Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸರಕಾರದಿಂದ ಮಂಜೂರಾದರೂ ಪ್ರಾರಂಭವಾಗದ...

ಸರಕಾರದಿಂದ ಮಂಜೂರಾದರೂ ಪ್ರಾರಂಭವಾಗದ ಶಾಲೆ

ಮೌಲಾನ ಆಝಾದ್ ಮಾದರಿ ಶಾಲೆ

ಶ್ರೀನಿವಾಸ್ ಬಾಡ್ಕರ್ಶ್ರೀನಿವಾಸ್ ಬಾಡ್ಕರ್19 July 2017 12:00 AM IST
share

ಕಾರವಾರ, ಜು.18: ಜಿಲ್ಲೆಗೆ ಸರಕಾರದಿಂದ ಮಂಜೂರಾಗಿರುವ ನಾಲ್ಕು ಮೌಲಾನ ಆಝಾದ್ ಮಾದರಿ ಶಾಲೆಗಳಲ್ಲಿ ಎರಡು ಶಾಲೆಗಳನ್ನು ಆರಂಭಿಸುವ ಕಾರ್ಯ ಕೆಲ ಕಾರಣಗಳಿಂದ ನನೆಗುದಿಗೆ ಬೀಳುವ ಲಕ್ಷಣಗಳಿದ್ದು, ಇನ್ನೆರಡು ಶಾಲೆಗಳ ಆರಂಭಕ್ಕೆ ಸಿದ್ಧತೆ ನಡೆಯುತ್ತಿದೆ.

ಜಿಲ್ಲೆಯ ಕಾರವಾರ, ಭಟ್ಕಳ, ಮುಂಡಗೋಡ ಹಾಗೂ ಹಳಿಯಾಳದಲ್ಲಿ ಸರಕಾರ ಮೌಲಾನ ಆಝಾದ್ ಮಾದರಿ ಶಾಲೆಯ ಪ್ರಾರಂಭಕ್ಕೆ ಪ್ರಸಕ್ತ ಸಾಲಿನಲ್ಲಿ ಆದೇಶ ನೀಡಿದೆ. ಆದರೆ ಶೈಕ್ಷಣಿಕ ಅವಧಿ ಪ್ರಾರಂಭವಾಗಿ ಈಗಾಗಲೇ ಎರಡು ತಿಂಗಳು ಕಳೆಯುತ್ತಿದ್ದರೂ ಈವರೆಗೆ ಈ ಶಾಲೆಗಳು ಪ್ರಾರಂಭವಾಗಿಲ್ಲ.

 ಅಲ್ಲದೆ, ಕಾರವಾರ ಹಾಗೂ ಭಟ್ಕಳದಲ್ಲಿ ಮಂಜೂರಾದ ಶಾಲೆಗಳಿಗೆ ಅಗತ್ಯದಷ್ಟು ವಿದ್ಯಾರ್ಥಿಗಳು, ಶಿಕ್ಷಕರು ಲಭ್ಯವಾಗದ ಕಾರಣ ಎರಡು ಶಾಲೆಗಳು ಪ್ರಾರಂಭವಾಗುವ ಹಂತದಲ್ಲಿಲ್ಲ ಎನ್ನಲಾಗಿದೆ. ಹಳಿಯಾಳ-ಮುಂಡಗೋಡದಲ್ಲಿ ಶಾಲೆ ಪ್ರಾರಂಭಿಸುವ ತಯಾರಿ ನಡೆದಿದೆ.

ಅಲ್ಪಸಂಖ್ಯಾತರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕಳೆದ ಸಾಲಿನ ಬಜೆಟ್ ಘೋಷಣೆಯಲ್ಲಿ ರಾಜ್ಯದಲ್ಲಿ ಒಟ್ಟು 100 ಆಝಾದ್ ಮಾದರಿ ಶಾಲೆಗಳನ್ನು ಸ್ಥಾಪಿಸಲು ಸರಕಾರ ಮುಂದಾಗಿದೆ. ಜಿಲ್ಲೆಗೆ ಒಟ್ಟು 4 ಶಾಲೆಗಳು ಮಂಜೂರಾಗಿವೆ. ಆದರೆ ಪಾಲಕರ ಇಂಗ್ಲಿಷ್ ವ್ಯಾಮೋಹ ಸೇರಿದಂತೆ ಹಲವು ಕಾರಣಗಳಿಗಾಗಿ ಈಗಾಗಲೇ ಇರುವ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆ ಉಂಟಾಗುತ್ತಿದೆ.

ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ 10ಕ್ಕಿಂತ ಕಡಿಮೆ ಇದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯ ಒಟ್ಟು 83 ಸರಕಾರಿ ಶಾಲೆಗಳಲ್ಲಿ ಒಂದನೆ ತರಗತಿಗೆ ವಿದ್ಯಾರ್ಥಿಗಳ ಪ್ರವೇಶ ಶೂನ್ಯವಾಗಿದ್ದು, ಆತಂಕದ ಸಂಗತಿಯಾಗಿದೆ.

ಎಲ್ಲ ಸೌಲಭ್ಯ ವಿದ್ಯಾರ್ಥಿಗಳಿಗಿದೆ: ಹೊಸದಾಗಿ ಮಂಜೂರಾಗಿರುವ ಮೌಲಾನ ಆಝಾದ್ ಶಾಲೆಯ ವಿದ್ಯಾರ್ಥಿಗಳಿಗೆ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ದೊರೆಯುವಂಥ ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ, ಶೂ, ಪಠ್ಯಪುಸ್ತಕ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಸುಸಜ್ಜಿತ ಕೊಠಡಿ ಮತ್ತು ಶುದ್ಧ ನೀರಿನ ವ್ಯವಸ್ಥೆ, ಶಿಷ್ಯವೇತನ ನೀಡಲಾಗುತ್ತಿದೆ. ಶಾಲೆಯಲ್ಲಿ ಕಂಪ್ಯೂಟರ್, ಸಿಸಿ ಕ್ಯಾಮೆರಾ ಅಳವಡಿಕೆಯು ಸೇರಿದೆ.

ವಿದ್ಯಾರ್ಥಿಗಳ ಕೊರತೆ: ಮೌಲಾನ ಆಝಾದ್ ಮಾದರಿ ಶಾಲೆಯ ಪ್ರತಿ ತರಗತಿಯಲ್ಲಿ ಗರಿಷ್ಠ 60 ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯಬಹುದಾಗಿದೆ.ಮುಸ್ಲಿಮ್, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಸೀಟು ಮತ್ತು ಎಸ್ಸಿ-ಎಸ್ಟಿ ಹಾಗೂ ಒಬಿಸಿ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಸೀಟು ಮೀಸಲಿಡಲಾಗಿದೆ. ಪ್ರತಿ ಶಾಲೆಯಲ್ಲಿ ಶೇ.50ರಷ್ಟು ವಿದ್ಯಾರ್ಥಿನಿಯರಿಗೆ ಮೀಸಲಿಡಲು ಸರಕಾರ ನಿರ್ಧರಿಸಿದೆ. ಆದರೆ ಕಾರವಾರ, ಭಟ್ಕಳದಲ್ಲಿ ವಿದ್ಯಾರ್ಥಿಗಳ ಕೊರತೆಯಿದ್ದು, ಶಾಲೆ ಪ್ರಾರಂಭವಾಗುವುದು ಅನುಮಾನವಾಗಿದೆ.ಮುಂಡಗೋಡ, ಹಳಿಯಾಳದಲ್ಲಿ ಶೀಘ್ರವೇ ಪ್ರಾರಂಭವಾಗುವ ನಿರೀಕ್ಷೆ ಇದೆ.

ಮೌಲಾನ ಆಝಾದ್ ಮಾದರಿ ಶಾಲೆಗಳಲ್ಲಿ ಕನ್ನಡ, ಇಂಗ್ಲಿಷ್, ಉರ್ದು ಹಾಗೂ ಗಣಿತ ವಿಷಯಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಇತರ ಸರಕಾರಿ ಶಾಲೆಯಂತೆ ವಿದ್ಯಾರ್ಥಿಗಳಿಗೆ ಎಲ್ಲ ಸೌಲಭ್ಯ, ಉತ್ತಮ ಗುಣಮಟ್ಟದ ಶಿಕ್ಷಣ ಲಭ್ಯವಾಗಲಿದೆ. ಆಸಕ್ತಿಯಿಂದ ಬರುವ ಮಕ್ಕಳನ್ನು ಮಾತ್ರ ಸೇರಿಸಿಕೊಳ್ಳಲಾಗುವುದು.
 
 ಗುಡ್ಡಪ್ಪಜಿಗಳಿಕೊಪ್ಪ, ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿ, ಕಾರವಾರ

share
ಶ್ರೀನಿವಾಸ್ ಬಾಡ್ಕರ್
ಶ್ರೀನಿವಾಸ್ ಬಾಡ್ಕರ್
Next Story
X