Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಗರ್‌ಹುಕುಂ ಮಂಜೂರಾತಿಯಲ್ಲಿ ಸಾಕಷ್ಟು...

ಬಗರ್‌ಹುಕುಂ ಮಂಜೂರಾತಿಯಲ್ಲಿ ಸಾಕಷ್ಟು ಭ್ರಷ್ಟಾಚಾರ: ಕುಮಾರ್‌ಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ22 July 2017 8:09 PM IST
share
ಬಗರ್‌ಹುಕುಂ ಮಂಜೂರಾತಿಯಲ್ಲಿ ಸಾಕಷ್ಟು ಭ್ರಷ್ಟಾಚಾರ: ಕುಮಾರ್‌ಬಂಗಾರಪ್ಪ

ಸೊರಬ, ಜು.22: ತಾಲೂಕಿನ ಬಗರ್‌ಹುಕುಂ ಮಂಜೂರಾತಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದ್ದು, ಇದರಲ್ಲಿ ಕಾಗೋಡು ತಿಮ್ಮಪ್ಪ ಮತ್ತು ಮಧು ಬಂಗಾರಪ್ಪ ಪಾರ್ಟನರ್‌ಶಿಪ್ ಮೂಲಕ ಡೀಲ್ ಮಾಡಿದ್ದಾರೆ. ಅವರೆಂದೂ ರಾಜ್ಯದ ನಾಯಕರಾಗಲು ಸಾಧ್ಯವಿಲ್ಲ. ಕಾಗೋಡು ತಿಮ್ಮಪ್ಪನವರು ಈ ಹಿಂದೆಯೂ ರಾಜ್ಯ ಮತ್ತು ಜಿಲ್ಲೆಯ ನಾಯಕರಾಗಲಿಲ್ಲ, ಮುಂದೆಯೂ ಆಗುವುದಿಲ್ಲ ಎಂದು ಮಾಜಿ ಸಚಿವ ಕುಮಾರ್‌ಬಂಗಾರಪ್ಪ ವ್ಯಂಗ್ಯವಾಡಿದರು.

ಪಟ್ಟಣದ ಪ್ರವಾಸಿಮಂದಿರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮೊದಲು ಕಾಂಗ್ರೇಸ್ ಪಕ್ಷದ ಸದಸ್ಯರು ಬಗರ್‌ಹುಕುಂ ಸಮಿತಿಯಲ್ಲಿದ್ದಾಗ ಸಭೆಯನ್ನೆ ಕರೆಯದ ಮಧುಬಂಗಾರಪ್ಪ ಜೆಡಿಎಸ್ ಕಾರ್ಯಕರ್ತರನ್ನು ಸಮಿತಿಯ ಸದಸ್ಯರನ್ನಾಗಿ ಮಾಡಿಕೊಂಡು ಸಭೆಗಳನ್ನು ನಡೆಸಿ ವ್ಯವಹಾರ ಆರಂಭಿಸಿದರು. ಈಗ ಕೋಟೆ ಕೊಳ್ಳೆ ಹೊಡೆದ ಮೆಲೆ ಪುನಃ ಕಾಂಗ್ರೇಸ್ ಸದಸ್ಯರನ್ನು ಕಾಗೋಡು ತಿಮ್ಮಪ್ಪ ನೇಮಿಸಿದ್ದಾರೆ. ಇಬ್ಬರೂ ಸೇರಿ ಇಡೀ ಬಾಳೇಹಣ್ಣು ನುಂಗಿ, ಸಿಪ್ಪೆಯನ್ನು ಮಾತ್ರ ಈಗ ಹೊಸ ಸಮಿತಿ ದಸ್ಯರಿಗೆ ನೀಡಿದ್ದಾರೆ ಎಂದು ಕುಟುಕಿದರು.

ಬಿಜೆಪಿ ಪಕ್ಷದಿಂದ ಕೈಗೊಂಡ ವಿಸ್ತಾರಕ ಯೋಜನೆ ಅನ್ವಯ ಪ್ರತಿ ಗ್ರಾಮಕ್ಕೂ ಭೇಟಿ ನೀಡಿದಾಗ ಬಗರ್ಹುಕುಂ ಸಮಿತಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು ಗೊಚರವಾಗಿದೆ. ಇದಕ್ಕೆ ಶಾಸಕ ಮಧು ಬಂಗಾರಪ್ಪನವರ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪನವರು ಕಾರಣಕರ್ತರಾಗಿದ್ದಾರೆ. ಇವರಿಬ್ಬರೂ ಭ್ರಷ್ಟ ಅಧಿಕಾರಿಗಳನ್ನು ಜಿಲ್ಲೆಯಲ್ಲಿ ಇಟ್ಟುಕೊಂಡು ಈ ಅವ್ಯವಹಾರಕ್ಕೆ ಸಹಕಾರ ಪಡೆದಿದ್ದಾರೆ. ದ್ವಾರಹಳ್ಳಿ, ನಡಹಳ್ಳಿ, ಜೋಳದಗುಡ್ಡೆ, ಹರೀಶಿ, ಬರಗಿ ಮೊದಲಾದ ್ರಾಮಗಳಲ್ಲಿ ದ್ವೇಷದ ವಾತವರಣವನ್ನು  ಶಾಸಕರು ನಿರ್ಮಿಸಿದ್ದಾರೆ.  ಶಿವಮೊಗ್ಗ, ಸಿದ್ದಾಪುರ ಸೇರಿದಂತೆ ತಾಲೂಕಿನ ಹೊರಗಿನವರಿಗೂ ಸ್ಮಶಾನ, ಕೆರೆ, ಅರಣ್ಯಭೂಮಿಯನ್ನು ಬಗರ್ಹುಕುಂ ಹೆಸರಿನಲ್ಲಿ ಮಂಜೂರಾತಿ ಮಾಡಿದ್ದು, ಇವು ವಜಾಗೊಳ್ಳಲಿವೆ ಎಂದರು.

ನರಗುಂದದಲ್ಲಿ ನಡೆದ ಸಭೆಯಲ್ಲಿ ಶಾಸಕ ಮಧು ಬಂಗಾರಪ್ಪ ಮಾಜಿಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನುದ್ದೇಶಿಸಿ ಕೆಟ್ಟ ರಕ್ತ, ಕಚಡ ಮುಂತಾದ ಅನಾಗರೀಕ ಭಾಷೆಗಳನು್ನ ಬಳಸಿರುವುದು ಖಂಡನೀಯ ಎಂದ ಕುಮಾರ್ ಬಂಗಾರಪ್ಪ, ಸ್ಥಳೀಯ ಶಾಸಕರ ಇಂತಹ ಅಸಭ್ಯ ಮಾತುಗಳು ಸೊರಬ ವಿಧಾನಸಭಾ ಕ್ಷೇತ್ರ ಸೇರಿದಂತೆ ರಾಜ್ಯದ ಜನತೆ ತಲೆತಗ್ಗಿಸುವಂತಾಗಿದೆ. ವಿರೋಧಿಗಳನ್ನು ಟೀಕಿಸುವುದು ಸರಿಯಾದರೂ ಅಸಂಬದ್ಧವಾದ ತೀರಾ ಕೆಳಮಟ್ಟದ ಪದವನ್ನು ಎಂದಿಗೂ ಬಳಸಬಾರದು. ಇಂತಹ ಬೇಜವಾಬ್ದಾರಿಯುತವಾಗಿ ಮಾತನಾಡಿದ ಮಧು ಬಂಗಾರಪ್ಪ ಕೂಡಲೇ ಸಾರ್ವತ್ರಿಕ ಕ್ಷಮೆಯಾಚಿಸಬೇಕು ಎಂದರು.

ಪಪಂ ಸದಸ್ಯ ಎಂ.ಡಿ. ಉಮೇಶ, ಪ್ರಮುಖರಾದ ದಿವಾಕರಭಾವೆ, ತಬಲಿ ಬಂಗಾರಪ್ಪ, ಚಂದ್ರಪ್ಪ ಸಿಗ್ಗದ, ಕೊಡಕಣಿ ಕೃಷ್ಣಮೂರ್ತಿ, ಭೋಗೇಶ, ಶಬ್ಬೀರ್ ಅಹ್ಮದ್ ಕಿಲ್ಲೇದಾರ್, ಗಣಪತಿ ಕೊಡಕಣಿ ಮತ್ತಿತರರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X