Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಹಿಳೆಯ ಬ್ಯಾಗ್ ಹಿಂದಿರುಗಿಸಿ...

ಮಹಿಳೆಯ ಬ್ಯಾಗ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ ಪ್ರಶಾಂತ್

ಚಿನ್ನಾಭರಣ ಸಹಿತ ಅಮೂಲ್ಯ ದಾಖಲೆಪತ್ರಗಳಿದ್ದ ಬ್ಯಾಗ್

ವಾರ್ತಾಭಾರತಿವಾರ್ತಾಭಾರತಿ18 July 2017 10:13 PM IST
share
ಮಹಿಳೆಯ ಬ್ಯಾಗ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ ಪ್ರಶಾಂತ್

ಮಂಗಳೂರು, ಜು.18: ಜಿಲ್ಲೆಯಲ್ಲಿ ಮತಾಂಧರ ಹಾವಳಿ ಹೆಚ್ಚುತ್ತಿರುವ ಮಧ್ಯೆಯೇ ಚಿನ್ನಾಭರಣ ಸಹಿತ ಅಮೂಲ್ಯ ದಾಖಲೆ ಪತ್ರಗಳಿದ್ದ ಮುಸ್ಲಿಂ ಮಹಿಳೆಯೊಬ್ಬರಿಗೆ ಸೇರಿದ ಬ್ಯಾಗನ್ನು ರಿಕ್ಷಾ ಚಾಲಕರೊಬ್ಬರು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆ ಮಂಗಳವಾರ ನಡೆದಿದೆ.

ನಗರದ ಮುಳಿಹಿತ್ಲುವಿನ ಹಾಜಿರಾ ಎಂಬವರು ಸೋಮವಾರ ರಾತ್ರಿ ಸುಮಾರು 8:30ಕ್ಕೆ ಚಿನ್ನಾಭರಣ ಖರೀದಿಸಿ ರಿಕ್ಷಾವೊಂದರಲ್ಲಿ ಮನೆಯತ್ತ ಪ್ರಯಾಣಿಸಿದರು. ಆದರೆ ಮನೆಗೆ ತಲುಪಿದ ಬಳಿಕ ತಾನು ಖರೀದಿಸಿದ ಚಿನ್ನಾಭರಣ ಹಾಗು ಡೆಬಿಟ್, ಕ್ರೆಡಿಟ್ ಕಾರ್ಡ್ ಸಹಿತ ಅಮೂಲ್ಯ ದಾಖಲೆಪತ್ರಗಳಿರುವ ವ್ಯಾನಿಟಿ ಬ್ಯಾಗ್ ರಿಕ್ಷಾದಲ್ಲಿ ಬಿಟ್ಟಿರುವುದು ನೆನಪಿಗೆ ಬಂತು. ತಕ್ಷಣ ಆಸುಪಾಸು ಹುಡುಕಾಡಿದರೂ ಪ್ರಯೋಜನವಾಗಲಿಲ್ಲ. ಅಂತಿಮವಾಗಿ ಪಾಂಡೇಶ್ವರ ಠಾಣೆಗೆ ದೂರು ನೀಡಲಾಯಿತು.

ಆದರೆ ರಾತ್ರಿ ಸುಮಾರು 11:30ಕ್ಕೆ ಹಾಜಿರಾ ಅವರಿಗೆ ಕರೆ ಮಾಡಿದ ರಿಕ್ಷಾ ಚಾಲಕ ಕುತ್ತಾರ್ ನಿವಾಸಿ ಪ್ರಶಾಂತ್, ‘ನಿಮ್ಮ ಬ್ಯಾಗ್ ಕಾಣೆಯಾಗಿದೆಯೇ?’ ಎಂದು ವಿಚಾರಿಸಿದರು. ತಕ್ಷಣ ಹಾಜಿರಾ ಹೌದೆಂದರಲ್ಲದೆ, ಅದರಲ್ಲಿ ಅಮೂಲ್ಯ ದಾಖಲೆಪತ್ರಗಳಿವೆ. ದಯವಿಟ್ಟು ನನಗೆ ಮರಳಿಸಿ ಎಂದು ಭಿನ್ನವಿಸಿಕೊಂಡರು. ‘ಆತಂಕ ಪಡಬೇಡಿ. ನಿಮ್ಮ ಚಿನ್ನಾಭರಣ ಸಹಿತ ಎಲ್ಲವೂ ಭದ್ರವಾಗಿದೆ. ನಾಳೆ ಖಂಡಿತಾ ನಿಮಗೆ ಮರಳಿಸುವೆ’ ಎಂದರು.

ಅದರಂತೆ ಮಂಗಳವಾರ ರಿಕ್ಷಾ ಚಾಲಕ ಪ್ರಶಾಂತ್ ನಗರಕ್ಕೆ ಆಗಮಿಸಿ ಹಾಜಿರಾರಿಗೆ ವ್ಯಾನಿಟಿ ಬ್ಯಾಗ್ ಮರಳಿಸಿದ್ದಾರೆ. ಆವಾಗ ಹಾಜಿರಾ ಕೃತಜ್ಞತಾಪೂರ್ವಕವಾಗಿ ಬಹುಮಾನ ಕೊಡಲು ಮುಂದಾದರೂ ಪ್ರಶಾಂತ್ ಅದಕ್ಕೆ ಒಪ್ಪಿಗೆ ನೀಡಲಿಲ್ಲ. ಹೆಸರು ಕೇಳಿದರೂ ಹೇಳಲಿಲ್ಲ. ಬ್ಯಾಗ್ ಹಸ್ತಾಂತರಿಸುವ ಫೋಟೋ ತೆಗೆಯಲೂ ಒಪ್ಪಿಗೆ ನೀಡಲಿಲ್ಲ. ಅಂತಿಮವಾಗಿ ಹಾಜಿರಾ ಕುಟುಂಬಸ್ಥರು ತಮ್ಮ ಹೆಸರು, ವಿಳಾಸವನ್ನು ಪರಿಪರಿಯಾಗಿ ವಿನಂತಿಸಿದ ಬಳಿಕ ತನ್ನ ಹೆಸರು ಹೇಳಿ ತನ್ನ ಪಾಡಿಗೆ ತಾನು ಹೊರಟು ಹೋಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X