Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತತ್ಕಾಲ್ ಟಿಕೆಟ್ ಕಾದಿರಿಸುವಿಕೆ ನಿಯಮ...

ತತ್ಕಾಲ್ ಟಿಕೆಟ್ ಕಾದಿರಿಸುವಿಕೆ ನಿಯಮ ಬದಲಾಗಿಲ್ಲ : ರೈಲ್ವೇ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ15 July 2017 6:40 PM IST
share
ತತ್ಕಾಲ್ ಟಿಕೆಟ್ ಕಾದಿರಿಸುವಿಕೆ ನಿಯಮ ಬದಲಾಗಿಲ್ಲ : ರೈಲ್ವೇ ಸ್ಪಷ್ಟನೆ

ಹೊಸದಿಲ್ಲಿ, ಜು.15: ಜುಲೈ 1, 2017ರಿಂದ ರೈಲ್ವೇ ಟಿಕೆಟ್ ಮುಂಗಡ ಕಾದಿರಿಸುವ ನಿಯಮದಲ್ಲಿ (ತತ್ಕಾಲ್ ಸೇರಿದಂತೆ)ಬದಲಾವಣೆ ಆಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಕೆಲವು ವೆಬ್‌ಸೈಟ್‌ಗಳಲ್ಲಿ ಪ್ರಕಟವಾಗಿರುವ ಸುದ್ದಿಯ ಬಗ್ಗೆ ಸ್ಪಷ್ಟನೆ ನೀಡಿರುವ ರೈಲ್ವೇ ಇಲಾಖೆ, ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದೆ.

   ಭಾರತೀಯ ರೈಲ್ವೇ ಇಲಾಖೆಯ ನಿಯಮಗಳಲ್ಲಿ ಕೆಲವು ಬದಲಾವಣೆಗಳಾಗಿವೆೆ ಹಾಗೂ ಹೊಸ ಸೌಲಭ್ಯಗಳನ್ನು ರೂಪಿಸಲಾಗಿದ್ದು ಇವು ಜುಲೈ 1ರಿಂದ ಜಾರಿಗೆ ಬರಲಿವೆ ಎಂದು ವಿವಿಧ ಸಾಮಾಜಿಕ ಮಾಧ್ಯಮಗಳು, ವಾಟ್ಸಾಪ್ ಗುಂಪುಗಳು ಮತ್ತು ಕೆಲವು ವೆಬ್‌ಸೈಟ್‌ಗಳಲ್ಲಿ ಪ್ರಸಾರವಾಗುತ್ತಿರುವ ವರದಿ ಆಧಾರರಹಿತ ಮತ್ತು ಸಂಪೂರ್ಣ ತಪ್ಪು ಸುದ್ದಿ ಎಂದು ರೈಲ್ವೇ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಅಲ್ಲದೆ ತತ್ಕಾಲ್ ಮುಂಗಡ ಕಾದಿರಿಸುವಿಕೆ ಮತ್ತು ರದ್ದುಪಡಿಸುವಿಕೆ ಕುರಿತ ಹಾಲಿ ನಿಯಮವನ್ನು ಮತ್ತೊಮ್ಮೆ ಪ್ರಕಟಿಸಿದೆ.

  ತತ್ಕಾಲ್ ಟಿಕೆಟ್ ಮುಂಗಡ ಕಾಯ್ದಿರಿಸುವವರಿಗೆ, ಎ.ಸಿ.ವರ್ಗದ ಟಿಕೆಟ್ ಬುಕ್ಕಿಂಗ್ ಸಮಯ ಬೆಳಿಗ್ಗೆ 10 ಗಂಟೆಗೆ ಆರಂಭವಾಗುತ್ತದೆ ಮತ್ತು ಎ.ಸಿ. ರಹಿತ ವರ್ಗದ ಟಿಕೆಟ್ ಬುಕ್ಕಿಂಗ್ ಸಮಯ ಬೆಳಿಗ್ಗೆ 11ಕ್ಕೆ ಆರಂಭವಾಗುತ್ತದೆ.(ಪ್ರಯಾಣದ ದಿನ ಹೊರತುಪಡಿಸಿ, ಒಂದು ದಿನ ಮುಂಚಿತವಾಗಿ). ಈ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಮತ್ತು ಇದೇ ವ್ಯವಸ್ಥೆ ಮುಂದುವರಿಯುತ್ತದೆ .

 ತತ್ಕಾಲ್ ಟಿಕೆಟ್‌ಗಳಿಗೆ ಅನ್ವಯವಾಗುವ ಮರುಪಾವತಿ ನಿಯಮದಲ್ಲೂ ಯಾವುದೇ ಬದಲಾವಣೆ ಇರುವುದಿಲ್ಲ. ಟಿಕೆಟ್ ಖಚಿತಗೊಂಡ (ಕನ್‌ಫರ್ಮ್) ಬಳಿಕ ಟಿಕೆಟ್ ರದ್ದುಗೊಳಿಸಿದರೆ ಯಾವುದೇ ಹಣ ಪಾವತಿ ಮಾಡಲಾಗುವುದಿಲ್ಲ. ಒಂದು ಪಿಎನ್‌ಆರ್(ಪ್ಯಾಸೆಂಜರ್ ನೇಮ್ ರೆಕಾರ್ಡ್)ನಲ್ಲಿ ಗರಿಷ್ಠ ನಾಲ್ಕು ಪ್ರಯಾಣಿಕರು ತತ್ಕಾಲ್-ಇ ಟಿಕೆಟ್ ಕಾಯ್ದಿರಿಸಬಹುದು. ಪ್ರಯಾಣಿಕರಿಗೆ ಸಾಮಾನ್ಯ ಟಿಕೆಟ್ ದರದ ಜೊತೆ ತತ್ಕಾಲ್ ಶುಲ್ಕ ವಿಧಿಸಲಾಗುತ್ತದೆ. 2014ರ ಅಕ್ಟೋಬರ್‌ನಿಂದ ಆಯ್ದ ಕೆಲವು ರೈಲುಗಳಲ್ಲಿ ‘ಪ್ರೀಮಿಯಂ ತತ್ಕಾಲ್ ’ ವ್ಯವಸ್ಥೆ ಅನುಷ್ಠಾನಗೊಳಿಸಲಾಗಿದೆ ಎಂದು ರೈಲ್ವೇ ಇಲಾಖೆಯ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X