Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಕ್ಕಳ ಪ್ರತಿಭೆಗೆ ಪೋಷಕರು ನೀರೆರೆದು...

ಮಕ್ಕಳ ಪ್ರತಿಭೆಗೆ ಪೋಷಕರು ನೀರೆರೆದು ಪೋಷಿಸಬೇಕು: ಶ್ರೀ ಚಂದ್ರಶೇಖರ್‌ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ23 July 2017 5:33 PM IST
share
ಮಕ್ಕಳ ಪ್ರತಿಭೆಗೆ ಪೋಷಕರು ನೀರೆರೆದು ಪೋಷಿಸಬೇಕು: ಶ್ರೀ ಚಂದ್ರಶೇಖರ್‌ಸ್ವಾಮೀಜಿ

ತುಮಕೂರು, ಜು.23: ಮನುಷ್ಯ ಯಾವುದೇ ಕ್ಷೇತ್ರದಲ್ಲಾದರೂ ಮುಂದೆ ಬರಬೇಕೆಂದರೆ ಸತತ ಪ್ರಯತ್ನ ಮತ್ತು ಪರಿಶ್ರಮದಿಂದ ಮಾತ್ರ ಸಾಧ್ಯ ಎಂದು ಬೆಟ್ಟದಹಳ್ಳಿ ಗವಿಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ತಿಳಿಸಿದ್ದಾರೆ.

ನಗರದ ಸಿದ್ದಿ ವಿನಾಯಕ ಸಮುದಾಯ ಭವನದಲ್ಲಿ ತುಮಕೂರು ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ವೀರಶೈವ ಲಿಂಗಾಯತ ನೌಕರರ ಸಮಾವೇಶ ಗುರುವಂದನೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಮಾತನಾಡಿದ ಅವರು, ತಮ್ಮ ಮಕ್ಕಳ ಪ್ರತಿಭೆಯನ್ನು ಪೋಷಕರು ಗುರುತಿಸಿ, ಅದಕ್ಕೆ ನೀರೆರೆದು ಪೋಷಿಸುವ ಕೆಲಸವನ್ನು ಮಾಡಬೇಕು. ಆಗ ಮಕ್ಕಳು ಯಾವುದೇ ಕ್ಷೇತ್ರದಲ್ಲಾದರೂ ಯಶಸ್ಸಿನ್ನು ಕಾಣುತ್ತಾರೆ ಎಂದರು.

ವೀರಶೈವ ಲಿಂಗಾಯತ ಧರ್ಮದ ತತ್ವವನ್ನು ತಿಳಿದುಕೊಂಡರೆ ಯಾವುದೇ ಭೇದ ಉಂಟಾಗುವುದಿಲ್ಲ. ಪದಗಳು ಬೇರೆ ಬೇರೆ ಆಗಿರಬಹುದು ಆದರೆ ತತ್ವ ಒಂದೇ ಎಂದು ಶ್ರೀಚಂದ್ರಶೇಖರ ಸ್ವಾಮೀಜಿ ತಿಳಿಸಿದರು. 

ಮಾಜಿ ಸಂಸದ ಜಿ.ಎಸ್ ಬಸವರಾಜು ಮಾತನಾಡಿ, ಪ್ರತಿಭೆ ಪ್ರತಿಯೊಬ್ಬ ಮನುಷ್ಯನಲ್ಲೂ ಇದ್ದೇ ಇರುತ್ತದೆ ಅದನ್ನು ಪ್ರೋತ್ಸಾಹಿಸಿ ಬೆಳೆಸಿದರೆ ಅವರು ಮುಂದೆ ಬರುತ್ತಾರೆ. ನೌಕರಿ ಹಿಡಿಯುವುದಕ್ಕಿಂತ ನೌಕರಿ ಕೊಡುವಂತಹ ಕ್ಷೇತ್ರದತ್ತ ಮುಖ ಮಾಡಿ ಅದರಲ್ಲಿ ಯಶಸ್ಸುನ್ನು ಕಾಣಬೇಕು. ನೌಕರಿ ಹಿಡಿದು ಗುಲಾಮರಾಗಿ ಜೀವನ ನಡೆಸುವುದಕ್ಕಿಂತ ತಮ್ಮ ಸ್ವಂತ ಕಾಲಿನ ಮೇಲೆ ನಿಂತು ಯಾರ ಹಂಗಿಲ್ಲದೆ ಬದುಕುವಂತಹ ಕ್ಷೇತ್ರದಲ್ಲಿ ಮುಂದೆ ಬರಲು ಮುನ್ನುಗ್ಗಿದಾಗ ದೇಶ ಅಭಿವೃದ್ದಿ ಪಥದಲ್ಲಿ ಸಾಗುತ್ತದೆ ಎಂದರು.

ನಿವೃತ್ತ ಐಎಎಸ್ ಅಧಿಕಾರಿ ಸೋಮಶೇಖರ್ ಮಾತನಾಡಿ, ಪ್ರತಿಭಾ ಪುರಸ್ಕಾರ ಮಾಡಿ ಮಕ್ಕಳ ಭವಿಷ್ಯವನ್ನು ಅವರ ಕೈಲಿ ನೀಡುವುದು ಬೇಡ. ಪೋಷಕರು ಅವರ ಭವಿಷ್ಯವನ್ನು ಉತ್ತುಂಗ ಮಟ್ಟಕ್ಕೆ ಕೊಂಡೊಯ್ಯಲು ಪ್ರೋತ್ಸಾಹ ನೀಡಬೇಕಾಗಿದೆ.ಸೋಮಾರಿಗಳಿಗೆ ಯಾವುದೇ ಅದೃಷ್ಟ ಒಲಿಯುವುದಿಲ್ಲ. ಸತತ ಪ್ರಯತ್ನದಿಂದ ಮುಂದೆ ಬಂದ ವ್ಯಕ್ತಿಗಳಿಗೆ ಮಾತ್ರ ಅದೃಷ್ಟ ಅವರ ಅಂಗೈಲಿ ಇರುತ್ತದೆ ಎಂದರು.
ನೀವೃತ್ತ ನೌಕರೆರೆಲ್ಲಾ ಸೇರಿ ಪ್ರತಿ ವರ್ಷಕ್ಕೆ ಒಂದು ಸಾವಿರ ದೇಣಿಗೆ ನೀಡಿ ತುಮಕೂರಿನಲ್ಲಿ ಒಂದು ಕೋಚಿಂಗ್ ಸೆಂಟರ್ ಸ್ಥಾಪನೆ ಮಾಡಿ ಮಕ್ಕಳ ಭವಿಷ್ಯಕ್ಕೆ ಅಡಿಪಾಯ ಹಾಕೋಣ ಎಂಬ ಅಭಿಲಾಷೆಯನ್ನು ಡಾ.ಸಿ.ಸೋಮಶೇಖರ್ ವ್ಯಕ್ತ ಪಡಿಸಿದರು. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜ್ಯೋತಿ ಪ್ರಕಾಶ್ ವಾತನಾಡಿ, ನಿಮ್ಮ ಭವಿಷ್ಯವನ್ನು ನೀವೇ ನಿರ್ಧಾರ ಮಾಡಿಕೊಳ್ಳಬೇಕು. ನಿಮ್ಮ ನಿರ್ಧಾರಕ್ಕೆ ತಕ್ಕಂತೆ ಸದೃಢ ಮನೋಭಾವನೆ ಹೊಂದಿ ಸದಾ ಯಸಸ್ಸಿನೆಡೆದೆ ಹೆಜ್ಜೆಯನ್ನಿಡಬೇಕು. ಸಮಾಜದಲ್ಲಿ ನಿಮ್ಮನ್ನು ಗುರುತಿಸುವ ಉತ್ತಮ ವ್ಯಕ್ತಿಯಾಗಿ ಬೆಳೆದ ಸಮಾಜಕ್ಕೇನಾದರೂ ಕೊಡುಗೆ ನೀಡುವಂತಹ ಕೆಲಸವನ್ನು ಮಾಡಬೇಕು ಎಂದರು.

ಸಮಾರಂಭದಲ್ಲಿ ಎಸ್.ಎಸ್ ಎಲ್.ಸಿ ಮತ್ತು ಪಿಯುಸಿಯ ಸುಮಾರು 176 ವಿದ್ಯಾರ್ಥಿಗಳಿಗೆ ಪ್ರತಿಭಾ ಪರುಸ್ಕಾರವನ್ನು ನೀಡಿ ಪುರಸ್ಕರಿಸಲಾಯಿತು. ಸಮಾರಂಭದಲ್ಲಿ ಸಿಡ್ಲೆಹಳ್ಳಿ ಮಹಾಸಂಸ್ಥಾನ ಮಠ ಶ್ರೀಗುರುಕುಲ ನಂದಾಶ್ರಮದ ಶ್ರೀಇಮ್ಮಡಿ ಕರಿಬಸವದೇಶಿ ಕೇಂದ್ರ ಮಹಾಸ್ವಾಮೀಜಿ, ಶ್ರೀಸಿದ್ದಿವಿನಾಯಕ ಸೇವಾಮಂಡಳಿ ಮತ್ತು ಟಿಜಿಎಂಸಿ ಬ್ಯಾಂಕ್‌ನ ಅಧ್ಯಕ್ಷ ಎನ್.ಆರ್. ಜಗದೀಶ ಆರಾಧ್ಯ, ವೀರಶೈವ ಸಮಾಜದ ಅಧ್ಯಕ್ಷ ಟಿ.ಬಿ ಶೇಕರ್, ತಿಪಟೂರು ಜೆ ಡಿ.ಎಸ್ ುುಖಂಡ ಲೋಕೇಶ್ವರಪ್ಪ, ಡಾ.ಪರಮೇಶ್ವರ್, ಎಸ್,ಸಿ ಮಂಜುನಾಥ್, ಕೊಪ್ಪಳ್ ನಾಗರಾಜ್, ಉಮೇಶ್ ಸೇರಿದಂತೆ ಮುಂತಾದವರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X