Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಆಪರೇಷನ್ ಅಲಮೇಲಮ್ಮ: ತಾಜಾತನದ...

ಆಪರೇಷನ್ ಅಲಮೇಲಮ್ಮ: ತಾಜಾತನದ ಸಸ್ಪೆನ್ಸ್-ಡ್ರಾಮಾ

ವಾರ್ತಾಭಾರತಿವಾರ್ತಾಭಾರತಿ23 July 2017 12:06 AM IST
share
ಆಪರೇಷನ್ ಅಲಮೇಲಮ್ಮ: ತಾಜಾತನದ ಸಸ್ಪೆನ್ಸ್-ಡ್ರಾಮಾ

ಏಕತಾನತೆಯ ಕಥಾವಸ್ತುಗಳಿಂದ ಹೊರಬರುವ ಪ್ರಯತ್ನಗಳಿಗೆ ಕನ್ನಡ ಚಿತ್ರರಂಗ ಸಾಕ್ಷಿಯಾಗುತ್ತಿದೆ. ಈ ಪಟ್ಟಿಗೆ ಸೇರ್ಪಡೆಗೊಳಿಸಬಹುದಾದ ಮತ್ತೊಂದು ಪ್ರಯೋಗ ‘ಆಪರೇಷನ್ ಅಲಮೇಲಮ್ಮ’. ತಿಳಿ ಹಾಸ್ಯ, ನವಿರು ಪ್ರೇಮಕತೆಯೊಂದಿಗೆ ನಿರ್ದೇಶಕ ಸುನಿ ಸಸ್ಪೆನ್ಸ್-ಡ್ರಾಮಾ ಹೆಣೆದಿದ್ದಾರೆ.

ಮೊದಲರ್ಧ ಸಲೀಸಾಗಿ ನೋಡಿಸಿಕೊಂಡು ಹೋಗುವ ಸಿನೆಮಾ ದ್ವಿತೀಯಾರ್ಧದಲ್ಲಿ ಕೊಂಚ ತಾಳ್ಮೆ ಬೇಡುತ್ತದೆ. ಆದರೆ ಕಲಾವಿದರ ತಾಜಾ ಅಭಿನಯ, ಹಿನ್ನೆಲೆ ಸಂಗೀತ ಮತ್ತು ಆಕರ್ಷಕ ಛಾಯಾಗ್ರಹಣ ಈ ಕೊರತೆಯನ್ನು ನೀಗಿಸುತ್ತವೆ. ಹಿಂದೆ ಲವ್‌ಸ್ಟೋರಿಗಳನ್ನು ಮಾಡಿದ್ದ ಸುನಿ ಈ ಬಾರಿ ಹೊಸರೀತಿಯ ಕತೆಯೊಂದಿಗೆ ಯಶಸ್ವಿಯಾಗಿದ್ದಾರೆ.

ಶ್ರೀಮಂತ ಉದ್ಯಮಿಯೊಬ್ಬನ ಪುತ್ರನನ್ನು ಕಿಡ್ನಾಪ್ ಮಾಡುವ ಸನ್ನಿವೇಶದೊಂದಿಗೆ ಚಿತ್ರ ಆರಂಭವಾಗುತ್ತದೆ. ಇಂಥದ್ದೊಂದು ಸಸ್ಪೆನ್ಸ್ ಎಳೆಯೊಂದಿಗೆ ಶುರುವಾಗುವ ಕತೆ ಪ್ರೇಮಕತೆಗಳನ್ನು ದಾಟಿಕೊಂಡು ಮತ್ತೆ ತನ್ನ ಹಾದಿಗೆ ಹೊರಳಿಕೊಳ್ಳುತ್ತದೆ. ಫ್ಲಾಶ್‌ಬ್ಯಾಕ್ ತಂತ್ರವನ್ನು ನಿರ್ದೇಶಕ ಸುನಿ ಸೊಗಸಾಗಿ ಬಳಕೆ ಮಾಡಿದ್ದು, ಸಸ್ಪೆನ್ಸ್ ಮಾದರಿಗೆ ಇದು ಸೂಕ್ತವಾಗಿ ನೆರವಾಗುತ್ತದೆ.

ಕೊನೆಯ ನಲುವತ್ತೈದು ನಿಮಿಷಗಳ ಚಿತ್ರಕಥೆಗೆ ನಿರ್ದೇಶಕರು ಇನ್ನಷ್ಟು ವೇಗ ಕೊಡಬೇಕಿತ್ತು. ದ್ವಿತೀಯಾರ್ಧ ಶುರುವಾಗುವ ಹೊತ್ತಿನಲ್ಲಿ ಕುತೂಹಲ ಕಾಯ್ದುಕೊಳ್ಳುವ ಸಿನೆಮಾ ಕೊನೆಯ ಹಂತದಲ್ಲಿ ನಿಧಾನವಾಗುವುದೇಕೋ? ಕತೆ ಹೆಣೆಯುವಲ್ಲಿ ನಿರ್ದೇಶಕರಿಗೆ ಟೀವಿ ಕ್ರೈಂ ಸರಣಿಯೊಂದು ಸ್ಫೂರ್ತಿಯಾಗಿದ್ದರೂ ಅಚ್ಚರಿಯೇನಿಲ್ಲ. ಅವರು ಇದನ್ನು ಅಚ್ಚುಕಟ್ಟಾಗಿ ತೆರೆಗೆ ಅಳವಡಿಸುವಲ್ಲಿ ಗೆದ್ದಿದ್ದಾರೆ.

‘ಯೂ ಟರ್ನ್’ ಸಿನೆಮಾ ಖ್ಯಾತಿಯ ಶ್ರದ್ಧಾ ಶ್ರೀನಾಥ್ ಅವರಿಗೆ ಚಿತ್ರದಲ್ಲಿ ಚೆಂದದ ಪಾತ್ರವಿದೆ. ಹೀರೋ ಮನೀಷ್ ರಿಷಿಗೆ ಆಕೆಗಿಂತಲೂ ಹೆಚ್ಚು ಸ್ಕ್ರ್ರೀನ್‌ಪ್ಲೇಸ್ ಇದ್ದು, ಅವರು ಲವಲವಿಕೆಯಿಂದ ನಟಿಸಿದ್ದಾರೆ. ತೆರೆ ಮೇಲೆ ರಿಷಿ-ಶ್ರದ್ಧಾ ಜೋಡಿ ಮುದ್ದಾಗಿ ಕಾಣುತ್ತದೆ. ತಾಯಿಯಾಗಿ ಅರುಣಾ ಬಾಲರಾಜ್ ಅವರದ್ದು ಅತ್ಯುತ್ತಮ ನಟನೆ. ಪೊಲೀಸ್ ಅಧಿಕಾರಿಯಾಗಿ ರಾಜೇಶ್ ನಟರಂಗ ಗಮನ ಸೆಳೆಯುತ್ತಾರೆ. ಛಾಯಾಗ್ರಹಣ ಮತ್ತು ಸಂಗೀತ ನಿರ್ದೇಶಕರಿಗೆ ಒಳ್ಳೆಯ ಸಾಥ್ ಕೊಟ್ಟಿದ್ದು, ಸಿನೆಮಾ ಅಂದವಾಗಿ ಮೂಡಿಬಂದಿದೆ.

ನಿರ್ದೇಶನ: ಸುನಿ, ನಿರ್ಮಾಣ: ಅಮ್ರೆಜ್ ಸೂರ್ಯವಂಶಿ ಮತ್ತು ಸುನಿ, ಸಂಗೀತ: ಸ್ಯಾಂಡಿ, ಛಾಯಾಗ್ರಹಣ: ಅಭಿಷೇಕ್ ಕಾಸರಗೋಡು, ತಾರಾಗಣ: ಮನೀಷ್ ರಿಷಿ, ಶ್ರದ್ಧಾ ಶ್ರೀನಾಥ್, ರಾಜೇಶ್ ನಟರಂಗ, ಅರುಣ ಬಾಲರಾಜ್, ವಿಜೇತ್ ಗೌಡ, ಸುಮುಖ ಮತ್ತಿತರರು.

ರೇಟಿಂಗ್ - ***

* - ಚೆನ್ನಾಗಿಲ್ಲ, ** - ಸಾಧಾರಣ, *** - ಉತ್ತಮ, **** - ಅತ್ಯುತ್ತಮ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X