Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಂಧನದ ಸಂದರ್ಭ ಜನರಿಗೆ ಅವರ ಹಕ್ಕುಗಳ...

ಬಂಧನದ ಸಂದರ್ಭ ಜನರಿಗೆ ಅವರ ಹಕ್ಕುಗಳ ಬಗ್ಗೆ ತಿಳಿಸಿ: ಸರಕಾರಗಳಿಗೆ ದಿಲ್ಲಿ ಹೈಕೋರ್ಟ್‌ನ ತಾಕೀತು

ವಾರ್ತಾಭಾರತಿವಾರ್ತಾಭಾರತಿ23 July 2017 4:59 PM IST
share
  • ಬಂಧನದ ಸಂದರ್ಭ ಜನರಿಗೆ ಅವರ ಹಕ್ಕುಗಳ ಬಗ್ಗೆ ತಿಳಿಸಿ: ಸರಕಾರಗಳಿಗೆ ದಿಲ್ಲಿ ಹೈಕೋರ್ಟ್‌ನ ತಾಕೀತು
  • ಬಂಧನದ ಸಂದರ್ಭ ಜನರಿಗೆ ಅವರ ಹಕ್ಕುಗಳ ಬಗ್ಗೆ ತಿಳಿಸಿ: ಸರಕಾರಗಳಿಗೆ ದಿಲ್ಲಿ ಹೈಕೋರ್ಟ್‌ನ ತಾಕೀತು
  • ಬಂಧನದ ಸಂದರ್ಭ ಜನರಿಗೆ ಅವರ ಹಕ್ಕುಗಳ ಬಗ್ಗೆ ತಿಳಿಸಿ: ಸರಕಾರಗಳಿಗೆ ದಿಲ್ಲಿ ಹೈಕೋರ್ಟ್‌ನ ತಾಕೀತು
  • ಬಂಧನದ ಸಂದರ್ಭ ಜನರಿಗೆ ಅವರ ಹಕ್ಕುಗಳ ಬಗ್ಗೆ ತಿಳಿಸಿ: ಸರಕಾರಗಳಿಗೆ ದಿಲ್ಲಿ ಹೈಕೋರ್ಟ್‌ನ ತಾಕೀತು
  • ಬಂಧನದ ಸಂದರ್ಭ ಜನರಿಗೆ ಅವರ ಹಕ್ಕುಗಳ ಬಗ್ಗೆ ತಿಳಿಸಿ: ಸರಕಾರಗಳಿಗೆ ದಿಲ್ಲಿ ಹೈಕೋರ್ಟ್‌ನ ತಾಕೀತು
  • ಬಂಧನದ ಸಂದರ್ಭ ಜನರಿಗೆ ಅವರ ಹಕ್ಕುಗಳ ಬಗ್ಗೆ ತಿಳಿಸಿ: ಸರಕಾರಗಳಿಗೆ ದಿಲ್ಲಿ ಹೈಕೋರ್ಟ್‌ನ ತಾಕೀತು

ಹೊಸದಿಲ್ಲಿ,ಜು.23: ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರು ಬಂಧಿಸುವ ಅಥವಾ ವಶಕ್ಕೆ ತೆಗೆದುಕೊಳ್ಳುವ ಸಂದರ್ಭ ತಮಗಿರುವ ಹಕ್ಕುಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸಲು ಜಾಗ್ರತಿ ಅಭಿಯಾನವೊಂದನ್ನು ಕೈಗೊಳ್ಳುವಂತೆ ದಿಲ್ಲಿ ಉಚ್ಚ ನ್ಯಾಯಾಲಯವು ಕೇಂದ್ರ ಮತ್ತು ದಿಲ್ಲಿಯ ಆಪ್ ಸರಕಾರಗಳಿಗೆ ನಿರ್ದೇಶ ನೀಡಿದೆ.

ಜಾಮೀನು ರಹಿತ ಅಥವಾ ಸಂಜ್ಞೇಯ ಅಪರಾಧ ಪ್ರಕರಣಗಳಲ್ಲಿಯೂ ಪೊಲೀಸರು ಜನರನ್ನು ಏಕಾಏಕಿ ಬಂಧಿಸುವಂತಿಲ್ಲ ಅಥವಾ ವಶಕ್ಕೆ ತೆಗೆದುಕೊಳ್ಳುವಂತಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ಹಿಂದೆ ತೀರ್ಪುಗಳನ್ನು ನೀಡಿದೆ ಎಂದು ಹೇಳಿದ ಪ್ರಭಾರ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಮತ್ತು ನ್ಯಾ.ಸಿ.ಹರಿಶಂಕರ ಅವರ ಪೀಠವು, ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದ ಮೇರೆಗೆ 2008,ಅಕ್ಟೋಬರ್‌ನಲ್ಲಿ ದಿಲ್ಲಿ ಪೊಲೀಸ್ ಇಲಾಖೆ ಕೂಡ ಈ ಸಂಬಧ ಸ್ಥಾಯಿ ಆದೇಶಗಳನ್ನು ಹೊರಡಿಸಿದೆ. ಆದರೆ ಬಂಧನದ ಸಂದರ್ಭ ತಮ್ಮ ಹಕ್ಕುಗಳ ಬಗ್ಗೆ ಜನರಿಗೆ ತಿಳಿದಿಲ್ಲವೆಂಬಂತೆ ಕಂಡು ಬರುತ್ತಿದೆ ಎಂದು ಬೆಟ್ಟು ಮಾಡಿತು.

ಬಂಧನಕ್ಕೆ ಮಾರ್ಗಸೂಚಿಗಳನ್ನು ನಿಗದಿಗೊಳಿಸಿರುವ ದಿಲ್ಲಿ ಪೊಲೀಸ್‌ನ ಸ್ಥಾಯಿ ಆದೇಶದ ಕುರಿತು ಜನರಿಗೆ ಮಾಹಿತಿ ಒದಗಿಸಲು ಪ್ರತಿವಾದಿಗಳು(ಕೇಂದ್ರ ಮತ್ತು ದಿಲ್ಲಿ ಸರಕಾರ) ಕ್ರಮಗಳನ್ನು ಕೈಗೊಳ್ಳಬೇಕು. ಇದನ್ನು ಸ್ಥಳೀಯ ಭಾಷೆಗಳಲ್ಲಿ ಪ್ರಕಟಿಸಬೇಕು ಮತ್ತು ಸಾರ್ವಜನಿಕರಿಗೆ ವಿತರಿಸಬೇಕು. ಬಂಧಿಸಲ್ಪಟ್ಟ ಪ್ರತಿಯೊಬ್ಬ ವ್ಯಕ್ತಿಗೂ ಇದರ ಪ್ರತಿಯನ್ನು ಒದಗಿಸಬೇಕು ಎಂದು ಆದೇಶಿಸಿದ ಪೀಠವು, ಇದಕ್ಕಾಗಿ ನಾಲ್ಕು ವಾರಗಳ ಗಡುವು ವಿಧಿಸಿತು.

ತಮ್ಮ ಹಕ್ಕುಗಳ ಬಗ್ಗೆ ಪ್ರಜೆಗಳ ಅಮಾಯಕತೆಯ ದುರ್ಲಾಭವನ್ನು ಪಡೆಯುವ ಮೂಲಕ ಸರಕಾರಗಳು ಸಂವಿಧಾನದ 22(2)ವಿಧಿಯನ್ನು ಉಲ್ಲಂಘಿಸುತ್ತಿವೆ ಎಂದು ಆರೋಪಿಸಿ ಸುಭಾಷ್ ವಿಜಯರಾನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿಯ ದೂರಿಗೆ ಸಂಬಂಧಿಸಿದಂತೆ ನ್ಯಾಯಾಲಯವು ಈ ನಿರ್ದೇಶವನ್ನು ನೀಡಿದೆ.

ಈ ವಿಧಿ ಮತ್ತು ಐಪಿಸಿಯ ಕಲಂ 57ರಂತೆ ಆರೋಪಿಯನ್ನು, ಪ್ರಯಾಣದ ಅವಧಿಯನ್ನು ಹೊರತು ಪಡಿಸಿ, ಬಂಧಿಸಿದ 24 ಗಂಟೆಗಳಲ್ಲಿ ನ್ಯಾಯಾಧೀಶರ ಎದುರು ಹಾಜರುಪಡಿಸಬೇಕು. ನ್ಯಾಯಾಧೀಶರು ಅನುಮತಿ ನೀಡಿದರೆ ಮಾತ್ರ ಆರೋಪಿ ಯನ್ನು 24 ಗಂಟೆಗೂ ಹೆಚ್ಚಿನ ಅವಧಿಗೆ ಬಂಧನದಲ್ಲಿರಿಸಬಹುದು ಎಂದು ಅರ್ಜಿಯಲ್ಲಿ ಗಮನ ಸೆಳೆಯಲಾಗಿತ್ತು.

ಜಾಮೀನು ರಹಿತ ಅಥವಾ ಸಂಜ್ಞೇಯ ಅಪರಾಧವೆಂಬ ಮಾತ್ರಕ್ಕೆ ಆರೋಪಿಯನ್ನು ಬಂಧಿಸಬಾರದು. ಆರೋಪದ ಸತ್ಯಾಸತ್ಯತೆಯನ್ನು ತನಿಖೆಯಿಂದ ಖಚಿತಪಡಿಸಿಕೊಂಡ ಬಳಿಕವೇ ಆತನನ್ನು ಬಂಧಿಸಬೇಕು ಎಂದು ಈ ಹಿಂದೆ ಸ್ಪಷ್ಟಪಡಿಸಿದ್ದ ಸರ್ವೋಚ್ಚ ನ್ಯಾಯಾಲಯವು, ಅದಕ್ಕಾಗಿ ಕೆಲವು ಮಾರ್ಗಸೂಚಿಗಳನ್ನೂ ನಿಗದಿಗೊಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X