Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪರಭಾಷಿಕರಿಗೆ ಪ್ರೀತಿಯಿಂದ ಕನ್ನಡ ಕಲಿಸಿ:...

ಪರಭಾಷಿಕರಿಗೆ ಪ್ರೀತಿಯಿಂದ ಕನ್ನಡ ಕಲಿಸಿ: ಮಾಯಣ್ಣ

ವಾರ್ತಾಭಾರತಿವಾರ್ತಾಭಾರತಿ23 July 2017 7:50 PM IST
share

ಬೆಂಗಳೂರು, ಜು.23: ಪರಭಾಷಿಕರನ್ನು ಪ್ರೀತಿಯಿಂದ ಬರ ಮಾಡಿಕೊಂಡು ಅವರಿಗೆ ಕನ್ನಡ ಕಲಿಸುವುದರ ಮೂಲಕ ಕನ್ನಡವನ್ನು ಬೆಳೆಸುವ ಕೆಲಸ ಮಾಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ನಗರ ಜಿಲ್ಲಾಧ್ಯಕ್ಷ ಮಾಯಣ್ಣ ತಿಳಿಸಿದ್ದಾರೆ.

ರವಿವಾರ ನಗರದ ಕಸಾಪದಲ್ಲಿ ಆಯೋಜಿಸಿದ್ದ ಕವಿಗೋಷ್ಠಿ ಮತ್ತು ಗೀತಗಾಯನ ಹಾಗೂ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕನ್ನಡ ನಾಡಿಗೆ ವಲಸೆ ಬರುವ ಎಲ್ಲರೂ ನಮ್ಮವರೇ. ಹೀಗಾಗಿ ಅವರನ್ನು ದ್ವೇಷಿಸುವ ಬದಲಿಗೆ ನಮ್ಮೊಂದಿಗೆ ಬೆರೆಸಿಕೊಳ್ಳುವ ಮೂಲಕ ಕನ್ನಡ ಕಲಿಸುವ ಕೆಲಸ ಮಾಡೋಣ ಎಂದು ಸಲಹೆ ನೀಡಿದರು. ನಾಡು-ನುಡಿ ಬೆಳೆಸುವ ಸಲುವಾಗಿ ನಾನು ನಿರಂತರವಾಗಿ ದುಡಿಯುತ್ತಿದ್ದೇನೆ. ಇದನ್ನು ಸಹಿಸದ ಹಲವರು ಕಾಲು ಎಳೆಯಲು ಪ್ರಯತ್ನಿಸುತ್ತಿದ್ದಾರೆ. ಕನ್ನಡವನ್ನು ಉಳಿಸಲು ಕೆಲಸ ಮಾಡಬೇಕಾದವರು ಈ ರೀತಿಯ ಕೆಲಸ ಮಾಡುತ್ತಿರುವಾಗ ಕನ್ನಡಕ್ಕಾಗಿ ಇನ್ನಷ್ಟು ಕೆಲಸ ಮಾಡಬೇಕೆಂಬ ಉತ್ಸಾಹ ಹೆಚ್ಚಾಗಿದೆ ಎಂದರು.

ಕನ್ನಡ ಕೆಲಸ ಮಾಡುವುದಕ್ಕಾಗಿ ಸಮ್ಮೇಳನ, ಸನ್ಮಾನ, ಪುಸ್ತಕ ಬಿಡುಗಡೆ ಕಾರ್ಯಕ್ರಮ ಮಾಡುವುದು ಸರಿಯಷ್ಟೇ. ಆದರೆ, ಇದೇ ವೇಳೆ ನಾಡಿನಲ್ಲಿ ಕನ್ನಡಕ್ಕಾಗಿ ಕೆಲಸ ಮಾಡುತ್ತಿರುವ ಕ್ರೀಯಾಶೀಲರನ್ನು ಗುರುತಿಸಿ, ಪ್ರೋತ್ಸಾಹಿಸುವುದರ ಮೂಲಕ ಕನ್ನಡ ಉಳಿಸಿ-ಬೆಳೆಸಲು ಸಹಕಾರಿಯಾಗಬೇಕು ಎಂದು ಅವರು ತಿಳಿಸಿದರು. ಕನ್ನಡ ಭಾಷೆ ಉಳಿಸುವುದು ಒಬ್ಬರಿಂದ ಮಾಡುವ ಕೆಲಸವಲ್ಲ. ಅದಕ್ಕಾಗಿ ನಗರದಾದ್ಯಂತ ಎಲ್ಲ ವಾರ್ಡ್ ಹಾಗೂ ವಿಧಾನಸಭಾ ಕ್ಷೇತ್ರದಲ್ಲಿ ಕನ್ನಡ ಕೆಲಸ ಮಾಡುವವರನ್ನು ಗುರುತಿಸಲಾಗುತ್ತದೆ. ಅವರನ್ನು ಪ್ರತಿ ಹಂತದಲ್ಲಿಯೂ ಹುರಿದುಂಬಿಸುವ ಕೆಲಸ ಮಾಡಲಾಗುತ್ತದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಕನ್ನಡದ ಬಗ್ಗೆ ಪ್ರೀತಿ ತೋರಿಸುವ ಚಿಂದಿ ಆಯುವವರಿಂದ ಹಿಡಿದು, ಯಾವುದೇ ಜಾತಿ, ಧರ್ಮ ಭೇದವಿಲ್ಲದೆ ಎಲ್ಲರನ್ನೂ ಗುರುತಿಸಿ ಸನ್ಮಾನದ ಮೂಲಕ ಪ್ರೋತ್ಸಾಹಿಸಲಾಗುತ್ತದೆ ಎಂದು ನುಡಿದರು.

ಕೆಂಪೇಗೌಡ ಜಾತ್ಯತೀತ ವ್ಯಕ್ತಿ: ಬೆಂಗಳೂರು ನಗರವನ್ನು ಕಟ್ಟಿದ ನಾಡಪ್ರಭು ಕೆಂಪೇಗೌಡ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗುವಂತಹ ವ್ಯಕ್ತಿಯಲ್ಲ. ಅವರು ಸರ್ವ ಜಾತಿ, ಧರ್ಮಗಳಿಗೆ ಅನುಕೂಲಕ್ಕಾಗಿ ಹಲವಾರು ಕೆಲಸಗಳನ್ನು ಮಾಡಿದ್ದಾರೆ. ಅವರೊಬ್ಬ ಜಾತ್ಯಾತೀತ ವ್ಯಕ್ತಿಯಾಗಿದ್ದು, ಪ್ರತಿಯೊಬ್ಬರೂ ಕೆಂಪೇಗೌಡರನ್ನು ಅರಿಯಬೇಕು ಎಂದು ಮಾಯಣ್ಣ ತಿಳಿಸಿದರು.

ಕಾರ್ಯಕ್ರಮದಲ್ಲಿ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ಅಧ್ಯಕ್ಷ ಎಂ.ತಿಮ್ಮಯ್ಯ, ಮಹದೇವಪುರ ಕಸಾಪ ಅಧ್ಯಕ್ಷ ಡಾ. ಅಜಿತ್ ಕುಮಾರ್ ಸೇರಿದಂತೆ ಇನ್ನಿತರರಿದ್ದರು.

ಬಿ.ಜಿ.ಜಗದೀಶ್-ತಾರಕೇಶ್ವರಿ, ಜಿ.ಎಸ್.ಉದಯಕುಮಾರ್- ಚೈತ್ರ, ಪಿ.ಮೋಹನ್-ಕೆ.ಪುಷ್ಪಲತ ದಂಪತಿಗಳಿಗೆ ‘ಆದರ್ಶ ದಂಪತಿ ಪ್ರಶಸ್ತಿ’, ಪದ್ಮಾವತಿ ಚಂದ್ರು, ಜಯಶಂಕರ್ ಪ್ರಕಾಶ್, ಬಿ.ಶಾಂತಕುಮಾರ್, ಎಂ.ಶಿವಸ್ವಾಮಿಗೆ ‘ಆದರ್ಶ ಕನ್ನಡಿಗ ಹಾಗೂ ಕನ್ನಡತಿ ಪ್ರಶಸ್ತಿ’, ಪ್ರಕಾಶ್ ಎಸ್ ಶಿಲ್ಪಿ ಗೆ ‘ಯುವಕಾವ್ಯ ಪ್ರತಿಭಾ ಪ್ರಶಸ್ತಿ’ ನೀಡಿ ಸನ್ಮಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X