Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾರಾಗೃಹ ಅಧಿಕಾರಿಗಳ ವರ್ಗಾವಣೆ:...

ಕಾರಾಗೃಹ ಅಧಿಕಾರಿಗಳ ವರ್ಗಾವಣೆ: ಮುಖ್ಯಮಂತ್ರಿ ಸಚಿವಾಲಯದ ಸ್ಪಷ್ಟೀಕರಣ

ವಾರ್ತಾಭಾರತಿವಾರ್ತಾಭಾರತಿ17 July 2017 9:11 PM IST
share
ಕಾರಾಗೃಹ ಅಧಿಕಾರಿಗಳ ವರ್ಗಾವಣೆ: ಮುಖ್ಯಮಂತ್ರಿ ಸಚಿವಾಲಯದ ಸ್ಪಷ್ಟೀಕರಣ

ಬೆಂಗಳೂರು, ಜು.17: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳು ನಡೆದಿವೆ ಎಂದು ಇತ್ತೀಚೆಗೆ ಕಾರಾಗೃಹಗಳ ಉಸ್ತುವಾರಿ ಹೊತ್ತಿದ್ದ ಡಿಐಜಿ ಡಿ.ರೂಪಾ ಇಲಾಖೆಗೆ ವರದಿಯನ್ನು ನೀಡಿದ್ದರು. ವರದಿಯಲ್ಲಿನ ಅಂಶಗಳು ಮಾಧ್ಯಮಗಳಿಗೆ ಸೋರಿಕೆಯಾದ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು.

ವರದಿಯನ್ನು ಗಂಭೀರವಾಗಿ ಪರಿಗಣಿಸಿದ ಸರಕಾರ ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ. ಪ್ರಾಥಮಿಕ ವರದಿಯನ್ನು ಒಂದು ವಾರದ ಅವಧಿಯಲ್ಲಿ ಸಲ್ಲಿಸುವಂತೆ ಸೂಚಿಸಲಾಗಿದ್ದು ಸಮಗ್ರ ವರದಿ ಸಲ್ಲಿಕೆಗೆ ಒಂದು ತಿಂಗಳ ಗಡುವು ನೀಡಲಾಗಿದೆ.

ಇಡೀ ಪ್ರಕರಣದಲ್ಲಿ ಇಲಾಖಾ ನಿಯಮಾವಳಿಗಳಿಗೆ ಬದ್ಧವಾಗಿ ನಡೆದುಕೊಳ್ಳಬೇಕಾದ ಹೊಣೆ ಹಿರಿಯ ಅಧಿಕಾರಿಗಳಾದ ಡಿಐಜಿ ಡಿ.ರೂಪಾ ಹಾಗೂ ಬಂದಿಖಾನೆಗಳ ಮುಖ್ಯಸ್ಥರಾದ ಡಿಜಿಪಿ ಎಚ್.ಎನ್.ಸತ್ಯನಾರಾಯಣರಾವ್ ಅವರದ್ದಾಗಿತ್ತು. ಇದಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡು ಸೇವಾ ನಡಾವಳಿಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಈ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಜು.14 ರಂದು ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು.

ಆ ನಂತರದ ಬೆಳವಣಿಗೆಯಲ್ಲಿ ಇಬ್ಬರು ಅಧಿಕಾರಿಗಳು ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದ್ದರು. ಈ ವೇಳೆ ಕೇಂದ್ರ ಕಾರಾಗೃಹದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿತ್ತು. ಡಿಐಜಿ ಹಾಗೂ ಡಿಜಿಪಿ ಸೇವಾ ನಿಯಮಾವಳಿಗಳಿಗೆ ಬದ್ಧರಾಗಿ ತನಿಖೆಗೆ ಸಹಕರಿಸುವ ನಿಟ್ಟಿನಿಲ್ಲಿ ಗಮನಹರಿಸದೆ ಸಾರ್ವಜನಿಕವಾಗಿ ಒಬ್ಬರು ಮತ್ತೊಬ್ಬರ ವಿರುದ್ಧ ಹೀಗಳಿಕೆಗೆ ತೊಡಗಿದ್ದು ಇಲಾಖಾ ನಿಯಮಾವಳಿಗಳಿಗೆ ವ್ಯತಿರಿಕ್ತವಾಗಿತ್ತಲ್ಲದೆ ಇಲಾಖೆಯ ಘನತೆಗೆ ಕುಂದುಂಟು ಮಾಡುವಂಥದ್ದಾಗಿತ್ತು.

ಪ್ರಕರಣದ ತನಿಖೆಯ ವೇಳೆ ಅನಗತ್ಯ ಆರೋಪ, ಪ್ರತ್ಯಾರೋಪಗಳಿಂದ ಒತ್ತಡ ನಿರ್ಮಾಣವಾಗಬಾರದು ಎನ್ನುವ ಮುನ್ನೆಚ್ಚರಿಕೆಯನ್ನಿರಿಸಿಕೊಂಡು ಸರಕಾರವು ರೂಪಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಂಚಾರ ಮತ್ತು ರಸ್ತೆ ಸುರಕ್ಷಾ ವಿಭಾಗದ ಆಯುಕ್ತರನ್ನಾಗಿ ವರ್ಗಾವಣೆ ಮಾಡಿದೆ.

ಎಚ್.ಎನ್.ಸತ್ಯನಾರಾಯಣರಾವ್‌ರನ್ನು ಕಡ್ಡಾಯ ರಜೆಯಲ್ಲಿರುವಂತೆ ಆದೇಶಿಸಲಾಗಿದೆ. ಸರಕಾರದ ಈ ಕ್ರಮದಿಂದಾಗಿ ತನಿಖೆಯು ಸುಗಮವಾಗಿ, ನಿಷ್ಪಕ್ಷಪಾತವಾಗಿ ನಡೆಯಲು ಸಹಕಾರಿಯಾಗಲಿದ್ದು, ಸತ್ಯಾಸತ್ಯತೆಯು ಹೊರಬರಲಿದೆ. ವರದಿಯನ್ನಾಧರಿಸಿ ತಪ್ಪಿತಸ್ಥರ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಚಿವಾಲಯದ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X