Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿಲ್ಲಾ ಕಾರಾಗೃಹದಲ್ಲಿ ರಾಜಯೋಗದಿಂದ...

ಜಿಲ್ಲಾ ಕಾರಾಗೃಹದಲ್ಲಿ ರಾಜಯೋಗದಿಂದ ಆದರ್ಶ ಜೀವನ ಮತ್ತು ಆರೋಗ್ಯ ಶಿಬಿರ

ವಾರ್ತಾಭಾರತಿವಾರ್ತಾಭಾರತಿ20 July 2017 4:18 PM IST
share
ಜಿಲ್ಲಾ ಕಾರಾಗೃಹದಲ್ಲಿ ರಾಜಯೋಗದಿಂದ ಆದರ್ಶ ಜೀವನ ಮತ್ತು ಆರೋಗ್ಯ ಶಿಬಿರ

ಚಿಕ್ಕಮಗಳೂರು, ಜು.20: ಜೀವಿಗಳಲ್ಲಿ ಮಾನವ ಜೀವಿ ಶ್ರೇಷ್ಠ ಮತ್ತು ಮಾನವ ಜೀವನ ಮಹತ್ವವಾದುದು. ಜಗತ್ತು ಒಂದು ದೊಡ್ಡ ಕರ್ಮಕ್ಷೇತವಾಗಿದ್ರೆ ಕರ್ಮಮಾಡದೇ ಇರಲು ಸಾಧ್ಯವೇ ಇಲ್ಲ ಎಂದು ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿಧ್ಯಾಲಯದ ರಾಜಯೋಗಿನಿ ಬಿ.ಕೆ.ಭಾಗ್ಯಕ್ಕ ತಿಳಿಸಿದರು.

ಅವರು ಜಿಲ್ಲಾ ಕಾರಾಗೃಹದಲ್ಲಿ ಪ್ರಜಾಪಿತ ಬ್ರಹ್ಮಾಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದಿಂದ ಹಮ್ಮಿಕೊಂಡಿದ್ದ ರಾಜಯೋಗದಿಂದ ಆದರ್ಶ ಜೀವನ ಮತ್ತು ಆರೋಗ್ಯ ಸಾಪ್ತಾಹಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕರ್ಮಕ್ಷೇತ್ರವೇ ಕುರುಕ್ಷೇತ್ರವಾಗಿದ್ದು, ವಿರೋಧಾಭಾಸಗಳು ನಮ್ಮದೇ ಕರ್ಮದ ಕಾರಣ ಎದುರಾಗುತ್ತವೆ. ಎಂತಹ ಬೀಜವೋ ಅಂತಹ ಬೆಳೆ. ಅದೇ ರೀತಿ ಎಂತಹ ಕರ್ಮವೋ ಅಂತಹ ಫಲ ಅವಶ್ಯಕವಾಗಿ ಪ್ರಾಪ್ತವಾಗುತ್ತದೆ ಎಂದು ಹೇಳಿದರು.

ನಮ್ಮ ಪ್ರತಿಯೊಂದು ಸಂಕಲ್ಪವೂ ಒಂದೊಂದು ಶಕ್ತಿಶಾಲಿ ಬೀಜವಿದ್ದಂತೆ. ಶ್ರೇಷ್ಠ ಸಮರ್ಥ ಸಂಕಲ್ಪದಿಂದ ಶ್ರೇಷ್ಠ ಕರ್ಮಗಳಾಗುತ್ತವೆ. ಆಗ ಎಲ್ಲರೂ ಬಯಸುವ ಸಫಲತೆ ಎಂಬ ಶ್ರೇಷ್ಠ ಫಲ ಪ್ರಾಪ್ತವಾಗುತ್ತದೆ. ಬದುಕು ಸಾರ್ಥಕವೆನಿಸುತ್ತದೆ. ಇದರಿಂದ ಮಾನಸಿಕ ಆರೋಗ್ಯ, ಶಾರೀರಿಕ ಆರೋಗ್ಯ ಸಹಜವಾಗಿ ದೊರೆಯುತ್ತದೆ. ಉದಾಹರಣೆಗೆ ಅಂಗುಲಿಮಾಲಾ, ವಾಲ್ಮೀಕಿ ಮುಂತಾದವರು. ಪರಿವರ್ತನೆಗೆ ಸರ್ವರಿಗೂ ಅವಕಾಶವಿದೆ ಎಂದು ನುಡಿದರು.
  
ಯಾರು ಪರಿವರ್ತನೆಯನ್ನು ತಂದುಕೊಳ್ಳುವರೋ ಅವರೇ ಮಹಾನ್ ಆತ್ಮರಾಗುತ್ತಾರೆ. ಆ ಕಾರಣ ತಾವು ಇದನ್ನು ಬಂಧೀಖಾನೆ ಎಂದು ಭಾವಿಸದೇ ಒಂದು ಪರಿವರ್ತನಾ ಸ್ಥಾನವೆಂದು ಭಾವಿಸಿ ಪರಿವರ್ತನೆ ಹೊಂದಿ ಬಿಡುಗಡೆಹೊಂದಿ ತಮ್ಮ ಭವಿಷ್ಯವನ್ನು ಶ್ರೇಷ್ಠ ಮಾಡಿಕೊಳ್ಳುವ ದೃಢ ಸಂಕಲ್ಪವನ್ನು ಕೈಕೊಳ್ಳಲು ಮುಂದಾಗಬೇಕೆಂದು ಕರೆನೀಡಿದರು.  

ಕಾರಾಗೃಹದ ಅಧೀಕ್ಷಕ ವಿಜಯಕುಮಾರ ಚೌವ್ಹಾಣ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಧ್ಯಾತ್ಮಿಕ ಜ್ಞಾನ, ರಾಜಯೋಗ ಪ್ರತಿಯೊಬ್ಬರಿಗೂ ಬಹಳ ಅಗತ್ಯ. ಕಾರಾಗೃಹ ವಾಸಿಗಳಿಗೆ ನಿರಂತರವಾಗಿ ನಡೆಯಬೇಕು. ಇದರಿಂದ ಅನೇಕರು ಮನ: ಪರಿವರ್ತನೆ ಹೊಂದಿ ಉತ್ತಮ ಬದುಕನ್ನು ನಡೆಸುತ್ತಿರುವ ಉದಾಹರಣೆಗಳು ಹಲವಾರು ಇವೆ. ಕಾರಾಗೃಹ ಶಿಕ್ಷೆಯನ್ನು ಅನುಭವಿಸುವ ಕೇಂದ್ರವಲ್ಲ ಮನ:ಪರಿವರ್ತನೆಯ ಕೇಂದ್ರವಾಗಿದೆ ಎಂದು ತಿಳಿಸಿದರು. ಶಿಬಿರದಲ್ಲಿ ಇಡೀ ಶರೀರವನ್ನು ಕ್ರಿಯಾಶೀಲಗೊಳಿಸುವ ಚಪ್ಪಾಳೆಯೋಗವನ್ನು ನಿತ್ಯ ಕಲಿಸಲಾಯಿತು.  ಕಾರ್ಯಕ್ರಮದಲ್ಲಿ ಮುಖ್ಯ ವಾರ್ಡನ್ ಸಂಗಪ್ಪ, ಚೀಫ್ ವಾರ್ಡರ್ ಮಹೇಶ್, ಕಾರಾಗೃಹದ ಸಿಬ್ಬಂಧಿ, 175 ಕ್ಕೂ ಹೆಚ್ಚು ಕಾರಾಗೃಹ ವಾಸಿಗಳು ಬಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X