Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಷ್ಟ್ರಪತಿ ಚುನಾವಣೆಗೆ ಮತದಾನ...

ರಾಷ್ಟ್ರಪತಿ ಚುನಾವಣೆಗೆ ಮತದಾನ ಅಂತ್ಯ,20ರಂದು ಫಲಿತಾಂಶ

ವಾರ್ತಾಭಾರತಿವಾರ್ತಾಭಾರತಿ17 July 2017 8:28 PM IST
share
ರಾಷ್ಟ್ರಪತಿ ಚುನಾವಣೆಗೆ ಮತದಾನ ಅಂತ್ಯ,20ರಂದು ಫಲಿತಾಂಶ

ಹೊಸದಿಲ್ಲಿ,ಜು.17: ಭಾರತದ 14ನೇ ರಾಷ್ಟ್ರಪತಿಯ ಆಯ್ಕೆಗಾಗಿ ಸೋಮವಾರ ದೇಶಾದ್ಯಂತ ಸಂಸದರು ಮತ್ತು ಶಾಸಕರು ಮತದಾನವನ್ನು ಮಾಡಿದರು. ಲೆಕ್ಕಾಚಾರದಂತೆ ಎನ್‌ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರು ಸಾಕಷ್ಟು ಮತಗಳ ಅಂತರದಿಂದ ಪ್ರತಿಪಕ್ಷ ಅಭ್ಯರ್ಥಿ ಮೀರಾ ಕುಮಾರ್ ಅವರನ್ನು ಪರಾಭವಗೊಳಿಸುವ ಸಾಧ್ಯತೆಗಳು ನಿಚ್ಚಳವಾಗಿವೆ.

ಜ.25ರಂದು ಹುದ್ದೆಯಿಂದ ನಿರ್ಗಮಿಸಲಿರುವ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರ ಉತ್ತರಾಧಿಕಾರಿಯ ಆಯ್ಕೆಗಾಗಿ ದಿಲ್ಲಿಯ ಸಂಸತ್ ಭವನ ಮತ್ತು ರಾಜ್ಯ ವಿಧಾನಸಭೆ ಗಳಲ್ಲಿ ಬೆಳಿಗ್ಗೆ 10 ಗಂಟೆಗೆ ಏಕಕಾಲದಲ್ಲಿ ಆರಂಭಗೊಂಡಿದ್ದ ಮತದಾನ ಪ್ರಕ್ರಿಯೆಯು ಸಂಜೆ ಐದು ಗಂಟೆಗೆ ಮುಕ್ತಾಯಗೊಂಡಿತು.

ಎಲ್ಲ ಚುನಾಯಿತ ಸಂಸದರು ಮತ್ತು ಶಾಸಕರು ರಹಸ್ಯ ಮತದಾನಕ್ಕೆ ಅರ್ಹರಾ ಗಿದ್ದು, ಮತಪತ್ರಗಳಲ್ಲಿ ತಮ್ಮ ಆಯ್ಕೆಯ ಅಭ್ಯರ್ಥಿಗಳನ್ನು ಗುರುತಿಸಲು ಚುನಾವಣಾ ಆಯೋಗವು ಅವರಿಗೆ ವಿಶೇಷ ಪೆನ್ ಒದಗಿಸಿತ್ತು.

ಸುಮಾರು ಶೇ.99ರಷ್ಟು ಮತದಾನವಾಗಿದೆ ಎಂದು ಚುನಾವಣಾಧಿಕಾರಿ ಅನೂಪ್ ಮಿಶ್ರಾ ತಿಳಿಸಿದರು. ಸಂಸತ್ ಭವನದಲ್ಲಿ ತಮ್ಮ ಮತಗಳನ್ನು ಚಲಾಯಿಸಿದ ಮೊದಲಿಗರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೇರಿದ್ದರು.

ರಾಷ್ಟ್ರಪತಿ ಚುನಾವಣೆಯ ಮುನ್ನಾದಿನವಾಗಿದ್ದ ರವಿವಾರವೇ ಕೋವಿಂದ್ ಅವರಿಗೆ ‘ಮುಂಗಡವಾಗಿ’ ಅಭಿನಂದನೆಗಳನ್ನು ಕೋರಿದ್ದ ಮೋದಿ, ಅವರಿಗೆ ತನ್ನ ಸರಕಾರದ ಸಂಪೂರ್ಣ ಬೆಂಬಲದ ಭರವಸೆಯನ್ನು ನೀಡಿದ್ದರು.

ರಾಷ್ಟ್ರಪತಿ ಚುನಾವಣೆಗಾಗಿ ಚುನಾವಣಾ ಆಯೋಗವು ಸಂಸತ್ ಭವನದ ಕೊಠಡಿ ಸಂಖ್ಯೆ 62ರಲ್ಲಿ ಒಂದು ಮತ್ತು 31 ರಾಜ್ಯ ವಿಧಾನಸಭೆಗಳಲ್ಲಿ ತಲಾ ಒಂದರಂತೆ ಒಟ್ಟು 32 ಮತಗಟ್ಟೆಗಳನ್ನು ಸ್ಥಾಪಿಸಿತ್ತು.

ಒಟ್ಟು 776 ಸಂಸದರು ಮತ್ತು 4,120 ಶಾಸಕರು ಮತ ಚಲಾಯಿಸಲು ಅರ್ಹರಾ ಗಿದ್ದು, ಮತಗಳ ಒಟ್ಟು ವೌಲ್ಯ 10,98,903 ಆಗಿದೆ. ಎನ್‌ಡಿಎ ಅಭ್ಯರ್ಥಿ ಶೇ.63ರಷ್ಟು ಮತಗಳನ್ನು ಗಳಿಸುವ ನಿರೀಕ್ಷೆಯಿದೆ.

 ಹೆಚ್ಚಿನ ಮತಗಳು ಆಡಳಿತ ಎನಡಿಎ ಬುಟ್ಟಿಯಲ್ಲಿರುವುದರಿಂದ ಬಿಹಾರದ ಮಾಜಿ ರಾಜ್ಯಪಾಲ ಕೋವಿಂದ್ ಅವರು ಮೀರಾ ಕುಮಾರ್‌ಗಿಂತ ಸುಭದ್ರ ಸ್ಥಿತಿಯಲ್ಲಿದ್ದಾರೆ. ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಹಿಡಿತದಲ್ಲಿ ಸುಮಾರು ಶೇ.63ರಷ್ಟು ಮತಗಳಿದ್ದರೆ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷವು ಶೇ.35ಕ್ಕಿಂತ ಕೊಂಚ ಹೆಚ್ಚು ಮತಗಳನ್ನು ಹೊಂದಿದೆ. ಶೇ.2ರಷ್ಟು ಮತಗಳನ್ನು ಹೊಂದಿರುವ ಪಕ್ಷೇತರರು ಮತ್ತು ಇತರ ಸಣ್ಣಪುಟ್ಟ ಪಕ್ಷಗಳು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಬಹಿರಂಗಗೊಳಿಸಿಲ್ಲ.

ಆಯ್ಕೆಯಾದರೆ ಕೋವಿಂದ್ ಅವರು ದೇಶದ ಎರಡನೇ ದಲಿತ ರಾಷ್ಟ್ರಪತಿ ಯಾಗಲಿದ್ದಾರೆ. ಮೊದಲ ದಲಿತ ರಾಷ್ಟ್ರಪತಿ ಎಂಬ ಹೆಗ್ಗಳಿಕೆ ಕೆ.ಆರ್.ನಾರಾಯಣನ್ ಅವರದಾಗಿದೆ.

ಮತಗಳ ಎಣಿಕೆಗಾಗಿ ಮತಪೆಟ್ಟಿಗೆಗಳನ್ನು ಜು.20ರಂದು ದಿಲ್ಲಿಗೆ ತರಲಾಗುತ್ತಿದ್ದು, ಅದೇ ದಿನ ಫಲಿತಾಂಶ ಘೋಷಣೆಯಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X