಡ್ ಬಿಡುಗಡೆಯಾಗುವುದು ಕಡಿಮೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X