Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಪತ್ರಕರ್ತರ ಸಮಸ್ಯೆ ಪರಿಹಾರಕ್ಕೆ...

'ಪತ್ರಕರ್ತರ ಸಮಸ್ಯೆ ಪರಿಹಾರಕ್ಕೆ ಮುಖ್ಯಮಂತ್ರಿ ಜೊತೆ ಚರ್ಚೆ' : ಕೆ.ಎಸ್.ಈಶ್ವರಪ್ಪ

ವಾರ್ತಾಭಾರತಿವಾರ್ತಾಭಾರತಿ23 July 2017 7:01 PM IST
share
ಪತ್ರಕರ್ತರ ಸಮಸ್ಯೆ ಪರಿಹಾರಕ್ಕೆ ಮುಖ್ಯಮಂತ್ರಿ ಜೊತೆ ಚರ್ಚೆ : ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ, ಜು. 23: 'ಪತ್ರಿಕೋದ್ಯಮ ಅತ್ಯಂತ ಪವಿತ್ರವಾದ ಕ್ಷೇತ್ರವಾಗಿದೆ. ಯಾರೋ ಕೆಲವರು ಹಾದಿ ತಪ್ಪಿದ್ದಾರೆಂದು ಆರೋಪಿಸಿ, ಇಡೀ ಮಾಧ್ಯಮ ರಂಗವನ್ನೇ ದೂಷಣೆಗೊಳಪಡಿಸುವುದು ಸರಿಯಲ್ಲ. ಪತ್ರಕರ್ತರು ಕಾರ್ಯ ಅತ್ಯಂತ ಶ್ಲಾಘನೀಯವಾಗಿದ್ದು, ಸಮಾಜದ ಓರೆಕೊರೆ ತಿದ್ದುವಲ್ಲಿ ಪ್ರಮುಖ ಪಾತ್ರವಹಿಸಿಕೊಂಡು ಬರುತ್ತಿದ್ದಾರೆ' ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಭಾನುವಾರ ನಗರದ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಕರ್ತರ ವಾರ್ಷಿಕ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಪತ್ರಕರ್ತರ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಪತ್ರಕರ್ತರ ಸಂಘವು ಸರ್ಕಾರದ ಮುಂದೆ ಹಲವು ಬೇಡಿಕೆ ಈಡೇರಿಕೆಗೆ ಮನವಿ ಮಾಡಿದೆ. ಈ ಬೇಡಿಕೆಗಳ ಈಡೇರಿಸುವುದಕ್ಕೆ ಸಂಬಂಧಿಸಿದಂತೆ ತಾವು ಕೂಡ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸುತ್ತೆನೆ ಎಂದು ಭರವಸೆ ನೀಡಿದರು.

ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್ ಮಾತನಾಡಿ, ಪತ್ರಕರ್ತರ ಮೇಲೆ ಗುರುತರ ಜವಾಬ್ದಾರಿಯಿದ್ದು ಇದನ್ನು ಅರಿತು ಮುನ್ನಡೆಯಬೇಕು. ವ್ಯವಸ್ಥೆಯ ಸುಧಾರಣೆಯಲ್ಲಿ ಪತ್ರಕರ್ತರ ಪಾತ್ರ ಅತ್ಯಂತ ಗಮನಾರ್ಹವಾದುದಾಗಿದೆ. ವಿಶೇಷ ಸಾಧನೆ ಮಾಡಿದ ಪತ್ರಕರ್ತರನ್ನು ಗುರುತಿಸಿ ಸನ್ಮಾನಿಸುತ್ತಿರುವ ಜಿಲ್ಲಾ ಪತ್ರಕರ್ತರ ಸಂಘದ ಕ್ರಮ ಮಾದರಿಯಾದುದಾಗಿದೆ ಎಂದರು.

ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಮಾತನಾಡಿ, ಪತ್ರಕರ್ತರು ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಉತ್ತಮ ದಾರಿಗೆ ಕೊಂಡೊಯ್ಯುವ ಕೆಲಸ ಮಾಡುತ್ತಾರೆ. ಪತ್ರಕರ್ತರ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಬದ್ದವಾಗಿದೆ ಎಂದು ಹೇಳಿದ ಅವರು, ಪ್ರತಿಭಾನ್ವಿತ ವರದಿಗಾರರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.

ಇದಕ್ಕೂ ಮುನ್ನ ಸಮಾರಂಭ ಉದ್ಘಾಟಿಸಿ ಬೆಕ್ಕಿನಕಲ್ಮಠದ ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿ ಮಾತನಾಡಿ, ಆರೋಗ್ಯವಂತ ಪ್ರಜಾಪ್ರಭುತ್ವ ಸಮಾಜ ನಿರ್ಮಾಣ ಮಾಡಲು ಪತ್ರಕರ್ತರು ಗಮನಹರಿಸಬೇಕು. ವೃತ್ತಿ ಪಾವಿತ್ರ್ಯತೆ ಕಾಯ್ದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ದೃಶ್ಯ ಮಾಧ್ಯಮದ ಮಂದಿ ಸಾಮಾನ್ಯ ತಿಳಿವಳಿಕೆಯಿಂದ ತಮ್ಮ ವೃತ್ತಿ ನಿಭಾಯಿಸಬೇಕು. ಸಮಾಜಕ್ಕೆ ವಿಶೇಷವಾದುದನ್ನು ಹೇಳುವ ಅವಸರದಲ್ಲಿ ವಾಸ್ತವ ಮರೆಯಬಾರದು. ಸಾಮಾಜಿಕ ಜ್ವಲಂತ ಸಮಸ್ಯೆ ಹೊರತರುವಂತಹ ಕೆಲಸ ಮಾಡಬೇಕು ಎಂದು ಹೇಳಿದ ಅವರು, `ಊರು ಉಪಕಾರ ಅರಿಯದು, ಹೆಣ ಸಿಂಗಾರ ಅರಿಯದು' ಎಂಬ ಗಾದೆ ಮಾತಿದೆ. ಇದನ್ನು ಸುಳ್ಳು ಮಾಡಬೇಕು.

ಸಮಾಜದಲ್ಲಿ ಒಳ್ಳೆಯ ಸಾಧನೆ ಮಾಡಿದವರನ್ನು ಪತ್ರಕರ್ತರ ಸಂಘ ಗುರುತಿಸುವಂತಹ ಸೌಜನ್ಯತೆ ಹಾಗೂಸಹೃದಯತೆ ಮೆರೆಯುತ್ತಿರುವುದು ಸ್ವಾಗತಾರ್ಹ ಎಂದು ಅಭಿಪ್ರಾಯಪಟ್ಟರು.

ಬಸವಕೇಂದ್ರದ ಬಸವಮರುಳಸಿದ್ದ ಸ್ವಾಮೀಜಿ ಮಾತನಾಡಿ, ಪತ್ರಕರ್ತರ ಮೇಲೆ ನಿಯಂತ್ರಣ ಹೇರುವ ಕ್ರಮ ಸರಿಯಲ್ಲ. ಮಾಧ್ಯಮಗಳಿಗೆ ಹೆಚ್ಚಿನ ಸ್ವಾತಂತ್ರ್ಯ ದೊರಕಬೇಕಿದೆ. ಆದರೆ, ಈ ಸ್ವಾತಂತ್ರ್ಯದ ಎಲ್ಲೆ ಮೀರಬಾರದು. ಸಮಾಜದಲ್ಲಿ ವ್ಯಕ್ತಿಗಳನ್ನು ಬೆಸೆಯುವ ಮಾಧ್ಯಮಗಳಿಗೆ ರಾಷ್ಟ್ರದಲ್ಲಿ ಸರ್ಕಾರದ 4 ನೇ ಅಂಗ ಎಂದು ಗೌರವಿಸಲಾಗಿದೆ ಎಂದರು. ಮಾಧ್ಯಮದ ಮಂದಿ ತಮ್ಮ ಇತಿ, ಮಿತಿಗಳನ್ನು ಮೀರದಂತೆ ಆತ್ಮವಿಮರ್ಶೆ ಮಾಡಿಕೊಂಡು ಸೃಜನಶೀಲ ಚಿಂತನೆಯಿಂದ ಹೊಸ ನಾಡು ನಿರ್ಮಿಸಬೇಕು ಎಂದರು.

ಸಮಾರಂಭದಲ್ಲಿ ಜೆಡಿಎಸ್ ಮುಖಂಡ ಎಂ.ಶ್ರೀಕಾಂತ್, ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಮುಖ್ಯಮಂತ್ರಿ ಮಾಧ್ಯಮ ಸಮನ್ವಯಕಾರ ಕೆ.ವಿ.ಪ್ರಭಾಕರ್, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎನ್.ರಾಜು, ಉಪಾಧ್ಯಕ್ಷ ಶಿವಾನಂದ ತಗಡೂರು, ಸಂಘದ ಜಿಲ್ಲಾಧ್ಯಕ್ಷ ಎನ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ವೈದ್ಯ, ಸಂಘದ ಉಪಾಧ್ಯಕ್ಷ ರವಿ ಬಿದನೂರು, ಕೆ.ವಿ. ಶಿವಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X