Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗಾಳಿ-ಬೆಳಕಿನಂತೆ ಭೂಮಿ ಎಲ್ಲರಿಗೂ ಸಿಗಲಿ:...

ಗಾಳಿ-ಬೆಳಕಿನಂತೆ ಭೂಮಿ ಎಲ್ಲರಿಗೂ ಸಿಗಲಿ: ಚೆನ್ನಮ್ಮ ಹಳ್ಳಿಕೆರೆ

ವಾರ್ತಾಭಾರತಿವಾರ್ತಾಭಾರತಿ16 July 2017 7:23 PM IST
share

ಬೆಂಗಳೂರು, ಜು. 16: ಜಗತ್ತಿನಲ್ಲಿರುವ ಎಲ್ಲರಿಗೂ ಗಾಳಿ-ಬೆಳಕು ಸಿಗುವಂತೆ ಸ್ವಾಭಿಮಾನದ ಬದುಕಿಗೆ ಪ್ರತಿಯೊಬ್ಬರಿಗೂ ಭೂಮಿಯ ಹಕ್ಕು ಸಿಗಬೇಕು ಎಂದು ಸ್ವಾತಂತ್ರ ಹೋರಾಟಗಾರ್ತಿ ಚೆನ್ನಮ್ಮ ಹಳ್ಳಿಕೆರೆ ಅಭಿಪ್ರಾಯಿಸಿದ್ದಾರೆ.

ರವಿವಾರ ದೂರದರ್ಶನ ಕೇಂದ್ರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ನೃತ್ಯಗೀತ ನಮನ-2017-ಕನ್ನಡ ದೇಶಭಕ್ತಿ ಗೀತೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನತೆಯ ಮೂಲಭೂತ ಅಗತ್ಯಗಳಲ್ಲಿ ಭೂಮಿ ಅತಿಮುಖ್ಯವಾದುದ್ದೆಂದು ತಿಳಿಸಿದರು.

ಪ್ರತಿಯೊಬ್ಬರಿಗೂ ಭೂಮಿ ಸಿಗಬೇಕೆಂದು ಒತ್ತಾಯಿಸಿ ಸಮಾಜ ಸುಧಾರಕ ವಿನೋಬಾ ಭಾವೆ ಸುಮಾರು 16ವರ್ಷ ದೇಶಾದ್ಯಂತ ಸುತ್ತಾಡಿದರು. ಅವರ ಜೊತೆಯಲ್ಲಿ ನಾನು ಆರು ವರ್ಷ ಸುತ್ತಾಡಿ ದೇಶದ ಆಗು ಹೋಗುಗಳನ್ನು ಪರಿಚಯಿಸಿಕೊಂಡೆ. ಈ ಹೋರಾಟದ ಫಲವಾಗಿ ಬಡಜನತೆಗೆ ಲಕ್ಷಾಂತರ ಎಕರೆ ದೊರಕುವಂತಾಯಿತು ಎಂದು ಅವರು ಸ್ಮರಿಸಿದರು.

ಜೈಲು ಅನುಭವವೇ ಸ್ಫೂರ್ತಿ: ನಮ್ಮದು ಸ್ವಾತಂತ್ರ ಹೋರಾಟಗಾರರ ಕುಟುಂಬ. ನನ್ನ ತಾಯಿ ಜೈಲಿಗೆ ಹೋಗುವಾಗ ನನಗೆ 2ವರ್ಷ. ಜೈಲಿನಲ್ಲಿದ್ದ ಹಿರಿಯ ಸ್ವಾತಂತ್ರ ಹೋರಾಟಗಾರರ ಜೀವನ ಗಾಥೆಯನ್ನು ಕೇಳುತ್ತಲೆ ಬೆಳೆದೆ. ಹೀಗಾಗಿ ನನ್ನ ಬದುಕಿಗೆ ಜೈಲಿನ ಅನುಭವವೇ ಸ್ಫೂರ್ತಿಯಾಯಿತು ಎಂದು ಅವರು ಹೇಳಿದರು.

ನನ್ನ ಇಡೀ ಬದುಕು ಕೇವಲ ದೇಶಕ್ಕೆ ಸಮರ್ಪಿತವೆಂದು 12ನೆ ವಯಸ್ಸಿನಲ್ಲಿ ನಿರ್ಧರಿಸಿದೆ. ಅಲ್ಲಿಂದ ಹಿರಿಯ ಸ್ವಾತಂತ್ರ ಹೋರಾಟಗಾರರ ಜೊತೆ ಬೆರೆತೆ. ವಿನೋಬಾ ಭಾವೆ ಜೊತೆಗಿನ ಒಡನಾಟ ನನ್ನ ಸಾಮಾಜಿಕ ಬದುಕಿನ ಸ್ಪಷ್ಟತೆ ಸಿಕ್ಕಿತು. ಅಲ್ಲಿಂದ ಇಲ್ಲಿಯವರೆಗೂ ಸಾಮಾಜಿಕ ಬದುಕು ಸಾಗುತ್ತಾ ಬರುತ್ತಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ನಾಡೋಜ ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ, ದೂರದರ್ಶನ ಕೇಂದ್ರದ ಹೆಚ್ಚುವರಿ ಮಹಾ ನಿರ್ದೇಶಕ ಡಾ.ಮಹೇಶ್‌ಜೋಶಿ ಮತ್ತಿತರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X