Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಎಂಎಚ್370 ವಿಮಾನದ ಶೋಧದಲ್ಲಿ ಸಾಗರ ರಚನೆಯ...

ಎಂಎಚ್370 ವಿಮಾನದ ಶೋಧದಲ್ಲಿ ಸಾಗರ ರಚನೆಯ ಮಾಹಿತಿ ಲಭ್ಯ

ಮೀನುಗಾರಿಕೆಗೆ ಹೊಸ ಸ್ಥಳಗಳ ಪತ್ತೆ

ವಾರ್ತಾಭಾರತಿವಾರ್ತಾಭಾರತಿ19 July 2017 8:04 PM IST
share
ಎಂಎಚ್370 ವಿಮಾನದ ಶೋಧದಲ್ಲಿ ಸಾಗರ ರಚನೆಯ ಮಾಹಿತಿ ಲಭ್ಯ

ಸಿಡ್ನಿ (ಆಸ್ಟ್ರೇಲಿಯ), ಜು. 19: ನಿಗೂಢವಾಗಿ ನಾಪತ್ತೆಯಾಗಿರುವ ಮಲೇಶ್ಯ ಏರ್‌ಲೈನ್ಸ್‌ನ ಎಂಎಚ್370 ವಿಮಾನದ ಅವಶೇಷಗಳಿಗಾಗಿ ಹಿಂದೂ ಮಹಾ ಸಾಗರದ ಬೃಹತ್ ಪ್ರದೇಶದಲ್ಲಿ ಹಲವು ವರ್ಷಗಳ ಕಾಲ ಬೃಹತ್ ಶೋಧ ಕಾರ್ಯಾಚರಣೆ ನಡೆಯಿತು. ಈ ಕಾರ್ಯಾಚರಣೆಯು ತನ್ನ ಉದ್ದೇಶವನ್ನು ಸಾಧಿಸುವಲ್ಲಿ ವಿಫಲವಾಯಿತಾದರೂ, ಸಾಗರದಾಳದ ಹಲವು ನಿಗೂಢಗಳನ್ನು ಸಂಗ್ರಹಿಸಿದೆ.

2014 ಮಾರ್ಚ್ 8ರಂದು ರಾತ್ರಿ 239 ಪ್ರಯಾಣಿಕರನ್ನು ಹೊತ್ತು ಮಲೇಶ್ಯದ ಕೌಲಾಲಂಪುರದಿಂದ ಬೀಜಿಂಗ್‌ಗೆ ಹಾರಿದ್ದ ವಿಮಾನದ ಅವಶೇಷಗಳು ಈವರೆಗೂ ಪತ್ತೆಯಾಗಿಲ್ಲ.

ಆದರೆ, ಶೋಧ ಕಾರ್ಯಾಚರಣೆಯ ವೇಳೆ ಸಂಗ್ರಹಿಸಲಾದ ಸಾಗರ ತಳದ ವಿಸ್ತೃತ ನಕಾಶೆಗಳು, ಮೀನುಗಳ ಸೆಲೆ ಮತ್ತು ಇತಿಹಾಸ ಪೂರ್ವ ಕಾಲದಲ್ಲಿ ಭೂಮಿಯ ದಕ್ಷಿಣದ ಖಂಡಗಳ ಚಲನೆಯ ಮಾದರಿಗಳ ಕುರಿತು ಮಾಹಿತಿಗಳನ್ನು ಹೊರಗೆಡಹಿವೆ.

ಹಿಂದೂ ಮಹಾಸಾಗರದ ದುರ್ಗಮ ಪ್ರದೇಶಗಳ ಶೋಧ ನಡೆದ ಬಳಿಕ ಈ ವರ್ಷದ ಜನವರಿಯಲ್ಲಿ ವಿಮಾನದ ಶೋಧ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿತ್ತು. ಸಾಗರದ ಈ ದುರ್ಗಮ ಪ್ರದೇಶಗಳಲ್ಲಿ ವೌಂಟ್ ಎವರೆಸ್ಟ್‌ಗಿಂತಲೂ ಎತ್ತರದ ಸಾಗರದಡಿಯ ಪರ್ವತಗಳು ಏಳುತ್ತವೆ ಹಾಗೂ ಸಾಗರದಡಿಯ ಜ್ವಾಲಾಮುಖಿಗಳನ್ನೊಳಗೊಂಡ ನೂರಾರು ಕಿಲೋಮೀಟರ್ ಉದ್ದದ ಕಣಿವೆಗಳೂ ರೂಪುಗೊಳ್ಳುತ್ತವೆ.

ಸುಮಾರು 1.2 ಲಕ್ಷ ಚದರ ಕಿ.ಮೀ.ನಷ್ಟು ಸಾಗರ ತಳವನ್ನು ಶೋಧಿಸಲಾಗಿದ್ದು, ಲಭಿಸಿದ ವಿವರವಾದ ಮಾಹಿತಿಗಳು ಮೀನುಗಾರರು, ಸಾಗರ ವಿಜ್ಞಾನಿಗಳು ಮತ್ತು ಭೂವಿಜ್ಞಾನಿಗಳಿಗೆ ಅತ್ಯಂತ ಉಪಯುಕ್ತವಾಗಿವೆ ಪರಿಣಮಿಸಿವೆ ಎಂದು ವೆಸ್ಟರ್ನ್ ಆಸ್ಟ್ರೇಲಿಯ ವಿಶ್ವವಿದ್ಯಾನಿಲಯದಲ್ಲಿ ಕರಾವಳಿ ಸಾಗರ ಅಧ್ಯಯನದ ಪ್ರೊಫೆಸರ್ ಚರಿಟ ಪಟ್ಟಯರಚ್ಚಿ ಹೇಳುತ್ತಾರೆ.

‘‘ಶೋಧಕ್ಕೊಳಗಾದ ಸಾಗರದ ಹಲವು ಭಾಗಗಳಲ್ಲಿ ಸಾಗರ ಪರ್ವತಗಳಿವೆ. ಇವುಗಳು ಅಂತಾರಾಷ್ಟ್ರೀಯ ಆಳ ಸಮುದ್ರ ಮೀನುಗಾರರನ್ನು ಆಕರ್ಷಿಸುತ್ತವೆ’’ ಎಂದು ಪಟ್ಟಯರಚ್ಚಿ ‘ರಾಯ್ಟರ್ಸ್‌’ ಸುದ್ದಿ ಸಂಸ್ಥೆಗೆ ಹೇಳಿದರು.

 ದುಬಾರಿ ಮೀನುಗಳಾದ ಟೂನ, ಟೂತ್‌ಫಿಶ್, ಆರೇಂಜ್ ರಫ್‌ಲಿ, ಆಲ್ಫೋನ್ಸಿನೊ ಮತ್ತು ಟ್ರೆವಲಿ ಸಮುದ್ರ ಪರ್ವತಗಳ ಹತ್ತಿರ ಹೆಚ್ಚಾಗಿ ಇರುತ್ತವೆ. ಈ ಮೀನುಗಳ ಆಹಾರವಾಗಿರುವ ಪ್ಲಾಂಕ್ಟೋನ್ ಎಂಬ ಸಮುದ್ರ ಜೀವಿಗಳು ಈ ಭಾಗದಲ್ಲಿ ಸಮುದ್ರದ ಸೆಳೆತಕ್ಕೆ ಸಿಲುಕಿ ಪೇಲವವಾಗಿ ತೇಲಿಕೊಂಡಿರುತ್ತವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X