Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶತಮಾನ ಕಂಡ ಗಾಂಧಿ ಶಾಲೆಯ ಗೋಡೆ ಕುಸಿತ

ಶತಮಾನ ಕಂಡ ಗಾಂಧಿ ಶಾಲೆಯ ಗೋಡೆ ಕುಸಿತ

ವಾರ್ತಾಭಾರತಿವಾರ್ತಾಭಾರತಿ19 July 2017 9:30 PM IST
share
ಶತಮಾನ ಕಂಡ ಗಾಂಧಿ ಶಾಲೆಯ ಗೋಡೆ ಕುಸಿತ

ಉಡುಪಿ, ಜು.19: ನಗರದ ಕೆಎಂ ಮಾರ್ಗದಲ್ಲಿ 132 ವರ್ಷಗಳ ಇತಿಹಾಸ ಹೊಂದಿರುವ ಮಹಾತ್ಮ ಗಾಂಧಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ (ಮೈನ್ ಶಾಲೆ)ಯ ಗೋಡೆಯ ಒಂದು ಪಾರ್ಶ್ವ ಭಾರೀ ಮಳೆಗೆ ಕಳೆದ ರವಿವಾರ ಕುಸಿದು ಬಿದ್ದಿದೆ. ಆದರೆ ಇದರಿಂದ ತರಗತಿ ನಡೆಸಲು ಯಾವುದೇ ತೊಂದರೆ ಎದುರಾಗಿಲ್ಲ. ಪಾಠ-ಪ್ರವಚನಗಳೆಲ್ಲವೂ ಎಂದಿನಂತೆ ನಡೆಯುತ್ತಿವೆ.

ಶಾಲೆಗೆ ತಾಗಿ ಕೊಂಡಿರುವ, ಹಿಂದೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇದ್ದ ಕೋಣೆಯ ಮಣ್ಣಿನ ಗೋಡೆಯ ಒಂದು ಪಾರ್ಶ್ವ ಜರಿದಿರುವುದು ಸೋಮವಾರ ಬೆಳಗ್ಗೆ ಶಾಲೆ ತೆರೆದಾಗ ಗಮನಕ್ಕೆ ಬಂತು. ಆದರೆ ಇಂದು ಪತ್ರಕರ್ತರ ಗಮನಕ್ಕೆ ಇದು ಬಂದು, ಅವರು ಸ್ಥಳಕ್ಕೆ ಭೇಟಿ ನೀಡಿದಾಗ ತಕ್ಷಣ ಎಚ್ಚೆತ್ತುಕೊಂಡ ಇಲಾಖೆ ಮಧ್ಯಾಹ್ನದ ಬಳಿಕ ಗೋಡೆಯ ದುರಸ್ಥಿ ಪ್ರಕ್ರಿಯೆಗೆ ಚಾಲನೆ ನೀಡಿರುವುದಾಗಿ ತಿಳಿದುಬಂದಿದೆ.

ಉಡುಪಿಯ ಕೊಡುಗೈ ದಾನಿ ಎನಿಸಿದ್ದ ಹಾಜಿ ಅಬ್ದುಲ್ಲಾ ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತನ್ನ ಸ್ವಂತದ್ದಾದ 20 ಸೆನ್ಸ್ ಜಾಗವನ್ನು ಶಾಲೆ ನಿರ್ಮಾಣಕ್ಕೆಂದು ದಾನಪತ್ರದ ಮೂಲಕ ಬಿಟ್ಟುಕೊಟ್ಟಿದ್ದರು. ಅಲ್ಲಿ ದಾನಿಗಳ ನೆರವಿನಿಂದ 1885 ರಲ್ಲಿ ಈ ಪ್ರಾಥಮಿಕ ಶಾಲೆಯನ್ನು ಪ್ರಾರಂಭಿಸಲಾಗಿತ್ತು.

ಶಾಲೆಯ ಹಿಂದೆ ಅದಕ್ಕೆ ತಾಗಿಕೊಂಡಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ನಾಲ್ಕು ಎಕರೆ ಜಾಗವನ್ನು ಅನಿವಾಸಿ ಭಾರತೀಯರೊಬ್ಬರಿಗೆ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಿಸಲು ಅನುವಾಗುವಂತೆ ಸರಕಾರ ಬಿಟ್ಟುಕೊಟ್ಟಿದ್ದು, ಅಲ್ಲೀಗ ನೂತನ ಕಟ್ಟಡದ ನಿರ್ಮಾಣ ಕಾರ್ಯ ಬಿರುಸಿನಿಂದ ನಡೆಯುತ್ತಿದೆ. ಇದರಿಂದ ಸಂಪೂರ್ಣ ಮಣ್ಣಿನಿಂದ ಕಟ್ಟಿರುವ ಯಾವುದೇ ದುರಸ್ತಿ ಕಾಣದಿರುವ ಈ ಶಾಲೆಯ ಕಟ್ಟಡ ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ದುರ್ಬಲಗೊಂಡು ಅಪಾಯದ ಸ್ಥಿತಿಯಲ್ಲಿದೆ.

ಪ್ರಸಕ್ತ ಶಾಲೆಯಿರುವ ಸ್ಥಿತಿಯ ಕುರಿತು ಪತ್ರಿಕೆಗಳಲ್ಲಿ ವರದಿಗಳು ಬಂದ ಬಳಿಕ ಜಾಗೃತಗೊಂಡ ಶಿಕ್ಷಣ ಇಲಾಖೆ, ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳನ್ನು ಇಲ್ಲೇ ಸಮೀಪದಲ್ಲಿ ಕಾರ್ಪೋರೇಷನ್ ಬಳಿ ಇರುವ ನಾರ್ತ್ ಶಾಲೆಗೆ ಸ್ಥಳಾಂತರಿಸಲು ಪ್ರಸ್ತಾವನೆಯೊಂದನ್ನು ಮೇಲಾಧಿಕಾರಿಗಳಿಗೆ ಕಳುಹಿಸಿದ್ದರೂ, ಶಾಲೆ ಮುಚ್ಚುವ ಬಗ್ಗೆ ಬಂದ ವಿರೋಧ ದಿಂದ ಸದ್ಯಕ್ಕೆ ಅದ್ನು ಕೈಬಿಟ್ಟಿರುವುದಾಗಿ ತಿಳಿದುಬಂದಿದೆ.

ಕಳೆದ ವಾರದಿಂದ ಸುರಿಯುತ್ತಿರುವ ಬಿರುಸಿನ ಮಳೆಯಿಂದ, ಈ ಶಾಲೆಯ ಭಾಗವಾಗಿದ್ದು, ಹಿಂದೆ ಇಲ್ಲಿ ಕಾರ್ಯಾ ಚರಿಸುತ್ತಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಒಂದುಪಾರ್ಶ್ಚ ಇದೀಗ ಕುಸಿದಿದೆ. ಇದರಿಂದ ಶಾಲೆಯ ಮಣ್ಣಿನ ಗೋಡೆಯ ಕುರಿತಂತೆ ಆತಂಕ ಎದುರಾಗಿದೆ.

ಸದ್ಯಕ್ಕೆ ಈ ಕಟ್ಟಡದಲ್ಲಿ ಮೂರು ಕೊಠಡಿಗಳಿವೆ. ಎರಡು ಹಾಲ್‌ಗಳಲ್ಲಿ ಕ್ರಮವಾಗಿ 1-3 ಮತ್ತು 4-7ನೆ ತರಗತಿ ನಡೆಯುತ್ತವೆ. ಒಂದು ಕೊಠಡಿಯನ್ನು ಶಾಲಾ ಕಚೇರಿಯನ್ನಾಗಿ ಬಳಸಲಾಗುತ್ತಿದೆ. ಶಾಲೆಯಲ್ಲೀಗ 55 ಮಂದಿ ವಿದ್ಯಾರ್ಥಿಗಳು ಕಲಿಯುತಿದ್ದು, ನಾಲ್ವರು ಶಿಕ್ಷಕಿಯರಿದ್ದಾರೆ. 10 ಮಂದಿ ಮಕ್ಕಳನ್ನು ವಳಕಾಡಿನ ಸೌತ್ ಶಾಲೆಗೆ ಟಿಸಿ ಕೊಟ್ಟು ಕಳುಹಿಸಲಾಗಿದೆ. ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ದೊಂದಿಗೆ ಸರಕಾರದ ಎಲ್ಲಾ ಸೌಲಭ್ಯಗಳು ದೊರೆಯುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X