Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುರಕ್ಷಿತವಾಗಿ ಉದ್ಯಾವರ ತಲುಪಿದ ಮದ್ರಸ...

ಸುರಕ್ಷಿತವಾಗಿ ಉದ್ಯಾವರ ತಲುಪಿದ ಮದ್ರಸ ವಿದ್ಯಾರ್ಥಿಗಳು

ವಾರ್ತಾಭಾರತಿವಾರ್ತಾಭಾರತಿ22 July 2017 9:35 PM IST
share
ಸುರಕ್ಷಿತವಾಗಿ ಉದ್ಯಾವರ ತಲುಪಿದ ಮದ್ರಸ ವಿದ್ಯಾರ್ಥಿಗಳು

ಉಡುಪಿ, ಜು.22: ಕೆಲವು ಗೊಂದಲಗಳಿಂದಾಗಿ ಮಂಗಳೂರು ರೈಲ್ವೆ ಪೊಲೀಸರ ಮೂಲಕ ಬೊಂದೇಲ್‌ನ ಮಕ್ಕಳ ಪರಿವೀಕ್ಷಣಾ ಕೇಂದ್ರದ ವಶದಲ್ಲಿದ್ದ ಉಡುಪಿ ಉದ್ಯಾವರದ ಖಲೀಮ ಏಜುಕೇಶನ್ ಆ್ಯಂಡ್ ವೆಲ್‌ಫೇರ್ ಟ್ರಸ್ಟ್‌ನ ಅರೇಬಿಕ್ ಮದ್ರಸದ 13 ಮಂದಿ ಬಿಹಾರ ರಾಜ್ಯದ ವಿದ್ಯಾರ್ಥಿಗಳನ್ನು ಇಂದು ರಾತ್ರಿ 8:30ರ ಸುಮಾರಿಗೆ ಮಂಗಳೂರಿನಿಂದ ಉದ್ಯಾವರಕ್ಕೆ ಸುರಕ್ಷಿವಾಗಿ ಕರೆದುಕೊಂಡು ಬರಲಾಯಿತು.

‘ಕಳೆದ ನಾಲ್ಕು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಈ ಮದ್ರಸದಲ್ಲಿ ಸ್ಥಳೀಯರು ಸೇರಿದಂತೆ ಒಟ್ಟು 30 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಕಳೆದ ವರ್ಷ ಬಿಹಾರ ರಾಜ್ಯದ 16 ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದರು. ಈ ಬಾರಿಯ ರಜೆಯಲ್ಲಿ ಅವರೆಲ್ಲರು ಊರಿಗೆ ಹೋಗಿದ್ದರು. ಇವರ ಪೈಕಿ ಇಬ್ಬರು ದೆಹಲಿ ಮದ್ರಸಕ್ಕೆ ಸೇರ್ಪಡೆಗೊಂಡರೆ, ಓರ್ವನ ಶಿಕ್ಷಣ ಪೂರ್ಣಗೊಂಡಿತ್ತು. ಐದು ಮಂದಿ ವಿದ್ಯಾರ್ಥಿಗಳನ್ನು ಅವರ ಮನೆಯವರು ದೂರದ ಊರು ಎಂಬುದಾಗಿ ಕಳುಹಿಸದೆ ಅಲ್ಲೇ ಉಳಿಸಿಕೊಂಡಿದ್ದರು. ಉಳಿದ 6 ಮಕ್ಕಳು ಮತ್ತು ಏಳು ಮಂದಿ ಹೊಸ ಮಕ್ಕಳು ಸಹಿತ ಒಟ್ಟು 13 ಮಕ್ಕಳು ಜು.19ರಂದು ಬಿಹಾರದಿಂದ ರೈಲಿನಲ್ಲಿ ಹೊರಟಿದ್ದರು’ ಎಂದು ಟ್ರಸ್ಟ್‌ನ ಸದಸ್ಯ ಅಬ್ದುಲ್ ಅಝೀಮ್ ಪತ್ರಿಕೆಗೆ ತಿಳಿಸಿದರು.

‘ರೈಲಿನಲ್ಲಿ ಮಕ್ಕಳೊಂದಿಗೆ ಬರುವುದಾಗಿ ಪೋಷಕರು ನಮಗೆ ಮೊದಲು ತಿಳಿಸಿದ್ದರು. ಅವರು ಕೊನೆಯ ಗಳಿಗೆಯಲ್ಲಿ ಕರೆ ಮಾಡಿ ಮಕ್ಕಳನ್ನು ರೈಲಿನಲ್ಲಿ ಕಳುಹಿಸಿ ಕೊಟ್ಟಿದ್ದೇವೆ. ನೀವು ಮಂಗಳೂರಿಗೆ ಬಂದು ಅವರನ್ನು ಕರೆದುಕೊಂಡು ಹೋಗಿ ಎಂದು ತಿಳಿಸಿದರು. ಹಾಗೆ ನಾವು ಹೊರಡುವಾಗ ಸ್ವಲ್ಪ ವಿಳಂಬವಾಗಿ ಕೆಲವೊಂದು ಗೊಂದಲಕ್ಕೆ ಕಾರಣವಾಯಿತು’ ಎಂದು ಅವರು ಹೇಳಿದರು.

 ‘ಆದರೂ ನಾವು ನಮ್ಮ ಗೆಳೆಯರನ್ನು ರೈಲ್ವೆ ನಿಲ್ದಾಣಕ್ಕೆ ಕಳುಹಿಸಿಕೊಟ್ಟಿದ್ದೇವೆ. ಆದರೆ ರೈಲ್ವೆ ಪೊಲೀಸರು ಮದ್ರಸದ ದಾಖಲೆಗಳಿಲ್ಲದೆ ಮಕ್ಕಳನ್ನು ಕಳುಹಿಸಿ ಕೊಡುವುದಿಲ್ಲ ಎಂದು ತಿಳಿಸಿದರು. ಹಾಗೆ ಟ್ರಸ್ಟ್‌ನ ಕಾರ್ಯದರ್ಶಿ ಅಬ್ದುಲ್ ಮಜೀದ್ ಹಾಗೂ ನಾನು ಹೋಗಿದ್ದೆವು. ಆಗಲೇ ಪೊಲೀಸರು ಮಕ್ಕಳನ್ನು ಮಕ್ಕಳ ಪರಿವೀಕ್ಷಣಾ ಕೇಂದ್ರಕ್ಕೆ ಒಪ್ಪಿಸಿದ್ದರು. ಬಳಿಕ ನಾವು ಕೇಂದ್ರಕ್ಕೆ ನಮ್ಮ ಮದ್ರಸದ ದಾಖಲೆ ಪತ್ರಗಳನ್ನು ಒಪ್ಪಿಸಿ ಎಲ್ಲ 13 ಮಕ್ಕಳನ್ನು ಸುರಕ್ಷಿತವಾಗಿ ಕರೆದುಕೊಂಡು ಬಂದಿದ್ದೇವೆ’ ಎಂದರು.

ಈ 13 ಮಕ್ಕಳ ಪೈಕಿ 10 ಮಂದಿಯಲ್ಲಿ ಆಧಾರ್ ಕಾರ್ಡ್ ಇದೆ. ಆದರೆ ಉಳಿದ ಮೂವರಲ್ಲಿ ಇರಲಿಲ್ಲ. ಎಲ್ಲರೂ ಬಿಹಾರ ರಾಜ್ಯದವರಾಗಿದ್ದರೂ ಅವರಲ್ಲಿ ಓರ್ವನ ಆಧಾರ್ ಕಾರ್ಡ್‌ನಲ್ಲಿ ಪಶ್ಚಿಮ ಬಂಗಾಳ ಎಂಬುದಾಗಿ ನಮೂದಿಸಲಾಗಿತ್ತು. ಇವರೆಲ್ಲ 11ರಿಂದ 17ವರ್ಷ ವಯಸ್ಸಿನ ಮಕ್ಕಳಾಗಿದ್ದಾರೆ. ಇವರಿಗೆ ಧಾರ್ಮಿಕ ಶಿಕ್ಷಣದ ಜೊತೆ ಉದ್ಯಾವರದ ಮೇಲುಪೇಟೆಯ ಖಾಸಗಿ ಶಾಲೆಯಲ್ಲಿ ಲೌಕಿಕ ಶಿಕ್ಷಣವನ್ನೂ ನೀಡುತ್ತಿದ್ದೇವೆ. ಈ ಮದ್ರಸದಲ್ಲಿ ಎಲ್ಲರಿಗೂ ಉಚಿತ ಶಿಕ್ಷಣ, ವಸತಿ, ಊಟದ ವ್ಯವಸ್ಥೆಯನ್ನು ನೀಡಲಾಗುತ್ತಿದೆ. ಮದ್ರಸ ಸ್ಥಾಪನೆಗೊಂಡ ಆರಂಭದಲ್ಲಿ ಕೇವಲ ಸ್ಥಳೀಯ ಮಕ್ಕಳು ಮಾತ್ರ ಇದ್ದರು. ಕಳೆದ ವರ್ಷದಿಂದ ಹೊರರಾಜ್ಯದ ಬಡ ವಿದ್ಯಾರ್ಥಿಗಳಿಗೂ ಅವಕಾಶ ನೀಡಲಾಗುತ್ತಿದೆ ಎಂದು ಅಬ್ದುಲ್ ಅಝೀಮ್ ಪತ್ರಿಕೆಗೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X