Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮೋದಿಯ ಚೀನಾ ನೀತಿಯನ್ನು ಅಪಹರಿಸಿದ ಹಿಂದೂ...

ಮೋದಿಯ ಚೀನಾ ನೀತಿಯನ್ನು ಅಪಹರಿಸಿದ ಹಿಂದೂ ರಾಷ್ಟ್ರೀಯತೆ

ಚೀನಾದ ಸರಕಾರಿ ಪರ ಪತ್ರಿಕೆ ‘ಗ್ಲೋಬಲ್ ಟೈಮ್ಸ್’

ವಾರ್ತಾಭಾರತಿವಾರ್ತಾಭಾರತಿ20 July 2017 6:55 PM IST
share
ಮೋದಿಯ ಚೀನಾ ನೀತಿಯನ್ನು ಅಪಹರಿಸಿದ ಹಿಂದೂ ರಾಷ್ಟ್ರೀಯತೆ

ಬೀಜಿಂಗ್, ಜು. 20: ಹೆಚ್ಚುತ್ತಿರುವ ಹಿಂದೂ ರಾಷ್ಟ್ರೀಯತೆಯು ಪ್ರಧಾನಿ ನರೇಂದ್ರ ಮೋದಿಯ ಚೀನಾ ನೀತಿಯನ್ನು ಅಪಹರಿಸಿದೆ ಹಾಗೂ ಇದು ಎರಡು ದೇಶಗಳ ನಡುವೆ ಯುದ್ಧಕ್ಕೆ ಕಾರಣವಾಗಬಹುದು ಎಂದು ಚೀನಾದ ಸರಕಾರ ಪರ ಪತ್ರಿಕೆ ‘ಗ್ಲೋಬಲ್ ಟೈಮ್ಸ್’ ಗುರುವಾರ ಹೇಳಿದೆ ಹಾಗೂ ಇದು ಭಾರತದ ಸ್ವಂತ ಹಿತಾಸಕ್ತಿಗಳನ್ನು ‘ಅಪಾಯ’ಕ್ಕೆ ಗುರಿಪಡಿಸಬಹುದಾಗಿದೆ ಎಂದು ಎಚ್ಚರಿಸಿದೆ.

ಭಾರತ ಮತ್ತು ಚೀನಾಗಳ ನಡುವಿನ ಸಿಕ್ಕಿಂ ಗಡಿಯಲ್ಲಿ ಉಭಯ ಸೇನೆಗಳ ನಡುವೆ ಏರ್ಪಟ್ಟಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಭಾರತದ ವಿರುದ್ಧ ಇನ್ನೊಂದು ವಾಗ್ದಾಳಿ ನಡೆಸಿರುವ ಪತ್ರಿಕೆಯು, ‘ರಾಷ್ಟ್ರೀಯ ಸಾಮರ್ಥ್ಯ’ದಲ್ಲಿ ಭಾರತ ಚೀನಾಕ್ಕಿಂತ ದುರ್ಬಲ ಎಂದು ಹೇಳಿದೆ. ಆದರೆ, ಈ ವಾಸ್ತವವನ್ನು ಅರ್ಥಮಾಡಿಕೊಳ್ಳುವಲ್ಲಿ ಭಾರತೀಯ ರಾಜಕಾರಣಿಗಳು ವಿಫಲರಾಗಿದ್ದಾರೆ ಎಂದಿದೆ.

ಈ ಸರಕಾರ 2014ರಲ್ಲಿ ಅಧಿಕಾರಕ್ಕೆ ಬಂದಂದಿನಿಂದ ಮುಸ್ಲಿಮರ ವಿರುದ್ಧ ನಡೆಯುತ್ತಿರುವ ಹಿಂದೂ ರಾಷ್ಟ್ರೀಯವಾದಿ ಹಿಂಸೆಯನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ಪತ್ರಿಕೆಯು ಮೋದಿ ಸರಕಾರಕ್ಕೆ ನೆನಪಿಸಿದೆ.

ಹಾಲಿ ಭಾರತ-ಚೀನಾ ಗಡಿ ಬಿಕ್ಕಟ್ಟು ಪೂರ್ವಯೋಜಿತವಾಗಿದೆ ಹಾಗೂ ಹಿಂದೂ ರಾಷ್ಟ್ರೀಯವಾದಿ ಭಾವನೆಗಳನ್ನು ತೃಪ್ತಿಪಡಿಸಲು ಅದನ್ನು ಜಾರಿಗೊಳಿಸಲಾಗಿದೆ ಎಂದು ಪತ್ರಿಕೆ ಆರೋಪಿಸಿದೆ.

 ಹೆಚ್ಚುತ್ತಿರುವ ಧಾರ್ಮಿಕ ರಾಷ್ಟ್ರೀಯತೆಯ ಅಲೆಯನ್ನೇರಿ ಮೋದಿ 2014ರಲ್ಲಿ ಅಧಿಕಾರಕ್ಕೆ ಬಂದರು ಹಾಗೂ ಈಗ ಅವರು ಚೀನಾ ಮತ್ತು ಪಾಕಿಸ್ತಾನಗಳ ವಿರುದ್ಧ ತನ್ನ ‘ಪ್ರಬಲ’ ನೀತಿಗಳ ಮೂಲಕ ಹಿಂದೂ ರಾಷ್ಟ್ರೀಯ ಭಾವನೆಗಳನ್ನು ತೃಪ್ತಿಪಡಿಸಲು ಯತ್ನಿಸುತ್ತಿದ್ದಾರೆ ಎಂದು ‘ಗ್ಲೋಬಲ್ ಟೈಮ್ಸ್’ ಹೇಳಿದೆ.

ಮುಸ್ಲಿಮರ ಮೇಲೆ ದಾಳಿ ಧಾರ್ಮಿಕ ರಾಷ್ಟ್ರೀಯತೆಯ ಭಾಗ

ಮುಸ್ಲಿಮರ ಮೇಲೆ ದಾಳಿ ನಡೆಸುವುದು ಹೆಚ್ಚುತ್ತಿರುವ ಧಾರ್ಮಿಕ ರಾಷ್ಟ್ರೀಯತೆಯ ಭಾಗವಾಗಿದೆ ಎಂದು ಪತ್ರಿಕೆ ಹೇಳಿದೆ.

‘‘ಧಾರ್ಮಿಕ ರಾಷ್ಟ್ರೀಯತೆ ವಿಕೋಪಕ್ಕೆ ಹೋದರೆ ಮೋದಿ ಸರಕಾರ ಏನೂ ಮಾಡಲಾರದು. ಅವರು 2014ರಲ್ಲಿ ಅಧಿಕಾರಕ್ಕೆ ಬಂದ ನಂತರ ಮುಸ್ಲಿಮರ ವಿರುದ್ಧ ನಡೆಯುತ್ತಿರುವ ದಾಳಿಗಳನ್ನು ಹತ್ತಿಕ್ಕುವಲ್ಲಿನ ಅವರ ವೈಫಲ್ಯವೇ ಇದನ್ನು ಹೇಳುತ್ತದೆ’’ ಎಂಬುದಾಗಿ ಯು ನಿಂಗ್ ಎಂಬವರು ಬರೆದ ‘ಜಿಟಿ ಕಾಮೆಂಟರಿ’ ಎಂಬ ಲೇಖನ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X