Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭೂಮಿ ರಾಷ್ಟ್ರೀಕರಣದಿಂದ ಸಮಾನತೆ:...

ಭೂಮಿ ರಾಷ್ಟ್ರೀಕರಣದಿಂದ ಸಮಾನತೆ: ಸುಖದೇವ್ ಥೋರಟ್

ವಾರ್ತಾಭಾರತಿವಾರ್ತಾಭಾರತಿ22 July 2017 5:55 PM IST
share
ಭೂಮಿ ರಾಷ್ಟ್ರೀಕರಣದಿಂದ ಸಮಾನತೆ: ಸುಖದೇವ್ ಥೋರಟ್

ಬೆಂಗಳೂರು, ಜು. 22: ದಲಿತರು ಮತ್ತು ಶೋಷಿತ ಸಮುದಾಯಗಳಿಗೆ ಸಮಾನತೆ ನಿರಾಕರಿಸಿದರೆ ಉಳಿದೆಲ್ಲಾ ಹಕ್ಕುಗಳನ್ನು ನಿರಾಕರಣೆ ಮಾಡಿದಂತೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಹೋರಾಟದ ಮೂಲ ತತ್ವವೇ ಸಮಾನತಾ ಸಿದ್ಧಾಂತ ಎಂದು ಜೆಎನ್‌ಯು ಪ್ರಾಧ್ಯಾಪಕ ಸುಖದೇವ್ ಥೋರಟ್ ಅಭಿಪ್ರಾಯಿಸಿದ್ದಾರೆ.

ಶನಿವಾರ ಇಲ್ಲಿನ ಜಿಕೆವಿಕೆ ಆವರಣದಲ್ಲಿ ಏರ್ಪಡಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಗೋಷ್ಟಿಯಲ್ಲಿ ಮಾತನಾಡಿದ ಅವರು, ಭೂಸುಧಾರಣೆ ಕಾಯ್ದೆಯಿಂದ ಅಸ್ಪಶ್ಯತೆ ನಿರ್ಮೂಲನೆ ಆಗುವುದಿಲ್ಲ. ಹೀಗಾಗಿ ಭೂಮಿ ರಾಷ್ಟ್ರೀಕರಣಗೊಳಿಸಿ ಎಲ್ಲರಿಗೂ ಸಮಾನವಾಗಿ ಹಂಚಿಕೆ ಮಾಡಬೇಕೆಂಬುದು ಅಂಬೇಡ್ಕರ್ ಅವರ ಆಶಯವಾಗಿತ್ತು. ಆದರೆ, ಅನಂತರ ಜಾರಿಗೆ ಬಂದ ಭೂಸುಧಾರಣೆ ಕಾಯ್ದೆಗಳಿಂದ ರಾಷ್ಟ್ರದಲ್ಲಿ ಅಸ್ಪಶ್ಯತೆ ಮತ್ತಷ್ಟು ಹೆಚ್ಚಾಗಿದೆ. ಹೊಸ ರೂಪದ ಜಾತಿ ಪದ್ಧತಿ, ಅಸಮಾನತೆಗೆ ಕಾಯ್ದೆ ಸಾಕ್ಷಿಯಾಗಿದೆ. ಆದುದರಿಂದ ಭೂಮಿ ರಾಷ್ಟ್ರೀಕರಣಕ್ಕೆ ಹೋರಾಟ ಅಗತ್ಯ ಎಂದು ಇದೇ ವೇಳೆ ತಿಳಿಸಿದರು.

ಖಾಸಗೀಕರಣ ಸಲ್ಲ: ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಯಾವುದೇ ಕಾರಣಕ್ಕೂ ಖಾಸಗೀಕರಣ ಆಗಬಾರದೆಂಬುದು ಅಂಬೇಡ್ಕರ್ ನಿಲುವಾಗಿತ್ತು. ಆದರೆ, ಇದೀಗ ಈ ಎರಡೂ ಕ್ಷೇತ್ರಗಳು ಖಾಸಗೀಕರಣಗೊಂಡಿರುವುದರಿಂದ ದಲಿತರಿಗೆ ಸಮಾನ ಅವಕಾಶಗಳು ದೊರೆಯುತ್ತಿಲ್ಲ ಎಂದು ಆಕ್ಷೇಪಿಸಿದರು.
ದೇಶದಲ್ಲಿ ಸುಮಾರು 230 ಖಾಸಗಿ ವಿಶ್ವ ವಿದ್ಯಾಲಯಗಳು ಪ್ರಾರಂಭವಾಗಿವೆ. ಖಾಸಗಿ ಕ್ಷೇತ್ರದಲ್ಲಿ ದಲಿತ-ಶೋಷಿತರಿಗೆ ಉದ್ಯೋಗಾವಕಾಶಗಳು ದೊರೆಯುತ್ತಿಲ್ಲ. ಅಲ್ಲದೆ, ಸಾರ್ವಜನಿಕ ವಲಯದ ಉದ್ದಿಮೆಗಳನ್ನು ಖಾಸಗೀಕರಣ ಮಾಡಿರುವುದರಿಂದ ದಲಿತರು ಉದ್ಯೋಗಾವಕಾಶಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಹೇಳಿದರು.

ರಾಷ್ಟ್ರೀಯವಾದಿ: ಅಂಬೇಡ್ಕರ್ ಅವರು ಕೇವಲ ದಲಿತ ವಕ್ತಾರರಂತೆ ನೋಡುವ ದೃಷ್ಟಿ ಬದಲಾಗಬೇಕು. ಅವರೂ ಓರ್ವ ರಾಷ್ಟ್ರೀಯವಾದಿ ಎಂಬುದನ್ನು ಯಾರೂ ಮರೆಯಬಾರದು ಎಂದು ಖ್ಯಾತ ಚಿಂತಕ ಲಾರ್ಡ್ ಭಿಖು ಪರೇಕ್ ಎಂದು ಸಲಹೆ ನೀಡಿದರು. ಮಹಾತ್ಮ ಗಾಂಧಿ ಅವರನ್ನು ರಾಷ್ಟ್ರೀಯವಾದಿ ಎಂದು ಪರಿಗಣಿಸಲಾಗುತ್ತಿದೆ. ಅದೇ ರೀತಿ ಅಂಬೇಡ್ಕರ್ ಅವರನ್ನೂ ರಾಷ್ಟ್ರೀಯವಾದಿ ಎಂದು ಬಿಂಬಿಸಬೇಕು ಎಂದ ಅವರು, ಗಾಂಧೀಜಿ ಅವರನ್ನು ‘ಬುದ್ಧಿವಂತ ಬನಿಯಾ’ ಎಂಬಂತೆ ಅಂಬೇಡ್ಕರ್ ಅವರನ್ನು ದಲಿತ ವಕ್ತಾರರು ಎಂಬುದಕ್ಕೆ ಸೀಮಿತಗೊಳಿಸಬಾರದೆಂದು ಪರೋಕ್ಷವಾಗಿ ಬಿಜೆಪಿಗೆ ತಿರುಗೇಟು ನೀಡಿದರು.

ಅಂಬೇಡ್ಕರ್ ಅವರನ್ನು ಕೇವಲ ಭಾರತದ ಪ್ರಜಾತಂತ್ರ ವ್ಯವಸ್ಥೆಗೆ ಸೀಮಿತಗೊಳಿಸದೆ, ಗಣರಾಜ್ಯವೆಂದೂ ಪರಿಗಣಿಸಬೇಕು. ಆಗ ಮಾತ್ರ ಎಲ್ಲ ವರ್ಗದವರಿಗೂ ನ್ಯಾಯ ದೊರಕಲು ಸಾಧ್ಯ ಎಂದು ಅಂಬೇಡ್ಕರ್ ಅವರ ನಂಬಿದ್ದರು ಎಂದು ಅವರು ಇದೇ ವೇಳೆ ವಿಶ್ಲೇಷಿಸಿದರು.
ದಲಿತರು ಮತ್ತು ಶೋಷಿತರಿಗೆ ರಾಜಕೀಯ ನ್ಯಾಯಕ್ಕಿಂತ ಸಾಮಾಜಿಕ, ಆರ್ಥಿಕ ಸಮಾನತೆ, ಸಮಾನ ಅವಕಾಶಗಳು ಸಿಕ್ಕಾಗ ಮಾತ್ರ ದಲಿತರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂಬುದನ್ನು ಅಂಬೇಡ್ಕರ್ ಸಂವಿಧಾನದ ಮೂಲಕ ಒತ್ತಿ ಹೇಳಿದ್ದಾರೆಂದು ತಿಳಿಸಿದರು.

ಪ್ರಜಾಪ್ರಭುತ್ವ, ಗಣರಾಜ್ಯ ದೇಶದಲ್ಲಿ ದಲಿತ-ಶೋಷಿತರಿಗೆ ಪೂರ್ಣ ಪ್ರಮಾಣದ ಸಮಾನತೆ, ಸಮಾನ ಅವಕಾಶಗಳು ಸಿಗಬೇಕು. ಜಾತಿ, ಅಸ್ಪಶ್ಯತೆಯಂತಹ ಅನಿಷ್ಟಗಳು ತೊಲಗಬೇಕು. ಆಗ ಮಾತ್ರವೇ ಸಾಮಾಜಿಕ ಸುಧಾರಣೆ ಸಾಧ್ಯ ಎಂದು ಅವರು ಪ್ರತಿಪಾದಿಸಿದರು. ಗೋಷ್ಠಿಯಲ್ಲಿ ಚಿಂತಕ ಕೆ. ರಾಜು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X