Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಗತಿಗೆ ಬದಲಾವಣೆ ಅಗತ್ಯ: ಸೂರ್ಯನಾರಾಯಣ

ಪ್ರಗತಿಗೆ ಬದಲಾವಣೆ ಅಗತ್ಯ: ಸೂರ್ಯನಾರಾಯಣ

ಸವಣೂರು ಸರ್ಕಾರಿ ಶಾಲೆಯಲ್ಲಿ ‘ಸ್ನೇಹ ಮಿಲನ’

ವಾರ್ತಾಭಾರತಿವಾರ್ತಾಭಾರತಿ22 July 2017 11:26 PM IST
share
ಪ್ರಗತಿಗೆ ಬದಲಾವಣೆ ಅಗತ್ಯ: ಸೂರ್ಯನಾರಾಯಣ

ಪುತ್ತೂರು, ಜು.22: ನಮ್ಮ ಬದುಕಿನಲ್ಲಿ ಪ್ರಗತಿಯಾಗಬೇಕಾದರೆ ಬದಲಾವಣೆ ಅಗತ್ಯ. ಆದರೆ ಕೇವಲ ಬದಲಾವಣೆಯೇ ಪ್ರಗತಿಯಲ್ಲ. ಶಿಕ್ಷಣದ ಮೂಲಕ ನಡೆಯುವ ಬದಲಾವಣೆಯಿಂದ ಮಾತ್ರ ಪ್ರಗತಿ ಸಾಧ್ಯ. ಶಿಕ್ಷಣವು ಬದಲಾವಣೆಗೆ ಬೇಕಾದ ಕನಸುಗಳನ್ನು ಸೃಷ್ಟಿಸುತ್ತದೆ ಮಾತ್ರವಲ್ಲದೆ ಕನಸುಗಳನ್ನು ನನಸಾಗಿಸುವ ಸಾಮರ್ಥ್ಯವನ್ನು ನೀಡುತ್ತದೆ. ಪ್ರಾಥಮಿಕ ಶಾಲಾ ಜೀವನ ಪ್ರತಿಯೊಬ್ಬ ವ್ಯಕ್ತಿಯ ಬದುಕಿನ ಪಂಚಾಂಗವಾಗಿದ್ದು, ಇದು ಉತ್ತಮವಾಗಿದ್ದರೆ ಬೌದ್ಧಿಕ ಬೆಳವಣಿಗೆಗಿಂತಲೂ ಭಾವನಾತ್ಮಕ ಬೆಳವಣಿಗೆ ಹೆಚ್ಚುತ್ತದೆ ಎಂದು ಸವಣೂರು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸೂರ್ಯನಾರಾಯಣ ಬಿ,ವಿ ಅವರು ಹೇಳಿದರು.

ಶತಮಾನದ ಸಂಭ್ರಮದಲ್ಲಿರುವ ಪುತ್ತೂರು ತಾಲ್ಲೂಕಿನ ಸವಣೂರು ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ಹಿರಿಯ ವಿದ್ಯಾರ್ಥಿಗಳ ಹಾಗೂ ವಿದ್ಯಾಭಿಮಾನಿಗಳ ‘ಸ್ನೇಹ ಸಮ್ಮೇಳನ’ ಹಾಗೂ ‘ಆಟಿಡೊಂಜಿ ದಿನ ’ ಕಾರ್ಯಕ್ರಮದಲ್ಲಿ ಅವರು ಆಶಯ ಮಾತುಗಳನ್ನಾಡಿದರು.

ಕೆಲವು ವರ್ಷಗಳ ಹಿಂದೆ ಆಟಿಯ ದಿನಗಳು ತೀರಾಕಷ್ಟಕರ ದಿನಗಳಾಗಿದ್ದವು. ಆಗ ಮಕ್ಕಳು ಹಸಿವೆಯಿಂದ ಬಳಲಿ ಅಳುತ್ತಿದ್ದರು. ಆದರೂ ನೆಮ್ಮದಿ, ಸಂತೋಷವಿತ್ತು. ಆದರೆ ಇಂದು ಹಾಗಲ್ಲ. ಇಂದು ಮಕ್ಕಳು ನಮಗೆ ಊಟ ಬೇಡ, ಹಸಿವೆ ಇಲ್ಲ ಎಂದು ಭೌತಿಕ ಹಸಿವೆಯಿಲ್ಲದೆ ಅಳುತ್ತಿದ್ದಾರೆ ಎಂದ ಅವರು ಗುಣಾತ್ಮಕ ಶಿಕ್ಷಣದ ಮೂಲಕ ಭೌತಿಕ ಹಸಿವು ಹುಟ್ಟಿಸುವ ಕೆಲಸವಾಗಬೇಕು ಎಂದರು.

ಕುಂಬ್ರ ವಿಜಯಾ ಬ್ಯಾಂಕ್ ಪ್ರಬಂಧಕ ಸುಂದರ ಗೌಡ ಸವಣೂರು ಅವರು ಉದ್ಘಾಟಿಸಿದರು. ಕಲಶೆಗೆ ಬತ್ತ ತುಂಬುವ ಮೂಲಕ ಉದ್ಯಮಿ ಸುಜಿತ್ ಕುಮಾರ್ ಶೆಟ್ಟಿ ನಡುಬೈಲು ಅವರು ಚಾಲನೆ ನೀಡಿದರು. ಪುತ್ತೂರು ರೋಟರಿ ಕ್ಲಬ್‌ನ ಪೂರ್ವಾಧ್ಯಕ್ಷ ಕೃಷ್ಣಕುಮಾರ್ ರೈ ದೇವಸ್ಯ ಅವರು ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಅಂಚೆಪಾಲಕ ನಾರಾಯಣ ಕನಡ ಬಸ್ತಿ, ಸವಣೂರು ಗ್ರಾಮಪಂಚಾಯಿತಿ ಸದಸ್ಯರಾದ ಸತೀಶ್ ಬಲ್ಯಾಯ, ರಾಜೀವಿ ವಿ.ಶೆಟ್ಟಿ, ಗಾಯತ್ರಿ ಬರೆಮೇಲು. ಸಿಆರ್‌ಸಿ ವೆಂಕಟೇಶ್ ಅನಂತಾಡಿ ಅವರು ಅತಿಥಿಗಳಾಗಿ ಭಾಗವಹಿಸಿದ್ದರು.

ಶತಮಾನೋತ್ಸವ ಸಮಿತಿಯ ಉಪಾಧ್ಯಕ್ಷರಾದ ಶಿವರಾಮ ಗೌಡ ಮೆದು ಮತ್ತು ಮಹಮ್ಮದ್ ಹಾಜಿ ಕಣಿಮಜಲು, ಕಾರ್ಯಕ್ರಮದ ಸಂಯೋಜಕ ಗಿರಿಶಂಕರ್ ಸುಲಾಯ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಕಾರ್ಯದರ್ಶಿ ಪ್ರಕಾಶ್ ರೈ ಸಾರೆಕೆರೆ. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಚಂದ್ರಶೇಖರ ಮೆದು ಮತ್ತಿತರರು ಇದ್ದರು.

ಶತಮಾನೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ತಾರಾನಾಥ ಸವಣೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷ ದಿನೇಶ್ ಮೆದು ಸ್ವಾಗತಿಸಿದರು. ಶಾಲಾ ಮುಖ್ಯ ಶಿಕ್ಷಕ ಹರಿಶಂಕರ್ ಭಟ್ ವಂದಿಸಿದರು. ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲಾ ವಠಾರದಲ್ಲಿ ವನಮಹೋತ್ಸವ ಮತ್ತು ಮಳೆನೀರು ಕೊಯಿಲು, ಆಟಿ ತಿಂಗಳ ವಿಶೇಷ ತಿಂಡಿ ತಿನಿಸುಗಳ ಪ್ರದರ್ಶನ ಮತ್ತು ಸ್ಪರ್ಧೆ ನಡೆಯಿತು. ಆಟಿಯ ಸಾಂಪ್ರದಾಯಿಕ ಖಾದ್ಯಗಳನ್ನೊಳಗೊಂಡ ಆಟಿಭೋಜನ ವ್ಯವಸ್ಥೆ ಮಾಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X