Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋಶಾಲೆಯಲ್ಲಿ ಹಸಿವಿನಿಂದ 30 ದನಗಳ ಸಾವು,...

ಗೋಶಾಲೆಯಲ್ಲಿ ಹಸಿವಿನಿಂದ 30 ದನಗಳ ಸಾವು, ನೂರಾರು ದನಗಳ ಸ್ಥಿತಿ ದಯನೀಯ

ವಾರ್ತಾಭಾರತಿವಾರ್ತಾಭಾರತಿ20 July 2017 5:17 PM IST
share
ಗೋಶಾಲೆಯಲ್ಲಿ ಹಸಿವಿನಿಂದ 30 ದನಗಳ ಸಾವು, ನೂರಾರು ದನಗಳ ಸ್ಥಿತಿ ದಯನೀಯ

ಹೈದರಾಬಾದ್ : ಆಂಧ್ರ ಪ್ರದೇಶದ ಗೋಶಾಲೆಯೊಂದರಲ್ಲಿ ಸುಮಾರು 30 ದನಗಳು ಹಸಿವಿನಿಂದ ನರಳಿ ಸಾವನ್ನಪ್ಪಿವೆಯೆಂದು ತಿಳಿದು ಬಂದಿದೆ. ದೇಶದ ಹಲವೆಡೆ ಗೋರಕ್ಷಣೆಯ ಹೆಸರಿನಲ್ಲಿ ಅಮಾಯಕರನ್ನು ಕೊಲ್ಲಲಾಗುತ್ತಿರುವ ಸಮಯದಲ್ಲಿ ಈ ಪ್ರಾಣಿಗಳು ನಿರ್ಲಕ್ಷ್ಯದಿಂದ ಸಾವನ್ನಪ್ಪುತ್ತಿರುವುದು ವಿಪರ್ಯಾಸವೇ ಸರಿ.

ಪೂರ್ವ ಗೋದಾವರಿ ಜಿಲ್ಲೆಯ ಕಾಕಿನಾಡದಲ್ಲಿರುವ ಸೊಸೈಟಿ ಫಾರ್ ಪ್ರಿವೆನ್ಶನ್ ಆಫ್ ಕ್ರುಯೆಲ್ಟಿ ಟುವರ್ಡ್ಸ್ ಎನಿಮಲ್ಸ್ ಸಂಸ್ಥೆಯ ಆವರಣದಲ್ಲಿ ರಾಶಿಗಟ್ಟಲೆ ಸೆಗಣಿಯೊಂದಿಗೆ ಈ ದನಗಳ ಕಳೇಬರಗಳು ಕೊಳೆತು ನಾರುತ್ತಿರುವುದನ್ನು ಅಧಿಕಾರಿಗಳು ಕಂಡಿದ್ದಾರೆ. ಸುಮಾರು 14 ದನಗಳ ಕಳೇಬರಗಳು ಮಂಗಳವಾರ ಪತ್ತೆಯಾಗಿದ್ದರೆ ನಾಲ್ಕು ದನಗಳು ಬುಧವಾರ ಸಾವಿಗೀಡಾಗಿದ್ದವು.

ಆ ಆಶ್ರಯತಾಣದಲ್ಲಿ ಬದುಕುಳಿದಿರುವ ಸುಮಾರು 400 ಪ್ರಾಣಿಗಳ ಪರಿಸ್ಥಿತಿ ದಯನೀಯವಾಗಿತ್ತು. ಸುಮಾರು 20 ಗೋವುಗಳನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಲಾಗಿದ್ದು ಇನ್ನು ಕೆಲವು ಪ್ರಾಣಿಗಳನ್ನು ಇಂದು ಬೇರೆಡೆಗೆ ಸಾಗಿಸಲಾಗುತ್ತಿದೆ.

ಈ ಗೋಶಾಲೆಯಲ್ಲಿ ಬಡ ಪ್ರಾಣಿಗಳಿಗೆ ಮೇವು ಯಾ ನೀರು ಕೂಡ ಇಲ್ಲವಾಗಿದ್ದು ಹಲವು ಸಮಯದಿಂದ ಅವುಗಳು ಹಸಿವಿನಿಂದ ನರಳುತ್ತಿದ್ದಿರಬೇಕು, ಎಂದು ಪಶುಸಂಗೋಪನಾ ಇಲಾಖೆಯ ಜಂಟಿ ನಿರ್ದೇಶಕರಾದ ವಿ ವೆಂಕಟೇಶ್ವರ ರಾವ್ ತಿಳಿಸಿದ್ದಾರೆ.

ಆ ಗೋಶಾಲೆಯಲ್ಲಿ ಬದುಕುಳಿದ ದನಗಳ ಪರಿಸ್ಥಿತಿ ಕೂಡ ದಯನೀಯವಾಗಿತ್ತಲ್ಲದೆ ಅವುಗಳಿಗೆ ಪೌಷ್ಠಿಕಾಂಶಗಳನ್ನು ಇಂಜೆಕ್ಷನ್ ಮೂಲಕ ಕೂಡ ಕೊಡುವುದು ಕಷ್ಟಕರವಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಗೋಶಾಲೆಯಲ್ಲಿ ಯಾವುದೇ ಶೆಡ್ ಇಲ್ಲವಾಗಿದ್ದು ಸುಮಾರು 200 ಪ್ರಾಣಿಗಳಿಗೆ ಸಾಕಾಗುವಷ್ಟು ಸ್ಥಳದಲ್ಲಿ 45 ದನಗಳನ್ನು ಅಮಾನವೀಯವಾಗಿ ಕೂಡಿ ಹಾಕಲಾಗಿತ್ತು. ಅಲ್ಲಿ ಸ್ವಚ್ಛತೆಯ ಕುರುಹೇ ಇರಲಿಲ್ಲ ಹಾಗೂ ಸೆಗಣಿ ಮತ್ತು ಕೊಳಚೆಯಿಂದ ಸ್ಥಳ ನಾರುತ್ತಿತ್ತು. ಗೋಕಳ್ಳರಿಂದ ರಕ್ಷಿಸಲ್ಪಟ್ಟ ದನಗಳು ಹಾಗೂ ಎತ್ತುಗಳನ್ನು ಇಲ್ಲಿ ಇಡಲಾಗುತ್ತಿತ್ತು.

ಗೋಶಾಲೆ ನಡೆಸುತ್ತಿರುವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗೋಪಾಲ್ ಆರ್ ಸುರಬತುಲ ಪ್ರಕಾರ ಕಳೆದ ಕೆಲ ದಿನಗಳಿಂದ 20 ದನಗಳು ಸತ್ತಿವೆಯಾದರೂ ಅಧಿಕಾರಿಗಳು ವಿಚಾರವನ್ನು ಉತ್ಪ್ರೇಕ್ಷಿಸುತ್ತಿದ್ದಾರೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X