ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ, ಜು.15: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮೂಲಕ ಅಂಗವಿಕಲರಿಗಾಗಿ ಗ್ರಾಮೀಣ ಪುನರ್ವಸತಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದ್ದು, ಈ ಮೂಲಕ ಗ್ರಾಮೀಣ ಪ್ರದೇಶ ದಲ್ಲಿ ಈಗಾಗಲೇ ಗ್ರಾಪಂಗೆ ಒಬ್ಬರಂತೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ರನ್ನು ನೇಮಕ ಮಾಡಲಾಗುವುದು.
ಇಲಾಖೆಯ ಎಲ್ಲಾ ಯೋಜನೆಗಳನ್ನು ಪ್ರತಿಯೊಬ್ಬ ಅಂಗವಿಕಲರಿಗೂ/ಪೋಷಕರಿಗೂ ತಲುಪಿಸುವಲ್ಲಿ ಶ್ರಮಿಸಲಾಗುತ್ತಿದ್ದು, 2017-18ನೇ ಸಾಲಿನಿಂದ ಉಡುಪಿ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ ಮೂವರು, ಪುರಸಭೆ ಮತ್ತು ಪಟ್ಟಣ ಪಂಚಾಯತ್ಗಳಲ್ಲಿ ತಲಾ ಒಬ್ಬರಂತೆ ಮಾಸಿಕ 3000 ರೂ. ಗೌರವಧನದ ನೆಲೆಯಲ್ಲಿ ‘ನಗರ ಪುನರ್ವಸತಿ ಕಾರ್ಯಕರ್ತ’ರ ನೇಮಕಾತಿಗಾಗಿ ಅರ್ಹ ವಿಕಲಚೇತನರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹತ್ತನೇ ತರಗತಿ ಉತ್ತೀರ್ಣ/ಅನುತ್ತೀರ್ಣರಾಗಿದ್ದು, ಶೇ.40ಕ್ಕಿಂತ ಮೇಲ್ಪಟ್ಟು ವಿಕಲತೆ ಇರುವ ಬಗ್ಗೆ ವೈದ್ಯಕೀಯ ಪ್ರಾಧಿಕಾರದಿಂದ ನೀಡಲ್ಪಟ್ಟಿರುವ ವಿಕಲಚೇತನರ ಗುರುತಿನ ಚೀಟಿ ಮತ್ತು ವೈದ್ಯಕೀಯ ಪ್ರಮಾಣಪತ್ರ ಹೊಂದಿರುವ ವಿಕಲಚೇತನರು ತಮ್ಮ ವಾಸಸ್ಥಳದ ದೃಢೀಕರಣ ಪತ್ರ ಹಾಗೂ 3 ಪಾಸ್ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀ ಕರಣ ಇಲಾಖೆ, ರಜತಾದ್ರಿ, ಮಣಿಪಾಲ ಉಡುಪಿ ಜಿಲ್ಲೆ ಇವರಿಗೆ ಜು.30ರೊ ಳಗೆ ಅರ್ಜಿ ಸಲ್ಲಿಸಬಹುದು.
ನಗರಸಭೆ ಮತ್ತು ಪುರಸಭೆಗಳ ಮುಖ್ಯಸ್ಥರ ಅಧ್ಯಕ್ಷತೆಯಲ್ಲಿ ನಡೆಯುವ ಆಯ್ಕೆ ಸಮಿತಿಯ ಮೂಲಕ ನಗರ ಪುನರ್ವಸತಿ ಕಾರ್ಯಕರ್ತರನ್ನು ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿ ಕಾರಿಗಳ ಕಚೇರಿ ದೂರವಾಣಿ ಸಂಖ್ಯೆ:0820-2574810/811 ಅಥವಾ ಆಯಾ ತಾಲೂಕಿನ ತಾಲೂಕು ಪಂಚಾಯತ್ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.







