Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂದೂ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ...

ಹಿಂದೂ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ನೆರವಾದ ಮುಸ್ಲಿಮರು

ಕೋಮು ಉದ್ವಿಗ್ನತೆಯ ನಡುವೆ ಸೌಹಾರ್ದದ ನಡೆ

ವಾರ್ತಾಭಾರತಿವಾರ್ತಾಭಾರತಿ20 July 2017 7:29 PM IST
share
ಹಿಂದೂ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ನೆರವಾದ ಮುಸ್ಲಿಮರು

ಕೋಲ್ಕತಾ, ಜು.20: ಕೋಮು ಉದ್ವಿಗ್ನತೆಯನ್ನು ನಿವಾರಿಸಲು ಪಶ್ಚಿಮ ಬಂಗಾಲ ಸರಕಾರ ವಿಫಲವಾಗಿದೆ ಎಂಬ ಟೀಕೆ ಕೇಳಿಬರುತ್ತಿರುವ ಸಂದರ್ಭದಲ್ಲೇ, ರಾಜ್ಯದ ಗ್ರಾಮೀಣ ಭಾಗದಲ್ಲಿರುವ ಊರಿನಲ್ಲಿ ಮುಸ್ಲಿಂ ಕುಟುಂಬವೊಂದು ಸಂಕಷ್ಟದಲ್ಲಿದ್ದ ಹಿಂದೂ ಕುಟುಂಬಕ್ಕೆ ಸಹಾಯಹಸ್ತ ಚಾಚಿ ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಘಟನೆ ನಡೆದಿದೆ.

 ನಾಡಿಯ ಜಿಲ್ಲೆಯ ಟೆಹಟ್ಟ ಬಳಿಯ ಪಲಶಿಪರ ದ್ವಾಪರ ಗ್ರಾಮದ ಅಕಾಲಿ ಸರ್ದಾರ್ ಎಂಬ ಹಿಂದೂ ವ್ಯಕ್ತಿಯೋರ್ವ ಮೃತಪಟ್ಟಿದ್ದು ಈತನ ಅಂತ್ಯಸಂಸ್ಕಾರ ನಡೆಸಲೂ ಕೂಡಾ ಈತನ ಕುಟುಂಬ ಸದಸ್ಯರ ಬಳಿ ಹಣವಿರಲಿಲ್ಲ. ಈ ಸಂದರ್ಭ ನೆರೆಮನೆಯ ಮುಸ್ಲಿಂ ಕುಟುಂಬದವರು ಸಹಾಯ ಹಸ್ತ ಚಾಚಿದ್ದು ಅಗತ್ಯವಿದ್ದ ಆರ್ಥಿಕ ನೆರವು ನೀಡಿ ಅಂತ್ಯಸಂಸ್ಕಾರ ಸಾಂಗವಾಗಿ ನೆರವೇರಲು ಸಹಕರಿಸಿದ್ದಾರೆ.

   ಈ ಹಳ್ಳಿಯಲ್ಲಿ ಸುಮಾರು 210 ಕುಟುಂಬಗಳು ವಾಸಿಸುತ್ತಿದ್ದು ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸರ್ದಾರ್ ಕುಟುಂಬದ ಸಮಸ್ಯೆ ಅರಿತೊಡನೆ ಆ ಕುಟುಂಬಕ್ಕೆ ನೆರವಾಗುವಂತೆ ಧ್ವನಿವರ್ಧಕದ ಮೂಲಕ ಮನವಿ ಮಾಡಿಕೊಳ್ಳಲಾಗಿದೆ. ತಕ್ಷಣ ನೆರವಿಗೆ ಧಾವಿಸಿದ ನೆರೆಮನೆಯ ಮುಸ್ಲಿಂ ಕುಟುಂಬದವರು ಆರ್ಥಿಕ ನೆರವು ನೀಡಿದ್ದು ಬಳಿಕ ಮೃತದೇಹವನ್ನು ಸುಮಾರು 26 ಕಿ.ಮೀ. ದೂರ ಇರುವ ಸ್ಮಶಾನಕ್ಕೆ ಕೊಂಡೊಯ್ಯಲಾಯಿತು. ಗಮನಾರ್ಹವೆಂದರೆ ಮೃತದೇಹವನ್ನು ಸ್ಮಶಾನಕ್ಕೆ ಹೊತ್ತೊಯ್ಯಲೂ ಹೆಗಲು ನೀಡಿದ ಇವರು, ಅಂತ್ಯವಿಧಿ ಮುಗಿಯುವವರೆಗೂ ಸ್ಥಳದಲ್ಲಿದ್ದರು.

  ನೆರೆಮನೆಯವರಾದ ಮೇಲೆ ಇಷ್ಟೂ ಮಾಡದಿದ್ದರೆ ಹೇಗೆ. ನಾವು ಸಹಾಯಹಸ್ತ ಚಾಚದಿದ್ದರೆ ಮತ್ಯಾರು ನೀಡಿಯಾರು. ಅಲ್ಲದೆ ಅಕಾಲಿ ಮತ್ತು ನಾನು ಜೊತೆಯಲ್ಲೇ ಆಡಿ ಬೆಳೆದವರು. ಆರ್ಥಿಕ ಸಂಕಷ್ಟದಿಂದ ಕುಟುಂಬ ಕಂಗಾಲಾಗಿತ್ತು. ನಾವು ಸಹಾಯ ಮಾಡಿದೆವು ಎಂದು ಸ್ಥಳೀಯರಾದ ಗುಲಾಂ ಹೊಸೈನ್ ಶೇಖ್ ಹೇಳಿದ್ದಾರೆ.

ನೆರೆಮನೆಯ ಮುಸ್ಲಿಮ್ ಕುಟುಂಬದವರು ಮಾಡಿರುವ ಸಹಾಯಕ್ಕೆ ನಾವು ಚಿರಋಣಿಗಳಾಗಿದ್ದೇವೆ ಎಂದು ಅಕಾಲಿ ಸರ್ದಾರ್ ಪತ್ನಿ ಮತ್ತು ಪುತ್ರರು ತಿಳಿಸಿದ್ದಾರೆ. ಪ್ರಕರಣದ ಮಾಹಿತಿ ಪಡೆದ ಕ್ಷೇತ್ರ ಅಭಿವೃದ್ಧಿ ಅಧಿಕಾರಿ(ಬಿಡಿಒ) ಅಭಿಜಿತ್ ಚೌಧರಿ, ಕೋಮು ಸೌಹಾರ್ದತೆಗೆ ಉತ್ತಮ ನಿದರ್ಶನವೊಂದನ್ನು ಈ ಪ್ರದೇಶದ ಮುಸ್ಲಿಮರು ಹಾಕಿಕೊಟ್ಟಿದ್ದಾರೆ ಎಂದು ಶ್ಲಾಘಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X