Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉದ್ಘಾಟನೆಗೂ ಮೊದಲೇ ಶಿಥಿಲಗೊಂಡ ಕಾಲೇಜಿನ...

ಉದ್ಘಾಟನೆಗೂ ಮೊದಲೇ ಶಿಥಿಲಗೊಂಡ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡ

ಹಳೆಯ ಕಟ್ಟಡ ದುರಸ್ಥಿಗೆ ಅನುಧಾನ ಬಿಡುಗಡೆಗೊಳಿಸುವಂತೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ20 July 2017 3:32 PM IST
share
ಉದ್ಘಾಟನೆಗೂ ಮೊದಲೇ ಶಿಥಿಲಗೊಂಡ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡ

ಮೂಡಿಗೆರೆ, ಜು.20: ಡಿಎಸ್‌ಬಿಜಿ ಪ್ರಥಮ ದರ್ಜೆ ಕಾಲೇಜಿನ ಹೊಸದಾಗಿ ನಿರ್ಮಿಸಿರುವ ಹೆಚ್ಚುವರಿ ಕಟ್ಟಡ ಉದ್ಘಾಟನೆಗೆ ಮೊದಲೇ ಮೇಲ್ಚಾವಣಿಯಿಂದ ಮಳೆ ನೀರು ಸೋರಿಕೆಯಾಗುತ್ತಿದೆ.  ಕಳೆದ 3 ತಿಂಗಳ ಹಿಂದೆ ಕಾಮಗಾರಿ ಪೂರ್ಣಗೊಂಡಿರುವ ಈ ಹೆಚ್ಚುವರಿ ಕೊಠಡಿಗಳಿಗೆ 1.ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ಗುತ್ತಿಗೆದಾರನೋರ್ವ ನಿರ್ಮಿಸಿದ 6 ಕೊಠಡಿಗಳ ಈ ಹೊಸ ಕಟ್ಟಡದಲ್ಲಿ ವಿದ್ಯಾರ್ಥಿಗಳನ್ನು ಕೂಳ್ಳಿರಿಸಿ ಪಾಠ ಮಾಡಲು ಸಾಧ್ಯವೇ ಇಲ್ಲ. ವಿದ್ಯಾರ್ಥಿಗಳ ತಲೆಯ ಮೇಲೆ ಕಟ್ಟಡದ ಮೇಲ್ಚಾವಣಿ ಕುಸಿದು ಬೀಳುತ್ತದೆ ಎಂಬ ಭಯವಾಗುತ್ತದೆ ಎಂದು ಉಪನ್ಯಾಸಕರೊಬ್ಬರು ಅಸಹಾಯಕತೆಯಿಂದ ಸುದ್ಧಿಗಾರರ ಮುಂದೆ ಅಳಲು ತೋಡಿಕೊಂಡಿದ್ದಾರೆ.

 ಹೊಸ ಕಟ್ಟಡದ ಕೆಲ ಭಾಗದಲ್ಲಿ ಕಾಮಗಾರಿ ಪೂರ್ತಿಗೊಳಿಸದೇ ಹಾಗೆಯೆ ಉಳಿಸಿ ಗುತ್ತಿಗೆದಾರರು ಕಾಲ್ಕಿತ್ತಿದ್ದಾರೆ. ಕಟ್ಟಡದ ಒಳ ಭಾಗದಲ್ಲಿ ಈಗಾಗಲೆ ಪೊದೆಗಳು ಬೆಳೆದುಬಿಟ್ಟಿದೆ. ಗೋಡೆ, ಕಿಟಕಿ, ಬಾಗಿಲು, ವಿದ್ಯುತ್ ಸಂಪರ್ಕ ಸಹಿತ ನೆಲಕ್ಕೆ ಅಳವಡಿಸಿರುವ ಟೈಲ್ಸ್‌ಗಳು ಕಳಪೆ ಗುಣಮಟ್ಟದ್ದಾಗಿದೆ. ಕಟ್ಟಡದ ಯಾವ ಕೆಲಸಗಳು ಸಮರ್ಪಕವಾಗಿ ನಡೆದಿಲ್ಲ. ಎಲ್ಲವೂ ಅರ್ಧಂಬರ್ಧ ಮುಗಿಸಿ ಉಳಿದರ್ಧವನ್ನು ಹಾಗೆಯೆ ಉಳಿಸಿ ಗುತ್ತಿಗೆದಾರ ಇತ್ತ ಕಡೆ ತಲೆ ಹಾಕಿಲ್ಲ. ಕಾಲೇಜಿನ ಹಳೆಯ ಕಟ್ಟಡವೂ ಯೋಗ್ಯವಾಗಿಲ್ಲ.  ಮಳೆ ಬಂದೊಡನೆ ಮಹಡಿಯ ಮೇಲ್ಚಾವಣಿಯಿಂದ ಕಾಲೇಜಿನ ಎಲ್ಲಾ ಕೊಠಡಿಗಳು ಹಾಗೂ ಹೊರಾಂಗಣ ಮತ್ತು ಸಭಾಂಗಣದಲ್ಲಿ ಮಳೆ ನೀರು ಸೋರಿಕೆಯಾಗಿ ಕೆಸರುಗದ್ದೆಯಂತಾಗಿದೆ. ವಿದ್ಯಾರ್ಥಿಗಳಿಗೆ ಸರಿಯಾಗಿ ಪೀಠೋಪಕರಣಗಳಿಲ್ಲ. ಹಳೆಯ ಕಾಲದ ಮರದ ಡೆಸ್ಕ್‌ಗಳು ಹಾಗೂ ಬೇಂಚ್‌ಗಳಲ್ಲಿ ಕುಳಿತು ವಿದ್ಯಾರ್ಥಿಗಳು ಪಾಠ ಕೇಳುವ ಪರಿಸ್ಥಿತಿ ಉಂಟಾಗಿದೆ.  

ಈ ಶಾಲೆಯ ಕಟ್ಟಡದ ದುರಸ್ಥಿಗೆಂದು ಅನುಧಾನ ಬಿಡುಗಡೆ ಮಾಡಲು ಸರಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಈಗಾಗಲೇ ಕಾಲೇಜು ಕಟ್ಟಡ ಪೂರ್ತಿ ದುರಸ್ಥಿಗೆಂದು ಇಂಜಿನಿಯರ್ ಪ್ಲಾನ್ ಮಾಡಿ, ಅನುಧಾನ ಬಿಡುಗಡೆಗಾಗಿ ಸರಕಾರಕ್ಕೆ ಕಳುಹಿಸಿಕೊಡಲಾಗಿದೆ ಎಂದು ಕಾಲೇಜಿನ ಹಳೆಯ ವಿದ್ಯಾರ್ಥಿ ಜೆ.ಎಸ್.ರಘು ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X