Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕವಿ ಬಿ.ಎ.ಸನದಿಗೆ ದಶಮಾನೋತ್ಸವ ಗೌರವ

ಕವಿ ಬಿ.ಎ.ಸನದಿಗೆ ದಶಮಾನೋತ್ಸವ ಗೌರವ

ವಾರ್ತಾಭಾರತಿವಾರ್ತಾಭಾರತಿ14 July 2017 10:55 PM IST
share
ಕವಿ ಬಿ.ಎ.ಸನದಿಗೆ ದಶಮಾನೋತ್ಸವ ಗೌರವ

ಉಡುಪಿ, ಜು.14: ಪ್ರೀತಿಯೆಂಬುದು ಒಂದು ಪ್ರಶಸ್ತ ಚುಂಬಕ ಶಕ್ತಿ. ವ್ಯಕ್ತಿಯ ವ್ಯಕ್ತಿತ್ವದ ಮೇಲೆ, ಅವನ ಕೆಲಸ-ಸಾಧನೆಗಳ ಮೇಲೆ ಇಂತಹ ಪ್ರೀತಿ ಗೌರವವೇ ನಮ್ಮನ್ನು ಪರಸ್ಪರ ಸೆಳೆಯುತ್ತವೆ ಎಂದು ಪಂಪ ಪ್ರಶಸ್ತಿ ಪುರಸ್ಕೃತ ಕವಿ, ಆಕಾಶವಾಣಿ ಮಾಧ್ಯಮದ ಹಿರಿಯ ಚೇತನ ಬಿ.ಎ ಸನದಿ ಹೇಳಿದ್ದಾರೆ.

ಪತ್ರಕರ್ತರ ವೇದಿಕೆ ಬೆಂಗಳೂರು ಇದರ ಉಡುಪಿ ಜಿಲ್ಲಾ ಘಟಕದ ವತಿಯಿಂದ ‘ಹಿರಿಯರೆಡೆಗೆ ನಮ್ಮ ನಡಿಗೆ’ ಕಾರ್ಯಕ್ರಮದ ದಶಮಾನೋತ್ಸವ ಪ್ರಯುಕ್ತ ಕೊಡಮಾಡಲಾದ ಗೌರವವನ್ನು ಗುರುವಾರ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

ನನಗೆ ಭಾಷೆಯ ಮೇಲೆ ಪ್ರೀತಿ ಇದೆ. ಆದರೆ ಭಾಷಾ ವ್ಯಾಮೋಹವಿರಲಿಲ್ಲ. ಹೀಗಾಗಿ ಆಯಾ ಭಾಷೆಯ ಜನರೊಡನೆ ಅವರ ಭಾಷೆಯಲ್ಲಿ ಪ್ರೀತಿ ವಿಶ್ವಾಸ ಹಂಚಿಕೊಳ್ಳುವುದು ಸಾಧ್ಯವಾಯಿತು. ಸಾಮರಸ್ಯದ ಬದುಕೇ ಅತ್ಯಂತ ಶ್ರೇಷ್ಠ ಎಂದವರು ನುಡಿದರು.

ಸನದಿ ಅವರನ್ನು ಗೌರವಿಸಿ ಮಾತನಾಡಿದ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಸಾಹಿತ್ಯದಲ್ಲಿ ಕೀರ್ತಿಗಳಿಸಿದ ಸನದಿ ಅವರು ಜನರ ಮನಸ್ಸಿನಲ್ಲಿ ಉಳಿಯುವ ಕೆಲಸಗಳನ್ನು ಮಾಡಿದ್ದಾರೆ. ಇಂತಹ ವ್ಯಕ್ತಿ ಗಳನ್ನು ಗೌರವಿಸುವುದೇ ಒಂದು ಸಾರ್ಥಕ್ಯದ ಕ್ಷಣ. ಅವರು ನೂರು ಕಾಲ ಬಾಳಲಿ ಎಂದು ಶುಭಹಾರೈಸಿದರು.

ಪ್ರಾದೇಶಿಕ ಭಾಷೆಗಳ ಬಗೆಗಿನ ಕೀಳರಿಮೆ ಸಲ್ಲದು. ನೆಲದ ಭಾಷೆ, ಜಲದ ಭಾಷೆ, ಮನಸ್ಸಿನ ಭಾಷೆಗೆ ಹೆಚ್ಚಿನ ಗೌರವ ಸಿಗಬೇಕು. ಸನದಿ ಈ ನಿಟ್ಟಿನಲ್ಲಿ ವಿಶಿಷ್ಟವಾಗಿ ಆಲೋಚಿಸಿದವರು ಎಂದು ಅತಿಥಿಗಳಾಗಿದ್ದ ಪಂಚನಬೆಟ್ಟು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎ.ನರಸಿಂಹ ಹೇಳಿದರು.

ವೇದಿಕೆಯ ಜಿಲ್ಲಾಧ್ಯಕ್ಷ ಹಾಗೂ ಸಂಘಟಕ ಶೇಖರ ಅಜೆಕಾರು ಮಾತನಾಡಿ, ಸನದಿ ಮಾನವ್ಯ ಕವಿ. ಅವರು ತಾವು ಹೇಳಿದ್ದನ್ನು ಹಾಗೂ ವಿಶ್ವ ಮಾನದ ವಿಚಾರ-ತತ್ವಗಳನ್ನು ತಮ್ಮ ಬದುಕಲ್ಲಿ ಬದುಕಿ ತೋರಿಸಿದ್ದಾರೆ ಎಂದರು.

ಪ್ರಾಧ್ಯಾಪಕ ಮಂಜಪ್ಪ ದ್ಯಾ. ಗೋಣಿ ಪ್ರಾಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮ ನಿರೂಪಿಸಿದರೆ, ಕುಂದಾಪ್ರ ಡಾಟ್‌ಕಾಮ್ ಸಂಪಾದಕ ಸುನೀಲ್ ಬೈಂದೂರು, ನಜಿರಾ ಸನದಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X