Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೂತನ ಪಿಂಚಣಿ ಯೋಜನೆ ರದ್ದತಿಗೆ ಮಾಲಗತ್ತಿ...

ನೂತನ ಪಿಂಚಣಿ ಯೋಜನೆ ರದ್ದತಿಗೆ ಮಾಲಗತ್ತಿ ಆಗ್ರಹ

ಎನ್‌ಪಿಎಸ್ ಯೋಜನೆಯ ವಿಫಲ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ23 July 2017 6:29 PM IST
share

ಬೆಂಗಳೂರು, ಜು. 22 : ಕೇಂದ್ರ ಹಾಗೂ ರಾಜ್ಯ ಸರಕಾರಿ ನೌಕರರ ಪಿಂಚಣಿ ಹಣವನ್ನು ಷೇರು ಮತ್ತು ಕಾರ್ಪೋರೇಟ್ ವಲಯದಲ್ಲಿ ಹೂಡಲು ರೂಪಿಸಿರುವ ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಬೇಕು ಎಂದು ಕುವೆಂಪು ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಡಾ.ಅರವಿಂದ ಮಾಲಗತ್ತಿ ಒತ್ತಾಯಿಸಿದ್ದಾರೆ.

 ರವಿವಾರ ನಗರದ ಗಾಂಧಿ ಭವನದಲ್ಲಿ ರಾಜ್ಯ ಸರಕಾರಿ ಎನ್‌ಪಿಎಸ್ ನೌಕರರ ಸಂಘ ಆಯೋಜಿಸಿದ್ದ ನೂತನ ಪಿಂಚಣಿ ಯೋಜನೆಯ ವಿಫಲತೆ ಕುರಿತ -ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪಿಂಚಣಿ ಹಣವನ್ನು ಕಾನೂನ್ಮಾಕವಾಗಿ ಷೇರು ಮಾರುಕಟ್ಟೆಯಲ್ಲಿ ಜೂಜಾಡಲು ನೌಕರರನ್ನು ಸರಕಾರ ಬಲವಂತವಾಗಿ ತಳ್ಳುತ್ತಿದೆ.ರೈತರು ನಿಸರ್ಗದೊಂದಿಗೆ ಜೂಜಾಡಿ ಆತ್ಮಹತ್ಯೆಗೆ ಶರಣಾಗುವ ರೀತಿಯಲ್ಲೆ ಮುಂದೆ ಒಂದು ದಿನ ಸರಕಾರಿ ನೌಕರರು ಸರಣಿ ಆತ್ಮಹತ್ಯೆ ಆರಂಭವಾದರೂ ಅಚ್ಚರಿ ಪಡಬೇಕಿಲ್ಲ ಎಂದು ಭೀತಿ ವ್ಯಕ್ತಪಡಿಸಿದರು.

ಪಿಂಚಣಿ ಎಂಬುವುದು ನಿವೃತ್ತಿ ಜೀವನದ ಊರುಗೋಲು.ಆದರೆ ನೀತನ ಪಿಂಚಣಿ ಯೋಜನೆಯ ಮೂಲಕ ಈ ಊರುಗೋಲನ್ನು ಕೇಂದ್ರ ಸರಕಾರ ಮುರಿಯಲು ಯತ್ನಿಸುತ್ತಿದೆ. ಈ ಯೋಜನೆಯಿಂದ ಪಿಂಚಣಿದಾರರ ಸ್ಥಿತಿ ಕಾಸಾಯಿಖಾನೆ ಮುಂದೆ ನಿಂತ್ತಿರುವ ಹಸುವಿನಂತ್ತಿದೆ ಎಂದರು.
 ಸರಕಾರ ಮಾತೃತ್ವದ ಹೃದಯ ಹೊಂದಿರಬೇಕೆ ವಿನಃ ಮಾರ್ವಾಡಿಗಳ ಹೃದಯ ಹೊಂದಿರಬಾರದು. ಸರಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದೆ. ಪ್ರಧಾನಿ ಮೋದಿ ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ತರಲು ತೋರಿಸುತ್ತಿರುವ ಆಸಕ್ತಿಯನ್ನು ಸರಕಾರಿ ನೌಕರರ ಪಿಂಚಣಿ ಯೋಜನೆಗೆ ತೋರಿಸಲಿ ಎಂದು ಆಗ್ರಹಿಸಿದರು.

ನೂತನ ಪಿಂಚಣಿ ಯೋಜನೆಯಿಂದ ಜೀವನಾಂಶಕ್ಕೆ ಅಗತ್ಯವಿರುವ ಆದಾಯ ಸಿಗದೆ ಪಿಂಚಣಿದಾರರು ಅತಂತ್ರ, ಒತ್ತಡಕ್ಕೆ ಸಿಲುಕಲಿದ್ದಾರೆ.ಈ ಯೋಜನೆ ಕುಟುಂಬವನ್ನು ಹೊಡೆಯಲಿದೆ.ಪ್ರತಿ ಗ್ರಾಮಕ್ಕೊಂದು ವೃದ್ಧಾಶ್ರಮಗಳನ್ನು ತೆರೆಯಬೇಕಾದ ಅನಿವಾರ್ಯತೆ ಸೃಷ್ಟಿಯಾಗಲಿದೆ. ಇದನ್ನು ಅರಿತು ಕೂಡಲೆ ಕೇಂದ್ರ ಸರಕಾರ ಈ ಯೋಜನೆಯನ್ನು ಹಿಂತೆಗೆದುಕೊಂಡು ಸರಕಾರಿ ನೌಕರರ ಹಿತದೃಷ್ಟಿಯಿಂದ 5 ಮತ್ತು 7ನೆ ವೇತನ ಆಯೋಗದ ಶಿಫಾರಸ್ಸುಗಳನ್ನು ಚಾಚು ತಪ್ಪದೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ ಹೆಗಡೆ ಮಾತನಾಡಿ, ಸರಕಾರಿ ನೌಕರರು ಬಿಕ್ಷುಕರಾಗಿ ಬಂದಿಲ್ಲ. ಪಿಂಚಣಿ ಎಂಬುವುದು ಅವರ ಮೂಲಭೂತ ಹಕ್ಕೇ ಹೊರತು ಬೇಡಿಕೆ ಅಲ್ಲ. ಒಂದೇ ಸಂಸ್ಥೆಯಲ್ಲಿ ತಾರತಮ್ಯವಿರುವ ಎರಡು ರೀತಿಯ ಪಿಂಚಣಿ ಯೋಜನೆ ತರವಲ್ಲ. ಸರಕಾರದ ಎಲ್ಲ ನೌಕರರಿಗೆ ವೌಲ್ಯಯುತ ನಿರ್ದಿಷ್ಟ ಪಿಂಚಣಿ ನೀಡಲು ಮೀನಾಮೇಷ ಬೇಡ ಎಂದರು.

ಏಕರೂಪ ವೇತನ-ಪಿಂಚಣಿ ಜಾರಿಗೆ ತನ್ನಿ:  ದೇಶದಲ್ಲಿ ಒಂದೇ ರೀತಿ ತೆರಿಗೆ ಜಿಎಸ್ಟಿ ರೀತಿಯಲ್ಲಿ ಸರಕಾರಿ ನೌಕರರಿಗೆ ಏಕರೂಪ ವೇತನ ಮತ್ತ ಪಿಂಚಣಿಯನ್ನು ಕೇಂದ್ರ ಸರಕಾರ ಜಾರಿಗೆ ತರಲಿ ಎಂದು ರಾಜ್ಯ ಸರಕಾರಿ ಎನ್‌ಪಿಎಸ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಎ.ನಾಗನಗೌಡ ಸವಾಲು ಹಾಕಿದರು.

ನೂತನ ಪಿಂಚಣಿ ಯೋಜನೆಯಲ್ಲಿನ ತಾರತಮ್ಯವನ್ನು ನೀಗಿಸಲು ಸರಕಾರದ ಮೇಲೆ ಒತ್ತಡ ತರಲು 10 ಸಾವಿರ ನೌಕರರಿಂದ ನವೆಂಬರ್ ತಿಂಗಳಲ್ಲಿ ಸ್ವಾತಂತ್ರ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಆಷ್ಟರೊಳಗೆ ನೌಕರರೊಂದಿಗೆ ಸಭೆ ಕರೆದು ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸರಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

 ಕಾರ್ಯಕ್ರಮದಲ್ಲಿ ರಾಜ್ಯ ಸರಕಾರ ಸಚಿವಾಲಯದ ನೌಕರರ ಸಂಘದ ಅಧ್ಯಕ್ಷ ಪಿ.ಗುರುಸ್ವಾಮಿ, ತೆಲಂಗಾಣ ಪಿಂಚಣಿ ಯೋಜನೆ ನೌಕರರ ಸಂಘದ ಅಧ್ಯಕ್ಷ ಸ್ಥಿತ ಪ್ರಜ್ಞಾ, ಆಂಧ್ರ ಪ್ರದೇಶ ನೌಕರರ ಸಂಘಟನೆಯ ರಾಮಾಂಜನೆಯಲು, ಉತ್ತರ ಪ್ರದೇಶದ ಶಿಕ್ಷಕರ ಮತ್ತು ನೌಕರರ ಕಲ್ಯಾಣ ಸಂಘಟನೆಯ ಅಧ್ಯಕ್ಷ ವಿಜಯ್ ಕುಮಾರ್ ಬಂಧು ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X