Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಳೆಯಿಂದ ಮುಂಗಾರು ಅಧಿವೇಶನ

ನಾಳೆಯಿಂದ ಮುಂಗಾರು ಅಧಿವೇಶನ

ಗೋರಕ್ಷಕರ ಹಿಂಸಾಚಾರ, ಜಿಎಸ್‌ಟಿ ಬಗ್ಗೆ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜು

ವಾರ್ತಾಭಾರತಿವಾರ್ತಾಭಾರತಿ16 July 2017 9:32 PM IST
share
ನಾಳೆಯಿಂದ ಮುಂಗಾರು ಅಧಿವೇಶನ

 ಗೋಹತ್ಯೆ ನಿಷೇಧ ಅಧಿಸೂಚನೆಗೆ ಪ್ರತಿಭಟನೆಯ ಸಾಧ್ಯತೆ.

ಕಾಶ್ಮೀರ ಉದ್ವಿಗ್ನತೆ, ಸಿಕ್ಕಿಂ ಗಡಿ ಬಿಕ್ಕಟ್ಟು ಕೂಡಾ ಚರ್ಚೆಯಾಗುವ ನಿರೀಕ್ಷೆ

ಹೊಸದಿಲ್ಲಿ, ಜು.16: ಸಂಸತ್‌ನ ಮುಂಗಾರು ಅಧಿವೇಶನ ಸೋಮವಾರ ಆರಂಭಗೊಳ್ಳಲಿದ್ದು, ಗೋರಕ್ಷಕರಿಂದ ನರಹತ್ಯೆ ಹಾಗೂ ಹಿಂಸಾಚಾರದ ಘಟನೆಗಳು, ಕಾಶ್ಮೀರದ ಉದ್ವಿಗ್ನ ಪರಿಸ್ಥಿತಿ,ಚೀನಾದ ಜೊತೆ ಗಡಿ ಬಿಕ್ಕಟ್ಟು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಪ್ರತಿಪಕ್ಷಗಳು ಒಗ್ಗಟ್ಟಾಗಿ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸನ್ನದ್ಧವಾಗಿದೆ. ಇದರೊಂದಿಗೆ ಮುಂಗಾರು ಅಧಿವೇಶನವು ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವೆ ತೀವ್ರ ಜಟಾಪಟಿಗೆ ಸಾಕ್ಷಿಯಾಗುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ.

 ಆಗಸ್ಟ್ 11ರವರೆಗೆ ನಡೆಯಲಿರುವ ಮುಂಗಾರುವ ಅಧಿವೇಶನದಲ್ಲಿ ಜಿಎಸ್‌ಟಿಯಿಂದ ಉದ್ಯಮರಂಗ ಹಾಗೂ ಗ್ರಾಹಕರ ಮೇಲಾದ ಪ್ರತಿಕೂಲ ಪರಿಣಾಮಗಳು, ರೈತರ ಆತ್ಮಹತ್ಯೆ, ಬರ ಹಾಗೂ ಪಾಕಿಸ್ತಾನದ ಜೊತೆಗಿನ ವಿದೇಶಾಂಗ ನೀತಿ ಇತ್ಯಾದಿ ವಿಷಯಗಳ ಬಗ್ಗೆಯೂ ಕಾವೇರಿದ ಚರ್ಚೆ ನಡೆಯುವ ಸಾಧ್ಯತೆಗಳಿವೆ.

  ಕೇಂದ್ರ ಸರಕಾರ ಹೊರಡಿಸಿರುವ ಗೋಹತ್ಯೆ ನಿಷೇಧ ಅಧಿಸೂಚನೆ ಬಗ್ಗೆ ಕೆಲವು ಪಕ್ಷಗಳು ಉಭಯ ಸದನಗಳಲ್ಲೂ ಬಲವಾದ ವಿರೋಧ ವ್ಯಕ್ತಪಡಿಸುವ  ನಿರೀಕ್ಷೆಯಿದೆ.

‘‘ಗೋರಕ್ಷಣೆಯ ಹೆಸರಿನಲ್ಲಿ ನರಹತ್ಯೆ ಹಾಗೂ ಹಲ್ಲೆ ಪ್ರಕರಣಗಳು ಸಾಮಾಜಿಕ ಸೌಹಾರ್ದತೆಗೆ ಧಕ್ಕೆಯುಂಟು ಮಾಡಿದ್ದು, ಅವನ್ನು ತಡೆಗಟ್ಟುವ ನಿಟ್ಟಿನಲ್ಲಿ ಯಾವ ಪ್ರಯತ್ನಗಳನ್ನು ಕೈಗೊಳ್ಳಲಾಗಿದೆಯೆಂಬ ಬಗ್ಗೆ ಕೇಂದ್ರ ಸರಕಾರದಿಂದ ಪ್ರತಿಪಕ್ಷಗಳು ಉತ್ತರವನ್ನು ಕೋರಲಿದೆ’’ ಎಂದು ಸಿಪಿಐ ನಾಯಕ ಡಿ. ರಾಜಾ ತಿಳಿಸಿದ್ದಾರೆ.

ಮುಂಗಾರು ಅಧಿವೇಶನದಲ್ಲಿ ಕೆಲವು ಪ್ರಮುಖ ವಿಷಯಗಳಿಗೆ ಸಂಬಂಧಿಸಿ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳಲು 18 ಪ್ರತಿಪಕ್ಷಗಳು ಈ ಬಾರಿ ಒಂದೇ ವೇದಿಕೆಯಡಿ ಒಗ್ಗೂಡಿರುವುದು ಗಮನಾರ್ಹವಾಗಿದೆ. ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿ ಈ ಪಕ್ಷಗಳು ಒಗ್ಗೂಡಿವೆ. ಇದೀಗ ಅವು ತಮ್ಮ ಏಕತೆಯನ್ನು ಸಂಸತ್‌ನಲ್ಲಿಯೂ ಪ್ರದರ್ಶಿಸಲು ನಿರ್ಧರಿಸಿರುವುದು ಕೇಂದ್ರ ಸರಕಾರದ ಪಾಲಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸುವ ಸಾಧ್ಯತೆಯಿದೆ ಎಂದು ರಾಜಕೀಯ ವೀಕ್ಷಕರು ಅಭಿಪ್ರಾಯಿಸಿದ್ದಾರೆ.

   ಕೆಲವು ಹಾಲಿ ಸಂಸತ್ ಸದಸ್ಯರ ನಿಧನದ ಹಿನ್ನೆಲೆಯಲ್ಲಿ ಮುಂಗಾರು ಅಧಿವೇಶನದ ಆರಂಭದ ದಿನವಾದ ಸೋಮವಾರ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮವಷ್ಟೇ ಇರಲಿದ್ದು, ಅಂದು ದೈನಂದಿನ ಕಲಾಪಗಳು ನಡೆಯುವುದಿಲ್ಲ.

ರಾಜ್ಯಸಭಾ ಸದಸ್ಯರಾದ ಮಾಜಿ ಕೇಂದ್ರ ಸಚಿವ ಅನಿಲ್ ಮಾಧವ್ ದವೆ ಹಾಗೂ ಕಾಂಗ್ರೆಸ್ ಸದಸ್ಯ ಪಲವಿ ಗೋವರ್ಧನ ರೆಡ್ಡಿ ಅವರು ಬಜೆಟ್ ಅಧಿವೇಶನದ ಬಳಿಕ ನಿಧನರಾಗಿದ್ದರು. ಗುರುದಾಸ್‌ಪುರದ ಬಿಜೆಪಿ ಸಂಸದ ವಿನೋದ್ ಖನ್ನಾ ಕೂಡಾ ಈ ಅವಧಿಯಲ್ಲಿ ಮೃತಪಟ್ಟಿದ್ದರು.

 ಅಸ್ಸಾಂ ಹಾಗೂ ಇತರ ಈಶಾನ್ಯ ರಾಜ್ಯಗಳಲ್ಲಿನ ಪ್ರವಾಹ ಪರಿಸ್ಥಿತಿ, ಗೂರ್ಖಾಲ್ಯಾಂಡ್ ಹಿಂಸಾಚಾರ, ನೋಟು ನಿಷೇಧದ ದುಷ್ಪರಿಣಾಮ, ಉದ್ಯೋಗ ನಷ್ಟ ಹಾಗೂ ಸಾರ್ವಜನಿಕರಂಗದ ಸಂಸ್ಥೆಗಳಲ್ಲಿ ಸರಕಾರದ ಹೂಡಿಕೆ ಹಿಂತೆಗೆತ ಬಗ್ಗೆಯೂ ಸಂಸತ್‌ನಲ್ಲಿ ರ್ಚೆಯಾಗುವ ಸಾಧ್ಯತೆಯಿದೆ.

 ಪ್ರಧಾನಿಯವರ ಚೊಚ್ಚಲ ಇಸ್ರೇಲ್ ಭೇಟಿ ಕೂಡಾ ಅಧಿವೇಶನದಲ್ಲಿ ಚರ್ಚೆಯ ವಿಷಯವಾಗುವ ಸಾಧ್ಯತೆಯಿದೆಯೆಂದು ಪ್ರತಿಪಕ್ಷ ಮೂಲಗಳು ತಿಳಿಸಿವೆ.

ಮುಂಗಾರು ಅಧಿವೇಶನದಲ್ಲಿ ಹಲವಾರು ವಿಧೇಯಕಗಳು ಸಂಸತ್‌ನ ಅಂಗೀಕಾರ ಪಡೆಯಲು ಸಾಲುಗಟ್ಟಿನಿಂತಿವೆ. ಭಾರತೀಯ ಮಾಹಿತಿ ತಂತ್ರಜ್ಞಾನ ವಿಧೇಯಕ 2017. ಸ್ಥಿರಾಸ್ತಿ ಸ್ವಾಧೀನ ತಿದ್ದುಪಡಿ ವಿಧೇಯಕ 2917, ಪುರಾತನ ಸ್ಮಾರಕಗಳು ಹಾಗೂ ಪುರಾತತ್ವ ನಿವೇಶನಗಳು ಹಾಗೂ ಪಳೆಯುಳಿಕೆಗಳ ವಿಧೇಯಕ 2017, ಲೋಕಸಭೆಯಲ್ಲಿ ಮಂಡನೆಯಾಗಲಿರುವ ಪ್ರಮುಖ ವಿಧೇಯಕಗಳಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X