Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಂಕಿ ಹಚ್ಚುತ್ತೇನೆ ಎನ್ನುವ ಶಬ್ಧಕ್ಕಿಂತ...

ಬೆಂಕಿ ಹಚ್ಚುತ್ತೇನೆ ಎನ್ನುವ ಶಬ್ಧಕ್ಕಿಂತ ರಕ್ತ, ಕಚಡ ಎಂಬ ಶಬ್ಧ ಕೆಟ್ಟದ್ದಲ್ಲ: ಮಧು ಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ22 July 2017 8:14 PM IST
share
ಬೆಂಕಿ ಹಚ್ಚುತ್ತೇನೆ ಎನ್ನುವ ಶಬ್ಧಕ್ಕಿಂತ ರಕ್ತ, ಕಚಡ ಎಂಬ ಶಬ್ಧ ಕೆಟ್ಟದ್ದಲ್ಲ: ಮಧು ಬಂಗಾರಪ್ಪ

ಸೊರಬ, ಜು.22: ಬೆಂಕಿ ಹಚ್ಚುತ್ತೇನೆ ಎನ್ನುವ ಶಬ್ಧಕ್ಕಿಂತ ರಕ್ತ, ಕಚಡ ಎಂಬ ಶಬ್ಧ ಕೆಟ್ಟದ್ದಲ್ಲ. ದೃಶ್ಯಮಾದ್ಯಮದಲ್ಲಿ ನಾನು ಆಡಿದ ಮಾತಿನ ಅರ್ಧವನ್ನು ಮಾತ್ರ ತೋರಿಸಿದ್ದು, ನಾನು ಆಡಿದ ಮಾತಿಗೆ ಈಗಲೂ ಬದ್ಧನಾಗಿದ್ದೇನೆ ಎಂದು ಶಾಸಕ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.

ಆನವಟ್ಟಿಯ ಪ್ರವಾಸಿ ಮಂದಿರದಲ್ಲಿ ಶನಿವಾರ ಪತ್ರಿಕಾಗೊಷ್ಠಿಂಯನ್ನುದ್ದೇಶಿಸಿ ಮಾತನಾಡಿ, ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆಯವರು ಮೋದಿಯವರ ಅಲೆಯಲ್ಲಿ ಗೆದ್ದು ಬಂದವರಾಗಿದ್ದು, ಜನಪ್ರತಿನಿಧಿಗಳಾಗಿ ತಮ್ಮ ಜವಬ್ದಾರಿಯನ್ನೇ ಮರೆತಿದ್ದಾರೆ ಎಂದು ಆರೋಪಿಸಿದರು.
ಯಾವಾಗಲೂ ರಕ್ತದಿಂದ ಬರೆದುಕೊಡುತ್ತೇನೆ ಎಂದು ಬೊಬ್ಬೆ ಹೊಡಿಯುವ ಬಿಎಸ್‌ವೈ ಸೇರಿದಂತೆ ಕುಮಾರ ಬಂಗಾರಪ್ಪ ತಮ್ಮ ಅಧಿಕಾರಾವಧಿಯಲ್ಲಿ ತಾಲೂಕಿಗೆ ಏಕೆ ನೀರಾವರಿ ಯೋಜನೆ ಮಾಡಲಿಲ್ಲ ಎಂದು ಪ್ರಶ್ನಿಸಿದರು. ಒಬ್ಬ ಮಹಿಳಾ ಜನಪ್ರತಿನಿಧಿಯಾದ ಶೋಭಾ ಕರಂದ್ಲಾಜೆ ಷಂಡರು ಎಂಬ ಪದವನ್ನು ಬಳಸಿರುವುದು ಎಷ್ಟರ ಮಟ್ಟಿಗೆ ಸರಿ. ಅವರು ಐಎನ್‌ಎ ಗೆ ಬರೆದ ಪತ್ರದಲ್ಲಿರುವ 22 ಪ್ರಕರಣಗಳಲ್ಲಿ ಈಗಾಗಲೇ 15-20 ಪ್ರಕರಣಗಳ ತನಿಖೆ ಮುಗಿದೆ ಹೋಗಿವೆ. ಇನ್ನುಳಿದ ಕೆಲವು ಸುಪಾರಿ ಮತ್ತು ಅಪಘಾತದ ಪ್ರಕರಣಗಳಾಗಿವೆ. ಕೇವಲ 6 ರಿಂದ 8 ಪ್ರಕರಣಗಳು ಕೋಮುಗಲಭೆಯದ್ದಾಗಿದ್ದು, ಮುಸಲ್ಮಾನರಿಗೆ ಸಂಬಂಧಪಟ್ಟ ಯಾವುದೇ ಒಂದು ಪ್ರಕರಣ ಇದರಲ್ಲಿ ಇರುವುದಿಲ್ಲ. ದಕ್ಷಿಣ ಕನ್ನಡದಲ್ಲಿ ಚುನಾವಣಾ ಸಮಯದಲ್ಲಿ  ಕೋಮು ಭಾವನೆ ಕೆರಳಿಸುವ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿರುವುದು ದುರದೃಷ್ಠಕರವಾಗಿದೆ. ರಾಜ್ಯ ಸರ್ಕಾರವು ಸಹ ಇದನ್ನು ನಿಯಂತ್ರಿಸಲು ವಿಫಲವಾಗಿದೆ. ಸಮನ್ವಯ ಸಮಿತಿ ಸಭೆಯನ್ನು ನಡೆಸಲು ಹಿಂದೆೀಟು ಹಾಕುತ್ತಿರುವುದು ಖಂಡನೀಯ ಎಂದರು.

ಮಹಾದಾಯಿ ಮತ್ತು ಕಳಸಾ ಬಂಡೂರಿ ಬಗ್ಗೆ ಸುಪ್ರೀಂ ಕೋರ್ಟ್ ಮತ್ತು ನ್ಯಾಯಾಧೀಕರಣಗಳು ಹೊರಗಡೆ ಮಾತುಕತೆ ನಡೆಸಲು ಸೂಚನೆ ನೀಡಿದ್ದರೂ ಬಿಜೆಪಿಯವರು ದೀನದಯಾಳ್ ಬರ್ತಡೇ ಮಾಡುತ್ತಿದ್ದಾರೆ. ಸಂಸದರು ಹಾಗೂ ನರೇಂದ್ರ ಮೋದಿಯವರು ಈ ಬಗ್ಗೆ ಗಮನ ಹರಿಸಿಲ್ಲ. ಮಾತುಕತೆ ಮೂಲಕ ಮಹಾದಾಯಿ ಸಮಸ್ಯೆ ಇತ್ಯರ್ಥಗೊಳಿಸಬೇಕೆಂಬ ಇಚ್ಚೆ ಗೋವಾ ರಾಜ್ಯಕ್ಕೂ ಇಲ್ಲದಾಗಿದೆ ಎಂದು ಆರೋಪಿಸಿದರು. ಸೊರಬ ಮುಖ್ಯರಸ್ತೆ ಅಗಲೀಕರಣ ವಿಚಾರದಲ್ಲಿ ತಮ್ಮಿಂದ ಯಾವ ಲೋಪವೂ  ಆಗಿಲ್ಲ. ಅಧಿಕಾರಿಗಳ ಬೇಜವಾಬ್ದಾರಿತನದ ಲೋಪದಿಂದಾಗಿ ರಸ್ತೆ ವಿತರಣೆ ವಿಳಂಬವಾಗಿದೆ. ಇದಕ್ಕೆ ಜಿಲ್ಲಾಡಳಿತ ಹೊಣೆ ಹೊರತು ನಾನಲ್ಲ ಎಂದರು.

ಜಿಪಂ ಸದಸ್ಯ ಶಿವಲಿಂಗೇಗೌಡ, ತಾಪಂ ಉಪಾಧ್ಯಕ್ಷ ಸುರೇಶ ಹಾವಣ್ಣ, ಎಚ್. ಗಣಪತಿ, ಎಂ.ಡಿ. ಶೇಖರ್, ಭರಮಪ್ಪಗೌಡ ಪಾಟೀಲ್ ಎಣ್ಣೇಕೊಪ್ಪ, ಕೆ. ಅಜ್ಜಪ್ಪ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X