Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಳಿ ಮಾರ್ಪಡಿಸಿದ ಸಾಸಿವೆ...

ತಳಿ ಮಾರ್ಪಡಿಸಿದ ಸಾಸಿವೆ ಬೀಜ:ವಿವೇಚನಾಯುಕ್ತ ನಿರ್ಧಾರಕ್ಕೆ ಸುಪ್ರೀಂ ಸೂಚನೆ

ವಾರ್ತಾಭಾರತಿವಾರ್ತಾಭಾರತಿ17 July 2017 10:59 PM IST
share
ತಳಿ ಮಾರ್ಪಡಿಸಿದ ಸಾಸಿವೆ ಬೀಜ:ವಿವೇಚನಾಯುಕ್ತ ನಿರ್ಧಾರಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ, ಜು.17: ತಳಿ ಮಾರ್ಪಡಿಸಿದ ಸಾಸಿವೆ ಬೀಜದ ವಾಣಿಜ್ಯಕ ಬಿಡುಗಡೆಯ ಕುರಿತು ಕಾರ್ಯನೀತಿ ರೂಪಿಸುವ ಮೊದಲು ವಿವೇಚನಾಯುಕ್ತ ಹಾಗೂ ಸರಿಯಾದ ಮಾಹಿತಿ ಪಡೆದ ಅಭಿಪ್ರಾಯಕ್ಕೆ ಬರಬೇಕು ಎಂದು ಕೇಂದ್ರ ಸರಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.

  ಇದೊಂದು ತೀರಾ ಮಹತ್ವಪೂರ್ಣ ವಿಷಯವಾಗಿದೆ. ಒಮ್ಮೆ ಇದಕ್ಕೆ ಅವಕಾಶ ಮಾಡಿಕೊಟ್ಟರೆ ಬಳಿಕ ಇದರ ಪರಿಣಾಮವನ್ನು ಪೂರ್ವಸ್ಥಿತಿಗೆ ತರಲಾಗದು. ಆದ್ದರಿಂದ ಸರಿಯಾದ ಮಾಹಿತಿ ಪಡೆದ ವಿವೇಚನಾಯುಕ್ತ ನಿರ್ಧಾರಕ್ಕೆ ಬರಬೇಕು ಎಂದು ಕೇಂದ್ರ ಸರಕಾರಕ್ಕೆ ತಿಳಿಸಿದೆ. ಅಲ್ಲದೆ ಕೇಂದ್ರದ ಕಾರ್ಯನೀತಿಯ ನಿರ್ಧಾರ ಯಾವಾಗ ಅನುಷ್ಠಾನಕ್ಕೆ ಬರಲಿದೆ ಎಂಬುದನ್ನು ಒಂದು ವಾರದೊಳಗೆ ತನಗೆ ತಿಳಿಸಬೇಕೆಂದು ಸೂಚಿಸಿದೆ.

     ಆರಂಭದಲ್ಲಿ ನಾಲ್ಕು ವಾರಗಳ ಸಮಯವನ್ನು ಕೇಂದ್ರಕ್ಕೆ ನೀಡಿದ್ದ ನ್ಯಾಯಮೂರ್ತಿಗಳಾದ ಜೆ.ಎಸ್.ಖೇಹರ್ ಮತ್ತು ಡಿ.ವೈ.ಚಂದ್ರಚೂಡ್ ಅವರಿದ್ದ ವಿಭಾಗೀಯ ಪೀಠವು, ಒಂದು ವಾರದೊಳಗೆ ಸ್ಪಷ್ಟ ನಿರ್ಧಾರ ತಿಳಿಸಲಾಗುವುದು ಎಂಬ ಹೆಚ್ಚುವರಿ ಅಟಾರ್ನಿ ಜನರಲ್ ತುಷಾರ್ ಮೆಹ್ತ ಅವರ ಹೇಳಿಕೆಗೆ ಸಮ್ಮತಿಸಿ ಒಂದು ವಾರದ ಸಮಯ ನೀಡಿತು. ತಳಿ ಮಾರ್ಪಡಿಸಿದ ಸಾಸಿವೆ ಬೀಜದ ವಾಣಿಜ್ಯಕ ಬಿಡುಗಡೆಗೆ ನೀಡಿದ್ದ ತಡೆಯಾಜ್ಞೆಯನ್ನು ಕಳೆದ ವರ್ಷದ ಅಕ್ಟೋಬರ್ 17ರಂದು ಸುಪ್ರೀಂಕೋರ್ಟ್ ಮುಂದಿನ ಆದೇಶದವರೆಗೆ ವಿಸ್ತರಿಸಿತ್ತು. ಈ ರೀತಿಯ ಬೀಜವನ್ನು ಕೃಷಿ ಉಪಯೋಗಕ್ಕೆ ಬಿಡುಗಡೆ ಮಾಡುವ ಮುನ್ನ ಸಾರ್ವಜನಿಕರ ಅಭಿಪ್ರಾಯವನ್ನು ಕ್ರೋಢೀಕರಿಸುವಂತೆ ಸರಕಾರಕ್ಕೆ ತಿಳಿಸಿತ್ತು.

     ಭಾರತದ ಪ್ರಮುಖ ಚಳಿಗಾಲದ ಬೆಳೆಯಾಗಿರುವ ಸಾಸಿವೆಯ ಬೀಜವನ್ನು ಅಕ್ಟೋಬರ್ ಮಧ್ಯಭಾಗದಿಂದ ನವೆಂಬರ್ ಅಂತ್ಯದವರೆಗೆ ಬಿತ್ತಲಾಗುತ್ತದೆ. ತಳಿ ಮಾರ್ಪಡಿಸಿದ ಸಾಸಿವೆ ಬೀಜದ ವಾಣಿಜ್ಯಕ ಬಿಡುಗಡೆಗೆ ತಡೆ ನೀಡಬೇಕು ಮತ್ತು ಇವನ್ನು ವಿವಿಧ ಹೊಲಗಳಲ್ಲಿ ಬಿತ್ತುವುದನ್ನು ನಿರ್ಬಂಧಿಸಬೇಕು ಎಂದು ಅರ್ಜಿದಾರ ಅರುಣ ರಾಡ್ರಿಗಸ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.

      ಜೈವಿಕ ಸುರಕ್ಷಾ ಕ್ರಮಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸದೆ ಸರಕಾರ ಹಲವು ಹೊಲಗಳಲ್ಲಿ ಈ ಸಾಸಿವೆಗಳನ್ನು ಬಿತ್ತಿದೆ. ಸಂಬಂಧಿತ ಪರೀಕ್ಷೆಗಳನ್ನು ಕೈಗೊಳ್ಳದೇ ಕ್ಷೇತ್ರ ಪ್ರಯೋಗಗಳನ್ನು ನಡೆಸಲಾಗುತ್ತಿರುವ ಕಾರಣ ಇದಕ್ಕೆ 10 ವರ್ಷಗಳ ತಾತ್ಕಾಲಿಕ ನಿಷೇಧ ವಿಧಿಸಬೇಕೆಂದು ಅರ್ಜಿದಾರರ ಪರ ವಕೀಲ ವಕೀಲ ಪ್ರಶಾಂತ್ ಭೂಷಣ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಸಂಪೂರ್ಣ ಪ್ರಕ್ರಿಯೆಯೇ ಗೊಂದಲ, ಅವ್ಯವಸ್ಥೆಯಿಂದ ಕೂಡಿರುವ ಕಾರಣ ಇದಕ್ಕೆ 10 ವರ್ಷಗಳ ನಿಷೇಧ ವಿಧಿಸಬೇಕೆಂದು ತಾಂತ್ರಿಕ ಪರಿಣತರ ಸಮಿತಿಯೊಂದು ತಿಳಿಸಿದೆ ಎಂದು ಭೂಷಣ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X