Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಪ್ರತಿದಿನ ವಿಶೇಷ
  3. ನಿಧನ
  4. ವೆಂಕಟ್ರಮಣ ಭಟ್

ವೆಂಕಟ್ರಮಣ ಭಟ್

ವಾರ್ತಾಭಾರತಿವಾರ್ತಾಭಾರತಿ21 July 2017 11:46 PM IST
share
ವೆಂಕಟ್ರಮಣ ಭಟ್

ಪುತ್ತೂರು, ಜು. 21: ಆಯುರ್ವೇದ ವೈದ್ಯಲೋಕದ ನಡೆದಾಡುವ ವಿಶ್ವಕೋಶ ಎಂದೇ ಹೆಸರುವಾಸಿಯಾಗಿದ್ದ ಗಿಡಮೂಲಿಕಾ ನಾಟಿ ವೈದ್ಯ ಪುತ್ತೂರು ತಾಲ್ಲೂಕಿನ ಪಾಣಾಜೆ ಗ್ರಾಮದ ದೈತೋಟ ನಿವಾಸಿ ವೆಂಕಟ್ರಮಣ ಭಟ್(77) ಅವರು ಶುಕ್ರವಾರ ನಿಧನರಾದರು.

ಎಂಜಿನಿಯರ್ ವೃತ್ತಿಯಲ್ಲಿದ್ದ ವೆಂಕಟ್ರಮಣ ಭಟ್ ಅವರು ತಮ್ಮ ಈ ವೃತ್ತಿಯನ್ನು ತ್ಯಜಿಸಿ ಪರಂಪರಾಗತವಾಗಿ ಬಂದಿದ್ದ ಆಯುರ್ವೇದಿಕ್ ನಾಟಿ ವೈದ್ಯ ವೃತ್ತಿಯನ್ನು ಮುಂದುವರಿಸಿದ್ದರು. ರೋಗಿಗಳನ್ನು ಉಚಿತವಾಗಿ ತಪಾಸಣೆಗೊಳಿಸಿ ಆಯುರ್ವೇದ ಔಷಧಿ ನೀಡುತ್ತಿದ್ದರು. ಸ್ತ್ರೀರೋಗ, ಕ್ಯಾನ್ಸರ್ ಸಹಿತ ಎಲ್ಲಾ ವಿದಧ ರೋಗಗಳಿಗೂ ಚಿಕಿತ್ಸೆ ನೀಡುವ ಮೂಲಕ ಜನಪ್ರಿಯ ಆರ್ಯುವೇದ ಪಂಡಿತರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

ತಮ್ಮ ವೃದ್ದಾಪ್ಯ ವಯಸ್ಸಿನಲ್ಲಿಯೂ ಅತ್ಯಂತ ಚಟುವಟಿಕೆಯುಕ್ತರಾಗಿದ್ದ ವೆಂಕಟ್ರಮಣ ಭಟ್ ಅವರು ಶುಕ್ರವಾರ ಪುತ್ತೂರಿಗೆ ತೆರಳಲೆಂದು ತಮ್ಮ ಮನೆಯಿಂದ ಕರ್ನಾಟಕ ಕೇರಳ ಗಡಿಪ್ರದೇಶದ ಸ್ವರ್ಗ ಎಂಬಲ್ಲಿರುವ ಪ್ರಯಾಣಿಕರ ಬಸ್ ತಂಗುದಾಣಕ್ಕೆ ಬಂದು ಪುತ್ತೂರಿಗೆ ಬರುವ ಖಾಸಗಿ ಬಸ್ಸೊಂದನ್ನು ಏರುತ್ತಿದ್ದ ವೇಳೆ ಕುಸಿದುಬಿದ್ದರು. ತಕ್ಷಣ ಅವರನ್ನು ಪುತ್ತೂರಿಗೆ ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದ ವೇಳೆ ಅವರು ದಾರಿ ಮಧ್ಯೆ ಕೊನೆಯುಸಿರೆಳೆದಿದ್ದು ಅವರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಖ್ಯಾತ ಪರಿಸರವಾದಿ ದಿವಂಗತ ಶಂಪಾ ದೈತೋಟ, ಪತ್ರಕರ್ತ ಈಶ್ವರ ದೈತೋಟ ಅವರ ಸಹೋದರರಾಗಿದ್ದ ವೆಂಕಟ್ರಮಣ ಭಟ್ ಅವರು ವೃತ್ತಿಗಿಂತ ತಮ್ಮ ನಾಟಿ ಚಿಕಿತ್ಸೆಯ ಪ್ರವೃತ್ತಿಯ ಮೂಲಕ ಮನೆ ಮಾತಾಗಿದ್ದರು. ಉತ್ತರ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ರೋಗಿಗಳು ಬಂದು ಅವರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಸಸ್ಯ ಶಾಸ್ತ್ರ ಪರಿಣತರಾಗಿದ್ದ ಭಟ್ ಅವರು ಪ್ರತಿಯೊಂದು ಸಸ್ಯದ ಪರಿಚಯವುಳ್ಳವರಾಗಿದ್ದರು. ಸಸ್ಯ ಶಾಸ್ತ್ರಕ್ಕೆ ಸಂಬಂಧಿಸಿ ಅವರು ಹಲವಾರು ಲೇಖನಗಳನ್ನು ಬರೆದಿದ್ದಾರೆ. ಕೃಷಿಪರ ಮಾಸ ಪತ್ರಿಕೆಯಾದ ‘ಅಡಿಕೆ ಪತ್ರಿಕೆ’ ಜೊತೆ ನಿಕಟ ಒಡನಾಟ ಹೊಂದಿದ್ದರು. ಗಿಡಮೂಲಿಕೆ ಔಷಧಿಗಳಿಗೆ ಸಂಬಂಧಿಸಿದ ಅವರು ಲೇಖನಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.
ಅವಿಭಜಿತ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ವಿವಿದೆಡೆಗಳಲ್ಲಿ ‘ಆಹಾರ ಔಷಧಿ ’ ಬಗ್ಗೆ ಉಪನ್ಯಾಸ ಕಾರ್ಯಕ್ರಮಗಳನ್ನು ನೀಡಿದ್ದ ವೆಂಕಟ್ರಮಣ ಭಟ್ ಅವರು ಸಸ್ಯ ಪ್ರಬೇಧಗಳ ಬಗ್ಗೆ ಅಪಾರ ಜ್ಞಾನವುಳ್ಳವರಾಗಿದ್ದರು. ಮೃತರು ಪತ್ನಿ ಮತ್ತು ಮೂವರು ಸಹೋದರರು ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X