Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅನ್ಯಾಯದ ವಿರುದ್ಧ ಧ್ವನಿ ಎತ್ತಲು...

ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಸಾಮಾಜಿಕ ಮಾಧ್ಯಮಗಳು ಪರಿಣಾಮಕಾರಿ: ಮಾರ್ಟಿನ್ ಲೂಥರ್ ಕಿಂಗ್-3

ವಾರ್ತಾಭಾರತಿವಾರ್ತಾಭಾರತಿ22 July 2017 10:00 PM IST
share
ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಸಾಮಾಜಿಕ ಮಾಧ್ಯಮಗಳು ಪರಿಣಾಮಕಾರಿ: ಮಾರ್ಟಿನ್ ಲೂಥರ್ ಕಿಂಗ್-3

ಬೆಂಗಳೂರು, ಜು. 22: ಸಮಾಜದಲ್ಲಿ ಸಾಮಾಜಿಕ ಬದಲಾವಣೆ ಅಹಿಂಸಾ ಮಾರ್ಗದಿಂದಲೇ ಆಗಬೇಕಿದೆ. ಅಹಿಂಸಾ ಮಾರ್ಗದಿಂದ ಕ್ಷಣ ಮಾತ್ರದಲ್ಲಿ ಸಾಮಾಜಿಕ ಪರಿವರ್ತನೆ ನಿರೀಕ್ಷಿಸುವುದು ಅಸಾಧ್ಯ. ಇದು ಬಹಳ ಸಮಯವನ್ನು ನಿರೀಕ್ಷಿಸುತ್ತದೆ ಎಂದು ಸಾಮಾಜಿಕ ಹೋರಾಟಗಾರ ಮಾರ್ಟಿನ್ ಲೂಥರ್ ಕಿಂಗ್-3 ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ಇಲ್ಲಿನ ಜಿಕೆವಿಕೆ ಆವರಣದಲ್ಲಿ ಏರ್ಪಡಿಸಿದ್ದ ಅಂಬೇಡ್ಕರ್ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೋಷಣೆಯ ವಿರುದ್ಧ ಪ್ರತಿಭಟಣೆ ಅತ್ಯಗತ್ಯ. ಯಾರಾದರೂ ನಮ್ಮ ಮೇಲೆ ದಾಳಿ ಮಾಡಿದರೆ ಅದನ್ನು ವಿರೋಧಿಸಬೇಕು. ಆದರೆ, ವಿರೋಧ ಅಹಿಂಸಾತ್ಮಕವಾಗಿರಬೇಕು. ಈ ವಿಷಯದಲ್ಲಿ ಗಾಂಧಿ ಮಾರ್ಗ ಸೂಕ್ತ ಎಂದು ನುಡಿದರು. ಸಾಮಾಜಿಕ ಮಾಧ್ಯಮಗಳು ಇಂದಿನ ಆಧುನಿಕ ಪ್ರಪಂಚದಲ್ಲಿ ಬಹಳ ಪರಿಣಾಮಕಾರಿ. ಸಮಾಜದ ಶೋಷಿತ ವರ್ಗದವರು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ತಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಬಹುದಾಗಿದೆ ಎಂದು ಅವರು ಹೇಳಿದರು.

ಆಧುನಿಕ ಸಮಾಜದಲ್ಲಿ ಶೋಷಿತರ, ದಮನಿತರ ಪರ ಹೊರಾಡುವ ಅನೇಕ ಯುವಕ-ಯುವತಿಯರು ನಮ್ಮ-ನಿಮ್ಮ ನಡುವೆ ಇದ್ದು, ಇವರ ಹೋರಾಟದ ಫಲ ನಿಜವಾಗಿಯೂ ಅನೇಕ ಶೋಷಿತರಿಗೆ ಒಳಿತಾಗಬಲ್ಲದು ಎಂದು ಮಾರ್ಟಿನ್ ಲೂಥರ್ ಕಿಂಗ್-3 ಹೇಳಿದರು. ಅಂತೆಯೇ ಸಮಾಜದ ಶೋಷಿತರು ಮತ್ತು ದಲಿತ ವರ್ಗದವರು, ಶಿಕ್ಷಣ, ಆರೋಗ್ಯ, ಸಾಮಾಜಿಕ ಹೀಗೆ ಯಾವುದೇ ಕ್ಷೇತ್ರದಲ್ಲಾಗಲಿ ತಮಗಾಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಿದಾಗ ಮಾತ್ರ ಆಳುವ ಸರಕಾರಗಳಿಗೆ ಸಮಸ್ಯೆಗಳ ಆರ್ಥವಾಗುತ್ತದೆ ಎಂದು ತಿಳಿಸಿದರು.
  
ಯಾವುದೇ ಸಾಮಾಜಿಕ ಬದಲಾವಣೆ ತರಬೇಕಾದರೆ ಕೆಳ, ಶೊಷೀತ ವರ್ಗಗಳ ಜನರನ್ನು ಗಣನೆಗೆ ತೆಗೆದುಕೊಂಡು ಗುರಿಮುಟ್ಟುವತನಕ ಹೋರಾಟ ನಡೆಸಬೇಕು. ಇತ್ತೀಚಿಗೆ ಹೆಚ್ಚು ಆಕರ್ಷಿಸುತ್ತಿರುವ ಸಾಮಾಜಿಕ ಮಾಧ್ಯಮಗಳ ಮೂಲಕವೂ ಹೋರಾಟ ಮುಂದುವರೆಯಬೇಕು. ಸಮಾನ ಮನಸ್ಕರನ್ನು ಒಗ್ಗೂಡಿಸಿ ಮುನ್ನಡೆದಾಗ ಮಾತ್ರ ಸಾಮಾಜಿಕ ಪರಿವರ್ತನೆ ಸಾಧ್ಯ ಎಂದರು. ತಮ್ಮ ತಂದೆ ಡಾ.ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಅವರನ್ನು ಸ್ಮರಿಸಿದ ಕಿಂಗ್-3, ಅನ್ಯಾಯ ಇದ್ದ ಕಡೆ ನ್ಯಾಯವೂ ಇದ್ದೇ ಇರುತ್ತದೆ. ಶೋಷಿತರು ಒಂದಾದಾಗ ಅವರಿಗೆ ನ್ಯಾಯ ಸಿಕ್ಕೇ ಸಿಗುತ್ತದೆ ಎಂಬ ತಮ್ಮ ತಂದೆಯ ನುಡಿಗಳನ್ನು ನೆನಪಿಸಿಕೊಂಡರು.

ಅಮೆರಿಕಾದಲ್ಲೂ ಈ ಶೋಷಣೆ ಇದ್ದೇ ಇದೆ. ಬಿಳಿಯರು-ಕರಿಯರ ನಡುವೆ ವರ್ಣಭೇದವಿತ್ತು. ಅಲ್ಲಿ ಒಗ್ಗಟ್ಟಿನ ಹೋರಾಟದ ಮೂಲಕ ಶೋಷಣೆ ಮುಕ್ತರಾಗುತ್ತಿದ್ದೇವೆ. ಭಾರತದ ಪರಿಸ್ಥಿತಿ ಹಾಗಲ್ಲ. ಕೆಳವರ್ಗದವರ ಸಂಖ್ಯೆ ಹೆಚ್ಚಿದೆ. ಸರಕಾರವು ಕೆಳವರ್ಗದವರ ಪರವಾಗಿಯೇ ಇದೆ. ಸರಕಾರ ಸೂಕ್ತ ಕಾನೂನು ರೂಪಿಸಿ ಕೆಳವರ್ಗದವರಿಗೆ ನ್ಯಾಯ ಕೊಡಿಸಬಹುದು ಎಂದು ಅಭಿಪ್ರಾಯಪಟ್ಟರು.

ಗೋರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರ ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಜನಪ್ರತಿನಿಧಿಗಳು ಇಂತಹ ಸಮಸ್ಯೆ ಪರಿಹಾರಕ್ಕೆ ಗಂಭೀರ ಪ್ರಯತ್ನ ನಡೆಸಬೇಕು ಎಂದು ಮಾರ್ಟಿನ್ ಲೂಥರ್ ಕಿಂಗ್-3 ಹೇಳಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X