Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ​ಜೆಡಿಎಸ್ ಗೆದ್ದರೆ ನನ್ನ ರುಂಡ...

​ಜೆಡಿಎಸ್ ಗೆದ್ದರೆ ನನ್ನ ರುಂಡ ಕತ್ತರಿಸಿಕೊಳ್ಳುತ್ತೇನೆ: ಝಮೀರ್‌ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ22 July 2017 7:38 PM IST
share
​ಜೆಡಿಎಸ್ ಗೆದ್ದರೆ ನನ್ನ ರುಂಡ ಕತ್ತರಿಸಿಕೊಳ್ಳುತ್ತೇನೆ: ಝಮೀರ್‌ ಅಹ್ಮದ್

ಬೆಂಗಳೂರು, ಜು.22: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವು ಸಾಧಿಸಿದರೆ ನನ್ನ ರುಂಡವನ್ನೇ ಕತ್ತರಿಸಿ ಮಾಧ್ಯಮದವರ ಕೈಗೆ ಇಡುತ್ತೇನೆ ಎಂದು ಜೆಡಿಎಸ್ ಬಂಡಾಯ ಶಾಸಕ ಬಿ.ಝೆಡ್.ಝಮೀರ್‌ ಅಹ್ಮದ್‌ಖಾನ್ ಸವಾಲು ಹಾಕಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲುವುದಿರಲಿ, ಕನಿಷ್ಠ ಠೇವಣಿಯನ್ನು ಉಳಿಸಿಕೊಳ್ಳಲಿ ಸಾಕು. ಒಂದು ವೇಳೆ ಈ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದರೆ ನನ್ನ ರುಂಡ ಕತ್ತರಿಸಿಕೊಂಡು ಮಾಧ್ಯಮದವರ ಕೈಗೆ ಇಡುತ್ತೇನೆ ಎಂದರು.

"2005ರಲ್ಲಿ ಚಾಮರಾಜಪೇಟೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆ ಸಂದರ್ಭದಲ್ಲಿ ದೇವೇಗೌಡರು ನನಗಾಗಿ 20 ದಿನಗಳ ಕಾಲ ಇಲ್ಲೇ ಇದ್ದು, ದರಿದ್ರ ನಾರಾಯಣ ರ್ಯಾಲಿ ಆಯೋಜಿಸಿ, ಮನೆ, ಮನೆ, ಬೀದಿ ಬೀದಿಗೆ ತೆರಳಿ ಪ್ರಚಾರ ಮಾಡಿದ್ದನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ" ಎಂದು ಝಮೀರ್‌ ಅಹ್ಮದ್ ತಿಳಿಸಿದರು.

"ನಾನು ದೇವೇಗೌಡರ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ. ಅವರ ರಾಜಕೀಯ ಅನುಭವದಷ್ಟು ನನಗೆ ವಯಸ್ಸಾಗಿಲ್ಲ. ನಾವು ಕುಮಾರಸ್ವಾಮಿಗೆ ಏನು ಅನ್ಯಾಯ ಮಾಡಿದ್ದೇವೆ ಎಂಬುದರ ಬಗ್ಗೆ ನೇರವಾಗಿ ಕುಮಾರಸ್ವಾಮಿ ಜೊತೆಯೆ ಬಹಿರಂಗ ಚರ್ಚೆಗೆ ಸಿದ್ಧವಿರುವುದಾಗಿ ಈ ಹಿಂದೆಯೇ ಹೇಳಿದ್ದೇನೆ" ಎಂದು ಅವರು ಹೇಳಿದರು.

"ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಲು ದೇವೇಗೌಡರು ಹೊರಟಿದ್ದಾರೆ. ಅವರ ವಿಜಯಯಾತ್ರೆಯನ್ನು ಚಾಮರಾಜಪೇಟೆಯಿಂದಲೆ ಪ್ರಾರಂಭಿಸುವುದಾಗಿ ಹೇಳಿದ್ದಾರೆ. ರಾಜ್ಯದಲ್ಲಿ 224 ಕ್ಷೇತ್ರಗಳಿವೆ. ಅವುಗಳನ್ನೆಲ್ಲ ಬಿಟ್ಟು ಕೇವಲ ಈ ಕ್ಷೇತ್ರವೊಂದರಲ್ಲಿ ಮಾತ್ರ ಗೆಲ್ಲಿಸಿ ಮುಖ್ಯಮಂತ್ರಿ ಮಾಡುವುದಾದರೆ ಸಂತೋಷ" ಎಂದು ಝಮೀರ್‌ಅಹ್ಮದ್ ತಿಳಿಸಿದರು.

"ಬಿಬಿಎಂಪಿ ಉಪಮೇಯರ್ ಸ್ಥಾನಕ್ಕೆ ಎರಡು ಬಾರಿಯೂ ಒಕ್ಕಲಿಗರನ್ನೆ ಆಯ್ಕೆ ಮಾಡಿದ್ದಾರೆ. ಆಗ ಯಾಕೆ ಅವರಿಗೆ ಮುಸ್ಲಿಮರು ನೆನಪಾಗಲಿಲ್ಲ. ಈಗ ಮುಸ್ಲಿಮರಿಗೆ ಪ್ರಾತಿನಿಧ್ಯ ನೀಡುವ ಮಾತುಗಳನ್ನಾಡುತ್ತಿದ್ದಾರೆ. ದೇವೇಗೌಡರ ಬಗ್ಗೆ ಗೌರವವಿದೆ. ಅವರ ಬಾಯಿಯಲ್ಲಿ ಈ ರೀತಿಯ ಮಾತುಗಳು ಬರಬಾರದಿತ್ತು ಎಂದು ಅವರು ಹೇಳಿದರು. ದೇವೇಗೌಡರು ಈ ರೀತಿಯ ರಾಜಕೀಯ ಮಾಡುತ್ತಾರೆ ಎಂದು ನಾನು ಕನಸಿನಲ್ಲಿಯೂ ಅಂದುಕೊಂಡಿರಲಿಲ್ಲ. ಈ ಕ್ಷೇತ್ರದಲ್ಲಿ ಜೆಡಿಎಸ್ ಸಮಾವೇಶ ಆಯೋಜಿಸಲು ಒಂದು ತಿಂಗಳಿನಿಂದ ಅವರು ಶ್ರಮಿಸಿದ್ದಾರೆ. ಆ ಸಮಾವೇಶಕ್ಕೆ ನಾನೇಕೆ ಅಡ್ಡಿಪಡಿಸಲಿ. ಅಲ್ಲಿ ಎಷ್ಟು ಜನ ಸೇರುತ್ತಾರೆ, ಯಾರು ಹೋಗುತ್ತಾರೆ ಎಂಬ ಮಾಹಿತಿ ನನಗೂ ಬೇಕಲ್ಲವೆ, ಮುಂದಿನ ಚುನಾವಣೆಯ ಸಿದ್ಧತೆಗಾಗಿ ಎಂದು ಅವರು ತಿಳಿಸಿದರು.
2005ರ ಚುನಾವಣೆ ನಂತರ ನನ್ನ ಕ್ಷೇತ್ರಕ್ಕೆ ಪಕ್ಷದ ಯಾವೊಬ್ಬ ನಾಯಕನನ್ನು ಪ್ರಚಾರಕ್ಕೆ ನಾನು ಕರೆ ತಂದಿಲ್ಲ. ಸ್ವಂತ ಶಕ್ತಿಯ ಆಧಾರದಲ್ಲಿ ಚುನಾವಣೆಗಳನ್ನು ಗೆದ್ದು ಬರುತ್ತಿದ್ದೇನೆ. 2004ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎಷ್ಟು ಮತಗಳನ್ನು ಪಡೆದಿದ್ದರು ಎಂಬುದನ್ನು ಒಮ್ಮೆ ಆಲೋಚನೆ ಮಾಡಲಿ" ಎಂದು ಅವರು ಹೇಳಿದರು.

"ಅದೇ ನಂತರ ನಡೆದ ಬಿಬಿಎಂಪಿ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಕೇವಲ ಇಬ್ಬರು ಜಯಗಳಿಸಿದ್ದರೂ, ಪಡೆದದ್ದು 57 ಸಾವಿರ ಮತಗಳು. ಚಾಮರಾಜಪೇಟೆಯ ಜನ ನನ್ನ ಮುಖ ನೋಡಿಕೊಂಡು ಜೆಡಿಎಸ್‌ಗೆ ಮತ ನೀಡುತ್ತಾರೆ. ಈ ಕ್ಷೇತ್ರದ ಜನ ನನ್ನನ್ನು ರಾಜಕಾರಣಿ, ಶಾಸಕ ಎಂದು ಪರಿಗಣಿಸಿಲ್ಲ. ಎಲ್ಲರೂ ನನ್ನನ್ನು ಅವರ ಮನೆಯ ಮಗನನ್ನಾಗಿ ಭಾವಿಸಿದ್ದಾರೆ" ಎಂದು ಝಮೀರ್‌ ಅಹ್ಮದ್  ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X