Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೇ.7ರಷ್ಟು ಬೃಹತ್ ಅಣೆಕಟ್ಟುಗಳಲ್ಲಿ...

ಶೇ.7ರಷ್ಟು ಬೃಹತ್ ಅಣೆಕಟ್ಟುಗಳಲ್ಲಿ ಮಾತ್ರ ತುರ್ತು ವಿಪತ್ತು ಕ್ರಿಯಾ ಯೋಜನೆ: ಸಿಎಜಿ

ವಾರ್ತಾಭಾರತಿವಾರ್ತಾಭಾರತಿ22 July 2017 11:37 PM IST
share
ಶೇ.7ರಷ್ಟು ಬೃಹತ್ ಅಣೆಕಟ್ಟುಗಳಲ್ಲಿ ಮಾತ್ರ ತುರ್ತು ವಿಪತ್ತು ಕ್ರಿಯಾ ಯೋಜನೆ: ಸಿಎಜಿ

ಹೊಸದಿಲ್ಲಿ, ಜು.22: ಭಾರತದಲ್ಲಿರುವ 4,862 ಬೃಹತ್ ಅಣೆಕಟ್ಟುಗಳ ಪೈಕಿ ಕೇವಲ 349 ಅಣೆಕಟ್ಟುಗಳು ಮಾತ್ರ ತುರ್ತು ವಿಪತ್ತು ಕ್ರಿಯಾ ಯೋಜನೆಯನ್ನು ಹೊಂದಿವೆ ಎಂದು ನಿಯಂತ್ರಕ ಮತ್ತು ಮಹಾಲೆಕ್ಕಪರಿಶೋಧಕರ (ಸಿಎಜಿ) ವರದಿಯಲ್ಲಿ ತಿಳಿಸಲಾಗಿದೆ.

 ದೇಶದ ಕೇವಲ ಶೇ.7ರಷ್ಟು ಅಣೆಕಟ್ಟುಗಳು ಮಾತ್ರ ತುರ್ತು ವಿಪತ್ತು ಕ್ರಿಯಾ ಯೋಜನೆಯನ್ನು ಹೊಂದಿವೆ. ಅಲ್ಲದೆ, 2016ರ ಮಾರ್ಚ್ ತಿಂಗಳಿನವರೆಗೆ ವಿಪತ್ತು ನಿರ್ವಹಣೆ ಕುರಿತ ಅಣಕು ಕಾರ್ಯಾಚರಣೆಯನ್ನು ಕೇವಲ ಒಂದು ಅಣೆಕಟ್ಟಿನಲ್ಲಿ ಮಾತ್ರ ನಡೆಸಲಾಗಿದೆ ಎಂದು ಶುಕ್ರವಾರ ಸಂಸತ್ತಿನಲ್ಲಿ ಮಂಡಿಸಲಾದ ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

 17 ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳನ್ನು ತಪಾಸಣೆಗೆ ಒಳಪಡಿಸಲಾಗಿದ್ದು ಇದರಲ್ಲಿ ಹಿಮಾಚಲ ಪ್ರದೇಶ ಮತ್ತು ತಮಿಳುನಾಡು ಮಾತ್ರ ಅಣೆಕಟ್ಟುಗಳನ್ನು ಮಳೆಗಾಲದ ಮೊದಲು ಹಾಗೂ ಮಳೆಗಾಲದ ಬಳಿಕದ ಪರಿಶೋಧನೆಗೆ ಒಳಪಡಿಸಿವೆ. ಮೂರು ರಾಜ್ಯಗಳು ಆಂಶಿಕ ಪರಿಶೋಧನೆ ನಡೆಸಿವೆ. 2010ರಲ್ಲಿ ಆರಂಭಿಸಿದ ಅಣೆಕಟ್ಟು ಸುರಕ್ಷಾ ಕಾನೂನುಗಳನ್ನು 2016ರ ಆಗಸ್ಟ್‌ವರೆಗೆ ಯಾವುದೇ ರಾಜ್ಯ ಜಾರಿಗೊಳಿಸಿಲ್ಲ. ಅಲ್ಲದೆ ಅಣೆಕಟ್ಟುಗಳ ನಿರ್ವಹಣೆಯ ಕುರಿತು ಸೂಕ್ತ ಯೋಜನೆ ರೂಪಿಸಲಾಗಿಲ್ಲ ಮತ್ತು ಇದಕ್ಕೆ ಅಗತ್ಯವಿರುವ ನಿಧಿಯನ್ನು ಒದಗಿಸಲಾಗಿಲ್ಲ ಎಂದು ವರದಿ ತಿಳಿಸಿದೆ.

 ತಜ್ಞರು ನಡೆಸಿದ ಪರಿಶೋಧನೆ ಸಂದರ್ಭ ಐದು ಬೃಹತ್ ಅಣೆಕಟ್ಟುಗಳಲ್ಲಿ (ಬಿಹಾರ, ಉ.ಪ್ರದೇಶದಲ್ಲಿ ತಲಾ ಎರಡು, ಪ.ಬಂಗಾಲದಲ್ಲಿ ಒಂದು) ಕೆಲವು ಲೋಪ ಮತ್ತು ಕೊರತೆ ಕಂಡು ಬಂದಿದೆ. ಆದರೆ ನಿಧಿಯ ಕೊರತೆಯ ಕಾರಣ ಸೂಕ್ತ ಪರಿಹಾರ ಕಾರ್ಯ ನಡೆಸಲಾಗಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ. ಭಾರತದ 329 ಮಿಲಿಯನ್ ಹೆಕ್ಟೇರ್ ಪ್ರದೇಶದಲ್ಲಿ 45.64 ಹೆಕ್ಟೇರ್ ಪ್ರದೇಶ ನೆರೆ ಹಾವಳಿಗೆ ತುತ್ತಾಗುವ ಪ್ರದೇಶದಲ್ಲಿದೆ. ಪ್ರತೀ ವರ್ಷ ಸರಾಸರಿ 7.55 ಮಿಲಿಯನ್ ಹೆಕ್ಟೇರ್ ಪ್ರದೇಶ ನೆರೆಹಾವಳಿಗೆ ಒಳಗಾಗುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X