Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವರ್ಷಾಂತ್ಯದೊಳಗೆ ನರಸಾಪುರಕ್ಕೆ...

ವರ್ಷಾಂತ್ಯದೊಳಗೆ ನರಸಾಪುರಕ್ಕೆ ಶುದ್ದೀಕರಿಸಿದ ನೀರು: ಕಾನೂನು ಸಚಿವ ಜಯಚಂದ್ರ

ವಾರ್ತಾಭಾರತಿವಾರ್ತಾಭಾರತಿ19 July 2017 7:44 PM IST
share
ವರ್ಷಾಂತ್ಯದೊಳಗೆ ನರಸಾಪುರಕ್ಕೆ ಶುದ್ದೀಕರಿಸಿದ ನೀರು: ಕಾನೂನು ಸಚಿವ ಜಯಚಂದ್ರ

ಬೆಂಗಳೂರು,ಜು. 19: ಹೆಬ್ಬಾಳದ ದಿನಂಪ್ರತಿ 3ದಶಲಕ್ಷ ಲೀ., ಕೋರಮಂಗಲ- ಚಲ್ಲಘಟ್ಟ ಕಣಿವೆಯ ದಿನಂಪ್ರತಿ 1.5ದಶಲಕ್ಷ ಲೀ. ಹಾಗೂ ವೃಷಭಾವತಿ ಕಣಿವೆಯ ದಿನಂಪ್ರತಿ 15 ದಶಲಕ್ಷ ಲೀ.ತ್ಯಾಜ್ಯ ನೀರು ಶುದ್ಧೀಕರಣ ಘಟಕ ಯೋಜನೆಯ 10ವರ್ಷ ನಿರ್ವಹಣೆಗೆ ಮೂರು ಪ್ರತ್ಯೇಕ ಟೆಂಡರ್‌ಗೆ ಸಂಪುಟ ಸಭೆ ಅನುಮೋದನೆ ನೀಡಿದೆ.

ಬುಧವಾರ ವಿಧಾನಸೌಧದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಜಯಚಂದ್ರ, ಕೋಲಾರ. ಚಿಕ್ಕಬಳ್ಳಾಪುರ ಹಾಗೂ ಆನೇಕಲ್ ತಾಲೂಕಿನ ಈ ಕಣಿವೆಗಳಿಂದ ನೀರು ಪೂರೈಸುವ ಕಾಮಗಾರಿಗಳು ಈಗಾಗಲೇ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಹೆಬ್ಬಾಳ ಕಣಿವೆಯ ಸ್ಥಾಪನಾ ವೆಚ್ಚ 334 ಕೋಟಿ ರೂ., ನಿರ್ವಹಣಾ ವೆಚ್ಚ 199.96 ಕೋಟಿ ರೂ. ಒಳಗೊಂಡಂತೆ 534.31ಕೋಟಿ ರೂ., ಕೋರಮಂಗಲ-ಚಲ್ಲಘಟ್ಟ ಕಣಿವೆಗೆ 472 ಕೋಟಿ ರೂ.ಹಾಗೂ ವೃಷಭಾವತಿ ಕಣಿವೆಗೆ 656.96ಕೋಟಿ ರೂ.ಮೊತ್ತ ಮಂಜೂರು ಮಾಡಿ, ಸಂಪುಟ ಒಪ್ಪಿಗೆ ನೀಡಿದೆ. ಅಂತೆಯೇ, ಕೋಲಾರ ಜಿಲ್ಲೆಯ ನರಸಾಪುರಕ್ಕೆ ಕೋರಮಂಗಲ-ಚಲ್ಲಘಟ್ಟ ಕಣಿವೆಯಿಂದ ವರ್ಷಾಂತ್ಯದೊಳಗೆ ನೀರು ಒದಗಿಸಲಾಗುವುದು ಎಂದರು.

ಹೆಸರುಘಟ್ಟಕ್ಕೆ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಕಾಮಗಾರಿಗೆ ಹಾಗೂ ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಾಣಕ್ಕೆ 37.28 ಕೋಟಿ ರೂ.ಅಂದಾಜು ವೆಚ್ಚಕ್ಕೆ ಸಂಪುಟ ಅನುಮೋದನೆ ನೀಡಿದೆ. ಇದರಿಂದ ಕೈಗಾರಿಕಾ ತ್ಯಾಜ್ಯಗಳ ಸಂಸ್ಕರಣೆಗೆ ಅನುಕೂಲವಾಗಲಿದೆ ಎಂದರು. ಕಂದಾಯ ಇಲಾಖೆ, ಬಿಡಿಎ, ಬಿಬಿಎಂಪಿ ಸೇರಿ ಸರಕಾರಿ ಸ್ವಾಮ್ಯದ ಸಂಸ್ಥೆಗಳಿಂದ ಭೂಸ್ವಾಧೀನ ಮಾಡಿಕೊಳ್ಳಲು ಹಾಗೂ ಭೂ ಬ್ಯಾಂಕ್ ಸ್ಥಾಪಿಸಲು ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಮಿತಿ ರಚಿಸಲಾಗಿದೆ. ಕಂದಾಯ, ನಗಾಭಿವೃದ್ಧಿ ಇಲಾಖೆ, ಮೆಟ್ರೋ ರೈಲು ನಿಗಮ, ಬಿಬಿಎಂಪಿ, ಬಿಡಿಎ, ಬೆಂ.ನಗರ ಹಾಗೂ ಬೆಂ.ಗ್ರಾಮಾಂತರ ಜಿಲ್ಲಾಧಿಕಾರಿಗಳು ಈ ಸಮಿತಿಯ ಸದಸ್ಯರಾಗಿರುತ್ತಾರೆ.
ಬೆಂಗಳೂರು ಮಹಾನಗರದ ಮೂಲ ಸೌಲಭ್ಯ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯವಿರುವ ರಕ್ಷಣಾ ಮಂತ್ರಾಲಯಕ್ಕೆ ಸೇರಿದ ಜಮೀನನ್ನು ನಿಮಯದ ಮೂಲಕ ಪಡೆದುಕೊಳ್ಳಲು ಹಾಗೂ ಸರಕಾರದ ಸ್ವಾಧೀನದಲ್ಲಿರುವ ಭೂಮಿ ರಕ್ಷಣಾ ಇಲಾಖೆಗೆ ಹಸ್ತಾಂತರಿಸಲು ಈ ಸಮಿತಿ ಅಧಿಕಾರ ಹೊಂದಿರುವುದರಿಂದ ಸಂಬಂಧಿತ ಕಾಮಗಾರಿಗಳನ್ನು ಕ್ಷಿಪ್ರವಾಗಿ ಅನುಷ್ಠಾನಗೊಳಿಸಲು ಸಾಧ್ಯ ಎಂದರು.

ತುಮಕೂರು ಜಿಲ್ಲೆಯ ಕಸಬಾ ಹೋಬಳಿಯ ಅಮಲಾಪುರ ಗ್ರಾಮದಲ್ಲಿ ಕೇಂದ್ರ ಸರಕಾರದ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ತಂತ್ರಜ್ಞಾನ ಕೇಂದ್ರ ಸ್ಥಾಪಿಸಲು ರಾಜ್ಯ ಸರಕಾರ 15ಎಕರೆ ಜಾಗವನ್ನು ಉಚಿತವಾಗಿ ಒದಗಿಸಲು ಸಂಪುಟ ಸಮ್ಮತಿಸಿದೆ.

ಕುಡಿಯುವ ನೀರು ಯೋಜನೆ: ಕೊಪ್ಪಳ ಜಿಲ್ಲೆ, ಕುಷ್ಟಗಿ, ಯಲಬುರ್ಗಾ ತಾಲೂಕುಗಳಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಅನುಷ್ಠಾನಕ್ಕೆ 762 ಕೋಟಿ ರೂ.ಪರಿಷ್ಕೃತ ಅಂದಾಜಿಗೆ ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X