Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗು ಜಿಲ್ಲೆಗೆ ಪ್ರತ್ಯೇಕ...

ಕೊಡಗು ಜಿಲ್ಲೆಗೆ ಪ್ರತ್ಯೇಕ ವಿಶ್ವವಿದ್ಯಾನಿಲಯ: ಪ್ರೊ. ಕೆ.ಬೈರಪ್ಪ

ವಾರ್ತಾಭಾರತಿವಾರ್ತಾಭಾರತಿ16 July 2017 4:34 PM IST
share
ಕೊಡಗು ಜಿಲ್ಲೆಗೆ ಪ್ರತ್ಯೇಕ ವಿಶ್ವವಿದ್ಯಾನಿಲಯ: ಪ್ರೊ. ಕೆ.ಬೈರಪ್ಪ

ಮಡಿಕೇರಿ ಜು.16 : ಮುಂದಿನ ವರ್ಷಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಪ್ರತ್ಯೇಕ ವಿಶ್ವವಿದ್ಯಾನಿಲಯ ಸ್ಥಾಪನೆಯಾಗಬೇಕಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಪ್ರೊ. ಕೆ.ಬೈರಪ್ಪ ಸಲಹೆ ನೀಡಿದ್ದಾರೆ.

ಕೂರ್ಗ್ ಎಜುಕೇಷನ್ ಟ್ರಸ್ಟ್‌ನ ವತಿಯಿಂದ ನಗರದದಲ್ಲಿ ಆರಂಭಿಸಿರುವ ಕೂರ್ಗ್ ಇನ್ಸ್‌ಟಿಟ್ಯೂಟ್ ಆಫ್ ಹಾಸ್ಟಿಟಾಲಿಟಿ ಸೈನ್ಸ್ ಕೋರ್ಸ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಬೆಂಗಳೂರು, ಮೈಸೂರು, ಮಂಗಳೂರನ್ನು ಅವಲಂಭಿಸಬೇಕಾಗಿದ್ದ ಸನ್ನಿವೇಶದ ನಡುವೆ ಕೊಡಗು ಜಿಲ್ಲೆಯ ಚಿಕ್ಕಳುವಾರದಲ್ಲಿ ಸ್ನಾತಕೋತ್ತರ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಕಳೆದ ಮೂರು ವರ್ಷಗಳ ಹಿಂದೆ ಕಾರ್ಯಾರಂಭಗೊಂಡಿರುವ ಈ ಕೇಂದ್ರ ಅಗತ್ಯ ಮೂಲಭೂತ ಸೌಲಭ್ಯಗಳೊಂದಿಗೆ ಉತ್ತಮ ಕೇಂದ್ರವಾಗಿ ರೂಪುಗೊಳ್ಳುತ್ತಿದೆ. ಇದರೊಂದಿಗೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಇನ್ನಷ್ಟು ಕಾಲೇಜುಗಳು ಪ್ರಾರಂಭವಾಗಬೇಕು ಎಂದರು.

ಶೈಕ್ಷಣಿಕವಾಗಿ ಜಿಲ್ಲೆ ಮುಂದಿನ ದಿನಗಳಲ್ಲಿ ಇನ್ನಷ್ಟು ಬೆಳೆದರೆ ಕೊಡಗಿಗೆ ಪ್ರತ್ಯೇಕ ವಿಶ್ವವಿದ್ಯಾಲಯ ಹೊಂದಿಕೊಳ್ಳಲು ಅವಕಾಶ ಇದೆ. ಈ ನಿಟ್ಟಿನಲ್ಲಿ ಇನ್ನಷ್ಟು ಹೊಸ ಕಾಲೇಜುಗಳು ಬರಬೇಕಿದೆ. ಜಿಲ್ಲೆ ಇತ್ತೀಚಿನ ವರ್ಷಗಳಲ್ಲಿ ಉತ್ತಮ ಶಿಕ್ಷಣ ಕೇಂದ್ರವಾಗಿ ಪ್ರಗತಿ ಕಾಣುತ್ತಿದೆ. ಹಾಸ್ಟಿಟಾಲಿಟಿ ಸೈನ್ಸ್ ಮೂಲಕ ಉದ್ಯಮಶೀಲತಾ ತರಬೇತಿಯ ಪ್ರಯತ್ನ ಸ್ವಾಗತಾರ್ಹ ಎಂದು ಅವರು ಅಭಿಪ್ರಾಯಪಟ್ಟರು.

ಅತಿಥಿ ಸತ್ಕಾರಕ್ಕೆ ಜಿಲ್ಲೆ ಹೆಸರಾಗಿದೆ. ಇಲ್ಲಿನ ಜನತೆಯ ಈ ಮನೋಭಾವನೆಯಿಂದಲೇ ಕೊಡಗಿನಲ್ಲಿ ಪ್ರವಾಸೋದ್ಯಮ ಕ್ಷಿಪ್ರಗತಿಯಲ್ಲಿ ಬೆಳೆದಿದೆ. ಪ್ರವಾಸೋದ್ಯಮದ ಬೆಳವಣಿಗೆಯ ನಡುವೆ ಕೊಡಗಿನ ನೈಜ್ಯತೆ, ಪರಿಸರವೂ ಸಂರಕ್ಷಣೆಯಾಗಬೇಕು. ಇದಕ್ಕೆ ಯಾವುದೇ ಧಕ್ಕೆಯಾಗದಂತಹ ಮಾರ್ಗದರ್ಶನವನ್ನೂ ಈ ಮೂಲಕ ನೀಡಬೇಕು ಎಂದು ಪ್ರೊ. ಕೆ. ಬೈರಪ್ಪ ಸಲಹೆ ನೀಡಿದರು. ನೂತನ ಶಿಕ್ಷಣ ಸಂಸ್ಥೆ ಪ್ರವಾಸಿ ಕೇಂದ್ರ ಮಡಿಕೇರಿಗೆ ಹೊಸತೊಂದು ಗರಿ ಎಂದ ಅವರು, ಸಂಸ್ಥೆಯಲ್ಲಿನ ವ್ಯವಸ್ಥೆಯ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಮಾತನಾಡಿ, ಯಾವುದೇ ಉದ್ಯಮಕ್ಕೆ ಕೌಶಲ್ಯ ಅಭಿವೃದ್ಧಿ ಅತ್ಯಗತ್ಯ. ಕೊಡಗು ಅತಿಥಿ ಸತ್ಕಾರಕ್ಕೆ ಹೆಸರಾಗಿದೆ. ಉತ್ತಮ ತರಬೇತಿಯೊಂದಿಗೆ ಉದ್ಯೋಗದಲ್ಲಿ ತೊಡಗಿದರೆ ಇನ್ನಷ್ಟು ಪ್ರಗತಿ ಸಾಧ್ಯ ಎಂದರು.

ಕೂರ್ಗ್ ಎಜುಕೇಷನ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ.ಕನ್ನಂಡ ನಿರ್ಮಲಾ ಸೋಮಣ್ಣ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟಿಗಳಾದ ಮಂಡೇಪಂಡ ರತನ್ ಕುಟ್ಟಯ್ಯ, ಅಪ್ಪಾರಂಡ ವೇಣು, ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X