Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೊಬೈಲ್ ಗೆ ಮೆಸೇಜ್ ಬಂದಿದ್ದೇ ಅಪರಾಧ !

ಮೊಬೈಲ್ ಗೆ ಮೆಸೇಜ್ ಬಂದಿದ್ದೇ ಅಪರಾಧ !

ದೇಶದ್ರೋಹದ ಆರೋಪದಲ್ಲಿ ಬಂಧಿಸಿದ ಪೊಲೀಸರಿಗೆ ನ್ಯಾಯಾಧೀಶರು ಹೇಳಿದ್ದೇನು ?

ವಾರ್ತಾಭಾರತಿವಾರ್ತಾಭಾರತಿ20 July 2017 9:40 PM IST
share
ಮೊಬೈಲ್ ಗೆ ಮೆಸೇಜ್ ಬಂದಿದ್ದೇ ಅಪರಾಧ !

ಚೆನ್ನೈ, ಜು. 20 : ದೇಶ ವಿರೋಧಿ, ಭಯ, ಸಂಶಯ ಸೃಷ್ಟಿಸುವ ಮೆಸೇಜ್ ಗಳನ್ನು ಕಳಿಸಿದರೆ ಸಮಸ್ಯೆ ಕಟ್ಟಿಟ್ಟ ಬುತ್ತಿ. ಆದರೆ ಕಾನೂನಿನ ಕೈ ಎಷ್ಟು ದೊಡ್ಡದಿದೆ ನೋಡಿ ! ಚೆನ್ನೈಯಲ್ಲಿ ವ್ಯಕ್ತಿಯೊಬ್ಬನ ಮೊಬೈಲ್ ಗೆ ' ದೇಶ ವಿರೋಧಿ' ಎಂದು ಆರೋಪಿಸಲಾದ ಮೆಸೇಜ್ ಒಂದು ಬಂದಿದೆ. ಅದಕ್ಕಾಗಿ ಆತನನ್ನು ಬಂಧಿಸಲಾಗಿದೆ ! 
ಚೆನ್ನೈ ವಿಮಾನ ನಿಲ್ದಾಣಕ್ಕೆ ಗಲ್ಫ್ ನಿಂದ ಮರಳಲಿದ್ದ ತನ್ನ ಮಿತ್ರನನ್ನು ಕರೆದುಕೊಂಡು ಬರಲೆಂದು ಹೋಗಿದ್ದ ಅಕ್ಬರ್ ಸಲೀಂ ಎಂಬ ವ್ಯಕ್ತಿ ಈ ರೀತಿ ಬಂಧನಕ್ಕೆ ಒಳಗಾದವರು. ಸಲೀಂ ಅವರ ಮಿತ್ರ ಗಲ್ಫ್ ನಿಂದ ಬರುವಾಗ ಹೆಚ್ಚುವರಿ ಚಿನ್ನ ತಂದಿದ್ದಾನೆ ಎಂಬ ಕಾರಣಕ್ಕೆ ಕಸ್ಟಮ್ಸ್ ಇಲಾಖೆಯವರು ಆತನನ್ನು ತಡೆದು ವಿಚಾರಣೆ ನಡೆಸಿದ್ದಾರೆ. ಆದರೆ ಈ ಸಂದರ್ಭದಲ್ಲಿ ಮಿತ್ರನನ್ನು ಹುಡುಕಿಕೊಂಡು ಅಲ್ಲಿಗೆ ಬಂದ ಸಲೀಂ ಕಸ್ಟಮ್ಸ್ ಅಧಿಕಾರಿಗಳ ಕೈಯಲ್ಲಿ ಬಲಿಪಶುವಾಗಿದ್ದಾನೆ. ಆತನಿಂದ ಬೇರೆ ಯಾವುದೇ ತಪ್ಪು ನಡೆದಿರಲಿಲ್ಲ. ಆದರೆ ಆತನ ಮೊಬೈಲ್ ಗೆ ಒಂದು ಆಡಿಯೋ ಮೆಸೇಜ್ ಬಂದಿತ್ತು. ಅದನ್ನು ವಿಮಾನ ನಿಲ್ದಾಣದ ಪೊಲೀಸರಿಗೆ ಕಸ್ಟಮ್ಸ್ ಅಧಿಕಾರಿಗಳು ತೋರಿಸಿದ್ದಾರೆ. ಮೆಸೇಜ್ ಕೇಳಿದ ತಕ್ಷಣ ಪೊಲೀಸರು ಇದು ದೇಶ ವಿರೋಧಿ ಮೆಸೇಜ್ ಎಂದು ನಿರ್ಧರಿಸಿ, ಸಲೀಂ ನನ್ನು ದೇಶ ವಿರೋಧಿ ಮೆಸೇಜ್ ಸ್ವೀಕರಿಸಿದ ಆರೋಪದಲ್ಲಿ ಬಂಧಿಸಿದ್ದಾರೆ. 
ಆದರೆ ನ್ಯಾಯಾಲಯದಲ್ಲಿ ಪೊಲೀಸರಿಗೆ ಮಂಗಳಾರತಿ ಆಗಿದೆ. ಇಲ್ಲಿನ ನ್ಯಾಯಾಲಯವೊಂದರ ಮ್ಯಾಜಿಸ್ಟ್ರೇಟ್ " ಒಬ್ಬನ ಮೊಬೈಲ್ ಗೆ ಯಾರೋ ಕಳಿಸಿದ ಒಂದು ಮೆಸೇಜ್ ಆಧಾರದಲ್ಲಿ ವ್ಯಕ್ತಿಯನ್ನು ದೇಶ ವಿರೋಧಿ ಪ್ರಕರಣದಲ್ಲಿ ಬಂಧಿಸಲು ಸಾಧ್ಯವಿಲ್ಲ " ಎಂದು ಸ್ಪಷ್ಟವಾಗಿ ಹೇಳಿ ಸಲೀಂ ನನ್ನು ಬಿಡುಗಡೆ ಮಾಡಿದ್ದಾರೆ. 
ಸಲೀಂ ಗೆ ಬಂದ ಮೆಸೇಜ್ ಉರ್ದು ಭಾಷೆಯಲ್ಲಿದ್ದು , ಜಂತರ್ ಮಂತರ್ ನಲ್ಲಿ ನಡೆಯಲಿರುವ ಪ್ರತಿಭಟನೆಯೊಂದಕ್ಕೆ ಎಲ್ಲರೂ ಬರಬೇಕು ಎಂದು ಅದರಲ್ಲಿ ಕೇಳಿಕೊಳ್ಳಲಾಗಿತ್ತು. ಆದರೆ ಯಾವ ಪ್ರತಿಭಟನೆ ಹಾಗು ಯಾವಾಗ ಅದು ನಡೆಯಲಿದೆ ಎಂದು ಅದರಲ್ಲಿ ವಿವರಗಳನ್ನು ನೀಡಲಾಗಿರಲಿಲ್ಲ. 
ಇದೇ ಮೊದಲ ಬಾರಿಗೆ ಮೆಸೇಜ್ ಅನ್ನು ಸ್ವೀಕರಿಸಿದ ' ತಪ್ಪಿಗೆ' ಬಂಧಿಸಲಾಗಿದೆ. ಅಂದ ಹಾಗೆ, ವಾಟ್ಸ್ ಆಪ್ ನಲ್ಲಿ ಯಾರೂ ಮೆಸೇಜ್ ಕಳಿಸದಂತೆ ಮೊದಲೇ ತಡೆಯಲು ಸಾಧ್ಯವಿಲ್ಲ. ಒಬ್ಬ ವ್ಯಕ್ತಿ ಒಂದು ಮೆಸೇಜ್ ಕಳಿಸಿದ ಬಳಿಕ ಆತನನ್ನು ಬ್ಲಾಕ್ ಮಾಡಬಹುದು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X