Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕ್ರೈಸ್ತರು ಸರಕಾರದ ಯೋಜನೆಗಳನ್ನು...

ಕ್ರೈಸ್ತರು ಸರಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ

ವಾರ್ತಾಭಾರತಿವಾರ್ತಾಭಾರತಿ16 July 2017 4:11 PM IST
share
ಕ್ರೈಸ್ತರು ಸರಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ

ಬಣಕಲ್, ಜು.16: ಸರಕಾರ ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದ ಮೂಲಕ ಕ್ರೈಸ್ತರಿಗಾಗಿ ವಿವಿಧ ಯೋಜನೆಗಳನ್ನು ಮಂಜೂರು ಮಾಡಿದ್ದು, ಕ್ರೈಸ್ತರು ಇದರ ಅರಿವಿನ ಕೊರತೆಯಿಂದ ಅಲೆದಾಡುತ್ತಿದ್ದಾರೆ. ಹಾಗಾಗಿ ಇಲಾಖೆಯಿಂದ ಕ್ರೈಸ್ತರಿಗೆ ನೇರ ಮಾಹಿತಿ ನೀಡುತ್ತಿದ್ದೇವೆ. ಅಲ್ಪಸಂಖ್ಯಾತ ಅಭಿವೃಧ್ದಿ ನಿಗಮದಿಂದ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕ ತಿಪ್ಪೇಸ್ವಾಮಿ ಹೇಳಿದರು.

ಅವರು ಬಣಕಲ್ ಬಾಲಿಕ ಮರಿಯ ಚರ್ಚ್‌ನಲ್ಲಿ ಹಮ್ಮಿಕೊಂಡಿದ್ದ ಸರಕಾರದ ಯೋಜನೆಗಳ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ನಿಗಮದಿಂದ ವಿದ್ಯಾರ್ಥಿ ವೇತನ, ವಿದ್ಯಾಸಿರಿ ಯೋಜನೆ, ವಿದ್ಯಾರ್ಥಿ ನಿಲಯಗಳು, ಮೊರಾರ್ಜಿ ವಸತಿ ಶಾಲಾ ಯೋಜನೆಯ ಸೌಲಭ್ಯ, ಐಟಿಐ, ಡಿಪ್ಲೋಮ ವಿದ್ಯಾರ್ಥಿಗಳಿಗೆ ಅನುದಾನ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತರಬೇತಿ ಯೋಜನೆ, ಕಾನೂನು ಪದವೀಧರರಿಗೆ ಶಿಷ್ಯವೇತನ, ಬಿದಾಯಿ ಯೋಜನೆ, ಸಮುದಾಯ ಭವನ ನಿರ್ಮಾಣ ಯೋಜನೆ, ಚರ್ಚ್ ದುರಸ್ಥಿ ಮತ್ತು ನವೀಕರಣ, ಕ್ರೈಸ್ತ ಸಮುದಾಯದ ಅಭಿವೃಧ್ದಿ ಯೋಜನೆಗಳು ಅನುಷ್ಠಾನದಲ್ಲಿದ್ದು, ಕ್ರೈಸ್ತರು ಪ್ರಯೋಜನ ಪಡೆಯಲು ಸಲಹೆ ಮಾಡಿದರು.

ಮಲೆನಾಡು ಕ್ರೈಸ್ತರ ಸಂಘದ ಅಧ್ಯಕ್ಷ ಹಾಗೂ ಅಲ್ಪಸಂಖ್ಯಾತ ಕ್ರೈಸ್ತರ ಮಾರ್ಗದರ್ಶಿ ಜೇಮ್ಸ್ ಡಿಸೋಜ ಮಾತನಾಡಿ, ಸರಕಾರದ ಯೋಜನೆಗಳು ಮಾಹಿತಿಯ ಕೊರತೆಯಿಂದ ಸರಕಾರಕ್ಕೆ ವಾಪಾಸ್ ಹೋಗಬಾರದು. ಅವುಗಳನ್ನು ನಮ್ಮ ಸಮುದಾಯದವರು ಪ್ರಯೋಜನ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಕ್ರೈಸ್ತ ಧರ್ಮಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ನೀಡಲಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಮಾಹಿತಿ ನೀಡಿದರು.

ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಪ್ರ.ದರ್ಜೆ ಸಹಾಯಕ ರಾಜಪ್ಪ ಮಾತನಾಡಿ, ಗಂಗಾಕಲ್ಯಾಣ ಯೋಜನೆ ಅಂದರೆ ನೂತನವಾಗಿ ಮದುವೆಯಾಗುವವರಿಗೆ ಅವರ ಮದುವೆಯ ದಾಖಲೆ ತೋರಿಸಿ ಅನುದಾನ ಪಡೆಯಬಹುದಾಗಿದೆ. ವಿದ್ಯಾಸಿರಿ ಯೋಜನೆಯಲ್ಲಿ ಬಿಎಸ್ಸಿ ನರ್ಸಿಂಗ್ ಮತ್ತು ಎಎನ್‌ಎಂ ಕೋರ್ಸ್ ಮಾಡುವವರಿಗೆ 35 ಸಾವಿರದವರೆಗೂ ನಿರ್ವಹಣ ವೆಚ್ಚ ನೀಡಲಾಗುತ್ತದೆ. ಎಲ್ಲಾ ಯೋಜನೆಗಳಿಗೂ ಆ.10 ಕೊನೆಯ ದಿನವಾಗಿದೆ. ಯಾವುದೇ ಯೋಜನೆಗಳ ಸಂಪೂರ್ಣ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08262-220443/220036/220065 ಅಥವಾ ಮಲೆನಾಡು ಕ್ರೈಸ್ತ ಸಂಘದ ಅಧ್ಯಕ್ಷರಾದ ಜೇಮ್ಸ್ ಡಿಸೋಜ 9449162788 ಅವರಿಗೆ ಸಂಪರ್ಕಿಸಬಹುದು ಎಂದು ರಾಜಪ್ಪ ಹೇಳಿದರು.

ಅಲ್ಪಸಂಖ್ಯಾತ ಕ್ರೈಸ್ತರ ಯೋಜನೆಗಳ ಮಾಹಿತಿ ಕಾರ್ಯಕ್ರಮದಲ್ಲಿ ದ್ವಿತೀಯ ದರ್ಜೆ ಸಹಾಯಕ ವಿ.ಎಚ್.ರಮೇಶ್, ತಾಲೂಕು ಮಾಹಿತಿ ಕೇಂದ್ರದ ಅತಾವು ರೆಹಮಾನ್, ಸಿಬ್ಬಂದಿಗಳಾದ ಅತೀಫ್, ಇಜಾಝ್ಅಹಮ್ಮದ್, ಬಣಕಲ್ ಧರ್ಮಗುರು ಪಾದರ್ ಆಲ್ಬರ್ಟ್ ಡಿಸಿಲ್ವ ಮತ್ತಿತರರಿದ್ದರು. ಪಾದರ್ ಆಲ್ಬರ್ಟ್ ಡಿಸಿಲ್ವ ಸ್ವಾಗತಿಸಿ ವಂದಿಸಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X