Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಾಳೆ ಭಾರತಕ್ಕೆ ನ್ಯೂಝಿಲೆಂಡ್ ವಿರುದ್ಧ...

ನಾಳೆ ಭಾರತಕ್ಕೆ ನ್ಯೂಝಿಲೆಂಡ್ ವಿರುದ್ಧ ಮಾಡು-ಮಡಿ ಪಂದ್ಯ

ಮಹಿಳೆಯರ ಐಸಿಸಿ ವಿಶ್ವಕಪ್

ವಾರ್ತಾಭಾರತಿವಾರ್ತಾಭಾರತಿ14 July 2017 11:31 PM IST
share
ನಾಳೆ ಭಾರತಕ್ಕೆ ನ್ಯೂಝಿಲೆಂಡ್ ವಿರುದ್ಧ ಮಾಡು-ಮಡಿ ಪಂದ್ಯ

ಲಂಡನ್, ಜು.14: ಮಹಿಳೆಯರ ಐಸಿಸಿ ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕ ಹಾಗೂ ಆಸ್ಟ್ರೇಲಿಯ ವಿರುದ್ಧದ ಕಳೆದೆರಡು ಪಂದ್ಯಗಳಲ್ಲಿ ಸೋತಿರುವ ಮಿಥಾಲಿ ರಾಜ್ ನೇತೃತ್ವದ ಭಾರತ ತಂಡದ ಸೆಮಿ ಫೈನಲ್ ಹಾದಿ ದುರ್ಗಮವಾಗಿದ್ದು, ಶನಿವಾರ ನ್ಯೂಝಿಲೆಂಡ್ ವಿರುದ್ಧದ ಪಂದ್ಯವನ್ನು ಗೆಲ್ಲಲೇಬೇಕಾಗಿದೆ. ಈ ಪಂದ್ಯ ಕ್ವಾರ್ಟರ್ ಫೈನಲ್ ಸ್ವರೂಪ ಪಡೆದಿದೆ.

ಟೂರ್ನಿಯಲ್ಲಿ ಆತಿಥೇಯ ಇಂಗ್ಲೆಂಡ್, ಪಾಕಿಸ್ತಾನ, ವೆಸ್ಟ್‌ಇಂಡೀಸ್ ಹಾಗೂ ಶ್ರೀಲಂಕಾ ವಿರುದ್ಧ ಸತತ 4 ಪಂದ್ಯಗಳನ್ನು ಜಯಿಸಿದ್ಧ ಭಾರತದ ಗೆಲುವಿನ ಓಟಕ್ಕೆ ದಕ್ಷಿಣ ಆಫ್ರಿಕ ಬ್ರೇಕ್ ಹಾಕಿತ್ತು. ಬ್ರಿಸ್ಟೊಲ್‌ನಲ್ಲಿ ಆಸ್ಟ್ರೇಲಿಯ ವಿರುದ್ಧ ನಿರ್ಣಾಯಕ ಪಂದ್ಯದಲ್ಲಿ 8 ವಿಕೆಟ್‌ಗಳಿಂದ ಸೋತಿರುವ ಭಾರತ ಹಿನ್ನಡೆ ಕಂಡಿದೆ.

ಶನಿವಾರ ನಡೆಯಲಿರುವ ಪಂದ್ಯದಲ್ಲಿ ಗೆಲ್ಲುವ ತಂಡ ಸೆಮಿ ಫೈನಲ್‌ಗೆ ಅರ್ಹತೆ ಪಡೆಯಲಿದೆ. ಆತಿಥೇಯ ಇಂಗ್ಲೆಂಡ್, ದಕ್ಷಿಣ ಆಫ್ರಿಕ ಹಾಗೂ ಹಾಲಿ ಚಾಂಪಿಯನ್ ಆಸ್ಟ್ರೇಲಿಯ ಈಗಾಗಲೇ ಸೆಮಿ ಫೈನಲ್ ಸ್ಥಾನವನ್ನು ದೃಢಪಡಿಸಿವೆ.

ಆಸ್ಟ್ರೇಲಿಯ ವಿರುದ್ಧದ ಪಂದ್ಯದಲ್ಲಿ ಪೂನಂ ರಾವತ್ ಹೋರಾಟಕಾರಿ ಶತಕ ಹಾಗೂ ನಾಯಕಿ ಮಿಥಾಲಿ ರಾಜ್(69ರನ್) ದಾಖಲೆಯ ಅರ್ಧಶತಕದ ಹೊರತಾಗಿಯೂ ಎದುರಾಳಿ ತಂಡಕ್ಕೆ ದೊಡ್ಡ ಸವಾಲು ವಿಧಿಸಲು ವಿಫಲವಾಯಿತು. ಆಸೀಸ್ ವಿರುದ್ಧ ನಿಧಾನ ಬ್ಯಾಟಿಂಗ್‌ಗೆ ಒತ್ತು ನೀಡಿರುವುದು ದುಬಾರಿಯಾಗಿ ಪರಿಣಮಿಸಿತು. ಸ್ಮತಿ ಮಂಧಾನಾ ಬೇಗನೆ ಔಟಾದಾಗ ನಾಯಕಿ ರಾಜ್ ಹಾಗೂ ಪೂನಂ ಎಚ್ಚರಿಕೆಯ ಬ್ಯಾಟಿಂಗ್ ಮಾಡಿದರು.

  69 ರನ್ ಗಳಿಸಲು 114 ಎಸೆತ ಎದುರಿಸಿದ್ದ ಮಿಥಾಲಿ ಏಕದಿನ ಕ್ರಿಕೆಟ್‌ನಲ್ಲಿ 6,000ಕ್ಕೂ ಅಧಿಕ ರನ್ ಗಳಿಸಿದ ವಿಶ್ವದ ಮೊದಲ ಆಟಗಾರ್ತಿ ಎನಿಸಿಕೊಂಡಿದ್ದರು.

ಬೌಲಿಂಗ್ ವಿಭಾಗದಲ್ಲಿ ವೇಗದ ಬೌಲರ್ ಜುಲನ್ ಗೋಸ್ವಾಮಿ ಟೂರ್ನಿಯಲ್ಲಿ ಈತನಕ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಸ್ಪಿನ್ನರ್‌ಗಳಾದ ದೀಪ್ತಿ, ಏಕ್ತಾ ಬಿಷ್ಟ್, ಹರ್ಮನ್‌ಪ್ರೀತ್ ಕೌರ್ ಹಾಗೂ ಪೂನಮ್ ರಾವತ್ ಬೌಲಿಂಗ್ ಜವಾಬ್ದಾರಿ ಹಂಚಿಕೊಂಡಿದ್ದಾರೆ.

ಭಾರತದಂತೆಯೇ ನ್ಯೂಝಿಲೆಂಡ್ ಕೂಡ ಮಾಡು-ಮಡಿ ಪರಿಸ್ಥಿತಿಯನ್ನು ಎದುರಿಸುತ್ತಿದೆೆ. 8 ಪಂದ್ಯಗಳಲ್ಲಿ 7 ಅಂಕ ಗಳಿಸಿರುವ ಕಿವೀಸ್ ಅಂಕಪಟ್ಟಿಯಲ್ಲಿ ಐದನೆ ಸ್ಥಾನದಲ್ಲಿದೆ. ನ್ಯೂಝಿಲೆಂಡ್ ಕಳೆದ ಪಂದ್ಯದಲ್ಲಿ ಇಂಗ್ಲೆಂಡ್‌ನ ವಿರುದ್ಧ 75 ರನ್ ಸೋತಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X