Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಧೋವಲ್ ಚೀನಾ ಭೇಟಿಯಿಂದ ಡೋಕ ಲಾ ಗಡಿ...

ಧೋವಲ್ ಚೀನಾ ಭೇಟಿಯಿಂದ ಡೋಕ ಲಾ ಗಡಿ ಬಿಕ್ಕಟ್ಟು ಶಮನ ಸಾಧ್ಯತೆ

ಚೀನಾ ರಾಜಕೀಯ ವಿಶ್ಲೇಷಕರ ಅನಿಸಿಕೆ

ವಾರ್ತಾಭಾರತಿವಾರ್ತಾಭಾರತಿ22 July 2017 9:32 PM IST
share
ಧೋವಲ್ ಚೀನಾ ಭೇಟಿಯಿಂದ  ಡೋಕ ಲಾ ಗಡಿ ಬಿಕ್ಕಟ್ಟು ಶಮನ ಸಾಧ್ಯತೆ

ಬೀಜಿಂಗ್,ಜು.22: ಬ್ರಿಕ್ಸ್ ಸಮೂಹದ ರಾಷ್ಟ್ರಗಳ ಭದ್ರತಾ ಅಧಿಕಾರಿಗಳ ಸಮಾವೇಶದಲ್ಲಿ ಪಾಲ್ಗೊಳ್ಳಲು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಬೀಜಿಂಗ್‌ಗೆ ಭೇಟಿ ನೀಡಲಿರುವುದು, ಭಾರತ ಹಾಗೂ ಚೀನಾ ನಡುವೆ ಡೋಕಾ ಲಾ ಪ್ರದೇಶದಲ್ಲಿ ಉಂಟಾಗಿರುವ ಸಂಘರ್ಷಾವಸ್ಥೆಯನ್ನು ಶಮನಗೊಳಿಸಲು ನೆರವಾಗಲಿದೆಯೆಂದು ಚೀನಿ ರಾಜಕೀಯ ವಿಶ್ಲೇಷಕರೊಬ್ಬರು ಅಭಿಪ್ರಾಯಿಸಿದ್ದಾರೆ.

 ದೋವಲ್ ಅವರು ಜುಲೈ 27,28ರಂದು ಬೀಜಿಂಗ್‌ಗೆ ಭೇಟಿ ನೀಡಲಿದ್ದಾರೆ.

 ಚೀನಾದ ಭದ್ರತಾ ಸಲಹೆಗಾರ ಯಾಂಗ್ ಜಿಯೆಚಿ ನೇತೃತ್ವದಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ಬ್ರಿಕ್ಸ್ ದೇಶಗಳಾದ ಬ್ರೆಜಿಲ್, ರಶ್ಯ, ಚೀನಾ, ದಕ್ಷಿಣ ಆಫ್ರಿಕಾ ಹಾಗೂ ಭಾರತದ ಅಧಿಕಾರಿಗಳು ಭಾಗವಹಿಸಲಿದ್ದಾರೆ.

     ಧೋವಲ್ ಅವರ ಚೀನಾ ಭೇಟಿಯು ಮಹತ್ವದ್ದಾಗಿದೆ ಹಾಗೂ ಭಾರತ-ಚೀನಾ ಮಧ್ಯೆ ಉಂಟಾಗಿರುವ ಉದ್ವಿಗ್ನತೆಯನ್ನು ಕಡಿಮೆಗೊಳಿಸಲು ಒದಗಿಸಿರುವ ಒಂದು ಸದವಕಾಶವಾಗಿದೆಯೆಂದು ಚೀನಾದ ಸುಧಾರಣಾ ವೇದಿಕೆಯ ರಾಜಕೀಯ ವಿಶ್ಲೇಷಕರಾದ ಮಾ ಜಿಯಾಲಿ ತಿಳಿಸಿದ್ದಾರೆ.

 ಸಿಕ್ಕಿಂ ಗಡಿಯಲ್ಲಿರುವ ಡೋಕ ಲಾದಲ್ಲಿ ಭಾರತ ಹಾಗೂ ಚೀನಾ ಪಡೆಗಳ ನಡುವೆ ಸಂಘರ್ಷ ಪರಿಸ್ಥಿತಿ ಉಂಟಾಗಿರುವುದನ್ನು ಬಗೆಹರಿಸಲು ದೋವಲ್ ಹಾಗೂ ಯಾಂಗ್ ಮಾತುಕತೆ ನಡೆಸುವ ಸಾಧ್ಯತೆಯಿದೆಯೆಂದು ಚೀನಿ ಅಧಿಕಾರಿಗಳು ತಿಳಿಸಿದ್ದಾರೆ.

 ದೋವಲ್ ಭೇಟಿಯ ವೇಳೆ ಚೀನಾವು ಡೋಕಾ ಲಾ ವಿಷಯವಾಗಿ ತನ್ನ ಅಹವಾಲನ್ನು ಭಾರತಕ್ಕೆ ಸಲ್ಲಿಸಲಿದೆ. ಭಾರತವು ತನ್ನ ಪಡೆಗಳನ್ನು ಹಿಂತೆಗೆದುಕೊಳ್ಳುವ ನಿಟ್ಟಿನಲ್ಲಿ ಚೌಕಾಶಿಯಾಗಿ ಕೆಲವೊಂದು ಬೇಡಿಕೆಗಳನ್ನು ಮುಂದಿಡುವ ಸಾಧ್ಯತೆಯಿದೆ’’ ಭಾರತ-ಚೀನಾ ಅಧ್ಯಯನ ತಜ್ಞರೂ ಆಗಿರುವ ಮಾ ಜಿಯಾಲಿ ತಿಳಿಸಿದ್ದಾರೆ.

 ಆದಾಗ್ಯೂ ಈ ವಿಷಯವಾಗಿ ಭಾರತ-ಚೀನಾ ಒಪ್ಪಂದಕ್ಕೆ ಬರಲು ವಿಫಲವಾದಲ್ಲಿ ಉಭಯದೇಶಗಳ ಬಾಂಧವ್ಯಕ್ಕೆ ಗಂಭೀರವಾದ ಧಕ್ಕೆಯುಂಟಾಗಲಿದೆಯೆಂದು ಮಾ ಎಚ್ಚರಿಕೆ ನೀಡಿದ್ದಾರೆ.

ಬ್ರಿಕ್ಸ್ ರಾಷ್ಟ್ರಗಳ ಶೃಂಗಸಭೆಯು ಸೆಪ್ಟೆಂಬರ್‌ನಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅದರಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X