Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಕಾರದ ತಡೆಯಾಜ್ಞೆಗೆ ಮೇಯರ್...

ಸರಕಾರದ ತಡೆಯಾಜ್ಞೆಗೆ ಮೇಯರ್ ಮಧ್ಯಪ್ರವೇಶಕ್ಕೆ ಬಿಜೆಪಿ ಆಗ್ರಹ

ಲೈಟ್‌ಹೌಸ್ ರಸ್ತೆಗೆ ನಾಮಕರಣ ವಿವಾದ

ವಾರ್ತಾಭಾರತಿವಾರ್ತಾಭಾರತಿ19 July 2017 6:05 PM IST
share

ಮಂಗಳೂರು, ಜು.19: ನಗರದ ಅಂಬೇಡ್ಕರ್ ವೃತ್ತದಿಂದ ಲೈಟ್‌ಹೌಸ್ ಮೂಲಕ ಕೆಥೋಲಿಕ್ ಕ್ಲಬ್ ವರೆಗೆ ಹೋಗುವ ರಸ್ತೆಗೆ ಮುಲ್ಕಿ ಸುಂದರ ರಾಮ್ ಶೆಟ್ಟಿ ಅವರ ಹೆಸರಿಡುವ ಮಂಗಳೂರು ಮಹಾನಗರಪಾಲಿಕೆ ನಿರ್ಣಯಕ್ಕೆ ಸರಕಾರ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸಲು ಮೇಯರ್ ತಕ್ಷಣ ಮಧ್ಯಪ್ರವೇಶಿಸಬೇಕೆಂದು ಪಾಲಿಕೆ ಪ್ರತಿಪಕ್ಷದ ನಾಯಕ ಗಣೇಶ್ ಹೊಸಬೆಟ್ಟು ಆಗ್ರಹಿಸಿದರು.

ಸುಂದರ ರಾಮ್ ಶೆಟ್ಟಿ ಅವರ ಹೆಸರಿಡುವ ಕುರಿತು ಪಾಲಿಕೆಯ ಸರ್ವಾನುಮತದ ನಿರ್ಣಯಕ್ಕೆ ಶಾಸಕ ಜೆ. ಆರ್. ಲೋಬೊ ಅವರು ನಗರಾಭಿವೃದ್ಧಿ ಇಲಾಖೆಯಿಂದ ತಡೆಯಾಜ್ಞೆ ತಂದಿದ್ದಾರೆ. ಇದು ಕೌನ್ಸಿಲ್‌ಗೆ ಶಾಸಕರು ಮಾಡಿದ ಅವಮಾನವಾಗಿದೆ ಎಂದು ಪಾಲಿಕೆಯ ತನ್ನ ಕೊಠಡಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ತಿಳಿಸಿದರು.

ಕರ್ನಾಟಕ ಕಾರ್ಪೊರೇಶನ್ ಅಧಿನಿಯಮ 1964ರ ಸೆಕ್ಷನ್ 293ರ ಅನ್ವಯ ಲೈಟ್‌ಹೌಸ್ ಹಿಲ್ ರಸ್ತೆಗೆ ನಾಮಕರಣ ಮಾಡಲಾಗಿದೆ. ಆದರೆ ಶಾಸಕ ಲೋಬೊ ಅವರು ರಸ್ತೆಗೆ ನಾಮಕರಣ ಮಾಡಿದರೆ ಅಶಾಂತಿ ಕಾರಣವಾಗುತ್ತದೆ. ನಾಮಕರಣ ಮಾಡುವ ಮುನ್ನ ಸಾರ್ವಜನಿಕರ ಹಾಗೂ ಸೈಂಟ್ ಅಲೋಶಿಯಸ್ ಕಾಲೇಜಿನ ಗಮನಕ್ಕೆ ತಂದಿಲ್ಲ ಎಂಬ ಕಾರಣವನ್ನು ನೀಡಿ ಯಥಾಸ್ಥಿತಿ ಕಾಪಾಡುವಂತೆ ಸರಕಾರದಿಂದ ಆದೇಶ ಹೊರಡಿಸಿದ್ದಾರೆ. ಆದರೆ ಪಾಲಿಕೆ ಸಭೆಯಲ್ಲಿ ಈ ಕುರಿತು ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. ನಂತರ ಸಾರ್ವಜನಿಕರ ಆಕ್ಷೇಪಗಳಿದ್ದರೆ ಸಲ್ಲಿಸಲು 30 ದಿನಗಳ ಅವಕಾಶ ನೀಡಿ ಪತ್ರಿಕಾ ಪ್ರಕಟಣೆ ಕೂಡ ನೀಡಲಾಗಿತ್ತು. ಆಗ ಯಾರೂ ಈ ಬಗ್ಗೆ ಆಕ್ಷೇಪ ಸಲ್ಲಿಸಿಲ್ಲ. ಇದೀಗ ಶಾಸಕರು ಸತ್ಯಕ್ಕೆ ದೂರವಾದದ್ದನ್ನು ಹೇಳುತ್ತಿದ್ದಾರೆ. ಶಾಸಕರಲ್ಲಿ ಕೇಳಿ ಕೌನ್ಸಿಲ್‌ನಲ್ಲಿ ನಿರ್ಣಯ ತೆಗೆದುಕೊಳ್ಳುವ ಪರಿಸ್ಥಿತಿ ಉಂಟಾಗಿದೆ ಎಂದು ಹೊಸಬೆಟ್ಟು ಟೀಕಿಸಿದರು.

ಮಹಾನಗರಪಾಲಿಕೆ ಅಭಿವೃದ್ಧಿ ಕೆಲಸದ ಕಡತವನ್ನು ಸರಕಾರದ ಮಟ್ಟದಲ್ಲಿ ಮಂಜೂರು ಮಾಡಲು ಅಸಹಾಯಕತೆಯನ್ನು ತೋರುತ್ತಿರುವ ಶಾಸಕರು ಈ ತಡೆಯಾಜ್ಞೆಯನ್ನು ಒಂದೇ ದಿನದಲ್ಲಿ ಜಾರಿ ಮಾಡುವ ಮೂಲಕ ತನ್ನ ಪೌರುಷ ಪ್ರದರ್ಶಿಸಿದ್ದಾರೆ. ಇದು ಮಹಾನಗರಪಾಲಿಕೆಯ ಪರಿಷತ್ ಹಾಗೂ ಮಂಗಳೂರಿನ ಮಹಾಜನತೆಗೆ ಮಾಡಿದ ಅವಮಾನವಾಗಿದೆ. ಈ ಹಿನ್ನೆಲೆಯಲ್ಲಿ ಮೇಯರ್ ಅವರು ತಕ್ಷಣ ಮಧ್ಯಪ್ರವೇಶಿಸಿ ಪರಿಷತ್‌ನ ಘನತೆಯನ್ನು ಎತ್ತಿ ತೋರಿಬೇಕು ಎಂದು ಅವರು ಒತ್ತಾಯಿಸಿದರು.

ಮುಖ್ಯಮಂತ್ರಿ ನಗರೋತ್ಥಾನ ಅನುದಾನ ಕಳೆದ 5 ವರ್ಷದ ಅವಧಿಯಲ್ಲಿ ಮಂಗಳೂರು ಮಹಾನಗರಪಾಲಿಕೆಗೆ ಕೇವಲ 100 ಕೋಟಿ ರೂ. ಮಾತ್ರ ಬಂದಿದೆ. ಬೇರೆ ಮಹಾನಗರಪಾಲಿಕೆಗೆ ಎರಡನೇ ಹಂತದ 100 ಕೋಟಿ ರೂ. ಹಣ ಬಂದಿದೆ. ಈ ಕೆಲಸ ಮಾಡಲು ಶಾಸಕ ಲೋಬೊ ಅವರಿಗೆ ಸಮಯವಿಲ್ಲ. ನಗರ ಕೇಂದ್ರ ಮಾರುಕಟ್ಟೆ ಶಿಥಿಲಾವಸ್ಥೆಗೆ ತಲುಪಿದ್ದು, ಅದರ ನವೀಕರಣದ ಅಗತ್ಯವಿದೆ. ಆದರೆ ಮಾರುಕಟ್ಟೆ ನವೀಕರಣಕ್ಕೆ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ. ನಗರದಲ್ಲಿ ಟ್ರಾಫಿಕ್ ಸಮಸ್ಯೆ ತೀವ್ರವಾಗಿದ್ದು, ತಮ್ಮ ಅಕಾರಾವಯಲ್ಲಿ ಪಂಪ್‌ವೆಲ್ ಬಸ್‌ಸ್ಟಾಂಡ್ 11 ಎಕರೆ ಭೂಮಿಯನ್ನು ಸ್ವಾಧೀ ನಪಡಿಸಿಕೊಂಡರೂ ಬಸ್ ನಿಲ್ದಾಣ ನಿರ್ಮಿಸಲು ಅನುದಾನ ತರುವಲ್ಲಿ ಶಾಸಕರು ವಿಫಲರಾಗಿದ್ದಾರೆ ಎಂದು ಹೊಸಬೆಟ್ಟು ದೂರಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರೇಮಾನಂದ ಶೆಟ್ಟಿ, ಸುಧೀರ್ ಕಣ್ಣೂರು ಹಾಗೂ ರಾಜೇಂದ್ರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X