Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರದ ಈ ಸರಕಾರಿ ಕಚೇರಿಯ ಉದ್ಯೋಗಿಗಳು...

ಬಿಹಾರದ ಈ ಸರಕಾರಿ ಕಚೇರಿಯ ಉದ್ಯೋಗಿಗಳು ಹೆಲ್ಮೆಟ್ ಧರಿಸಿಕೊಂಡೇ ಕೆಲಸ ಮಾಡುತ್ತಾರೆ!

ವಾರ್ತಾಭಾರತಿವಾರ್ತಾಭಾರತಿ17 July 2017 4:29 PM IST
share
ಬಿಹಾರದ ಈ ಸರಕಾರಿ ಕಚೇರಿಯ ಉದ್ಯೋಗಿಗಳು ಹೆಲ್ಮೆಟ್ ಧರಿಸಿಕೊಂಡೇ ಕೆಲಸ ಮಾಡುತ್ತಾರೆ!

ಪಾಟ್ನಾ,ಜು.17: ಬೈಕ್‌ಗಳನ್ನು ಓಡಿಸುವಾಗ ಅಥವಾ ಕಟ್ಟಡ ನಿರ್ಮಾಣ ಕಾಮಗಾರಿ ಗಳಲ್ಲಿ ತೊಡಗಿರುವಾಗ ತಲೆಯ ರಕ್ಷಣೆಗಾಗಿ ಹೆಲ್ಮೆಟ್‌ಗಳನ್ನು ಧರಿಸುವುದು ಸಾಮಾನ್ಯ. ಆದರೆ ಕಚೇರಿಯಲ್ಲಿ ಖುರ್ಚಿಯಲ್ಲಿ ಕುಳಿತುಕೊಂಡು ಕೆಲಸ ಮಾಡುವಾಗಲೂ ರಕ್ಷಣೆಗೆ ಹೆಲ್ಮೆಟ್ ಧರಿಸುವುದೆಂದರೆ? ಹೌದು, ಇಂತಹ ಸಂಗತಿಗಳು ಭಾರತದಲ್ಲಿ ಮಾತ್ರ ನಡೆಯುತ್ತವೆ!

  ಅದ್ಯಾವ ಜನ್ಮದಲ್ಲಿ ಹರಕೆ ಹೇಳಿಕೊಂಡಿದ್ದರೋ ಗೊತ್ತಿಲ್ಲ.....ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿರುವ ಸರಕಾರಿ ಕಚೇರಿಯ ಉದ್ಯೋಗಿಗಳು ದಿನವಿಡೀ ಹೆಲ್ಮೆಟ್ ಧರಿಸಿಕೊಂಡೇ ಕೆಲಸ ಮಾಡುತ್ತಾರೆ. ಹಾಗೆಂದು ಅವರೆಲ್ಲ ಬೈಕರ್‌ಗಳು ಅಥವಾ ಸಾಹಸಗಳನ್ನು ಮಾಡಲು ಆಸಕ್ತರು ಎಂದರ್ಥವಲ್ಲ. ಕಚೇರಿಯ ಛಾವಣಿಯಿಂದ ಸೋರುತ್ತಿರುವ ನೀರಿನಿಂದ ಪಾರಾಗಲು ಅವರೆಲ್ಲ ಹೆಲ್ಮೆಟ್ ಧರಿಸುತ್ತಿದ್ದಾರೆ. ಅಲ್ಲದೆ ಛಾವಣಿಯ ಸಿಮೆಂಟ್ ತುಂಡು ಯಾವಾಗ ಬೇಕಾದರೂ ಉದುರಿ ತಲೆಯ ಮೇಲೆ ಬೀಳಬಹುದಾದ್ದರಿಂದ ಸಂಭಾವ್ಯ ಅವಘಡದಿಂದಲೂ ಹೆಲ್ಮೆಟ್ ಅವರಿಗೆ ರಕ್ಷಣೆ ನೀಡುತ್ತಿದೆ.

ಉದ್ಯೋಗಿಗಳು ಮಾತ್ರವಲ್ಲ, ಈ ಕಚೇರಿಗೆ ಕೆಲಸಕಾರ್ಯಗಳಿಗಾಗಿ ಬರುವ ರ್ಸಾಜನಿಕರಿಗೂ ಇದರ ಹಣೆಬರಹ ಗೊತ್ತಿರುವುದರಿಂದ ತಮ್ಮ ತಲೆಗಳ ರಕ್ಷಣೆಗಾಗಿ ಹೆಲ್ಮೆಟ್ ಧರಿಸಿಕೊಂಡೇ ಒಳಗಡಿಯಿಡುತ್ತಾರೆ.

‘‘ಈಗಾಗಲೇ ಛಾವಣಿಯ ಭಾಗಗಳು ಕಳಚಿ ಬಿದ್ದು ಹಲವಾರು ಉದ್ಯೋಗಿಗಳು ಗಾಯಗೊಂಡಿದ್ದಾರೆ. ಹೀಗಾಗಿ ಕನಿಷ್ಠ ಪಕ್ಷ ತಲೆಗಳ ಸುರಕ್ಷತೆಗಾದರೂ ಹೆಲ್ಮೆಟ್ ಧರಿಸಿಕೊಂಡೇ ಕೆಲಸ ಮಾಡಲು ನಾವೆಲ್ಲ ನಿರ್ಧರಿಸಿದ್ದೇವೆ ’’ಎನ್ನುತ್ತಾರೆ ಕಚೇರಿಯಲ್ಲಿ ಭೂದಾಖಲೆಗಳ ವಿಭಾಗವನ್ನು ನೋಡಿಕೊಳ್ಳುತ್ತಿರುವ ಲಲ್ಲನ್ ಮತ್ತು ಪರ್ವೇಜ್ ಅಹ್ಮದ್.

‘‘ಇದು ತುಂಬ ಹಳೆಯ ಕಟ್ಟಡವಾಗಿದೆ. ಗೋಡೆಗಳು ಮತ್ತು ಛಾವಣಿ ತೀರ ಹದಗೆಟ್ಟಿದ ಸ್ಥಿತಿಯಲ್ಲಿವೆ. ಮಳೆ ಬಿದ್ದ ತಕ್ಷಣ ಒಳಗೆಲ್ಲ ನೀರು ಸೋರತೊಡಗುತ್ತದೆ. ಛಾವಣಿ ಯಾವತ್ತಾದರೊಂದು ದಿನ ಕುಸಿದು ಬೀಳುವುದು ಗ್ಯಾರಂಟಿ. ಹಾಗೆಂದು ನಾವು ಕೆಲಸಕ್ಕೆ ಗೈರುಹಾಜರಾಗುವಂತಿಲ್ಲವಲ್ಲ. ಅದಕ್ಕಾಗಿ ಸುರಕ್ಷತಾ ಕ್ರಮವಾಗಿ ಹೆಲ್ಮೆಟ್ ಧರಿಸುತ್ತಿದ್ದೇವೆ ’’ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X