Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋಮಾಂಸ ಸಾಗಾಟದ ಶಂಕೆ: ಲಾರಿಗೆ ಬೆಂಕಿ...

ಗೋಮಾಂಸ ಸಾಗಾಟದ ಶಂಕೆ: ಲಾರಿಗೆ ಬೆಂಕಿ ಹಚ್ಚಿದ ಗುಂಪು

ವಾರ್ತಾಭಾರತಿವಾರ್ತಾಭಾರತಿ23 July 2017 11:02 PM IST
share
ಗೋಮಾಂಸ ಸಾಗಾಟದ ಶಂಕೆ: ಲಾರಿಗೆ ಬೆಂಕಿ ಹಚ್ಚಿದ ಗುಂಪು

ಭುವನೇಶ್ವರ,ಜು.23: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿಯೊಂದು ಗೋಮಾಂಸವನ್ನು ಸಾಗಿಸುತ್ತಿದ್ದ ಶಂಕೆಯಿಂದ ಗುಂಪೊಂದು ಅದಕ್ಕೆ ಬೆಂಕಿ ಹಚ್ಚಿದ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ರವಿವಾರ ನಡೆದಿದೆ.

ಭುವನೇಶ್ವರದಿಂದ ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದ ಲಾರಿ ಗೋಲಂತರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಲ್ಟಿಯಾಗಿತ್ತು. ಲಾರಿಯನ್ನು ಮೇಲಕ್ಕೆತ್ತಲು ಚಾಲಕ ಮತ್ತು ಕ್ಲೀನರ್ ಕ್ರೇನ್ ತರಿಸಿದ್ದು, ಈ ವೇಳೆ ರಸ್ತೆಯಲ್ಲಿ ರಕ್ತ ಹರಿದಿತ್ತು. ಸುದ್ದಿಯನ್ನು ತಿಳಿದು ಸ್ಥಳಕ್ಕೆ ಧಾವಿಸಿದ ವಿಹಿಂಪ ಮತ್ತು ಬಜರಂಗ ದಳ ಕಾರ್ಯಕರ್ತರು ಲಾರಿಯ ಬಾಗಿಲುಗಳನ್ನು ಬಲಪ್ರಯೋಗದಿಂದ ತೆರೆದಿದ್ದರು.

ಉದ್ವಿಗ್ನ ಸ್ಥಿತಿ ಸೃಷ್ಟಿಯಾಗುತ್ತಿದ್ದಂತೆ ಲಾರಿಯ ಚಾಲಕ ಮತ್ತು ಕ್ಲೀನರ್ ಪರಾರಿಯಾ ಗಿದ್ದರು. ಗುಂಪು ಲಾರಿಗೆ ಬೆಂಕಿ ಹಚ್ಚಿ, ರಾಷ್ಟ್ರೀಯ ಹೆದ್ದಾರಿ 16ರಲ್ಲಿ ವಾಹನಗಳ ಸಂಚಾರಕ್ಕೆ ತಡೆಯೊಡ್ಡಿತ್ತು ಎಂದು ಸದರ್ ಉಪ ವಿಭಾಗ ಪೊಲೀಸ್ ಅಧಿಕಾರಿ ಅಶೋಕ ಮೊಹಂತಿ ತಿಳಿಸಿದರು.

ಅಗ್ನಿಶಾಮಕ ಯಂತ್ರಗಳು ಸ್ಥಳಕ್ಕೆ ಆಗಮಿಸಿದ್ದವಾದರೂ,ಆ ವೇಳೆಗಾಗಲೇ ಲಾರಿಯು ಸಂಪೂರ್ಣ ಸುಟ್ಟು ಕರಕಲಾಗಿತ್ತು. ಲಾರಿ ಮಾಲಕನ ಗುರುತು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

 ಕಾನೂನಿನಂತೆ ಲಾರಿ ಚಾಲಕನ ವಿರುದ್ಧ ಕ್ರಮವನ್ನು ಜರುಗಿಸಲಾಗುವುದು ಎಂದು ತಿಳಿಸಿದ ಪೊಲೀಸರು, ಲಾರಿಯಲ್ಲಿ ಗೋಮಾಂಸವನ್ನು ಸಾಗಿಸಲಾಗುತ್ತಿತ್ತೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು.

ಒಡಿಶಾದಲ್ಲಿ ಗೋವುಗಳ ಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದನ್ನು ಉಲ್ಲಂಘಿಸಿದವರಿಗೆ ಗರಿಷ್ಠ ಎರಡು ವರ್ಷಗಳ ಜೈಲು ಶಿಕ್ಷೆ ಅಥವಾ 1,000 ರೂ.ವರೆಗೆ ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ. ಆದರೆ ಹತ್ಯೆಗೆ ಅರ್ಹವಾಗಿದೆ ಮತ್ತು 14ವರ್ಷಕ್ಕೂ ಹೆಚ್ಚಿನ ವಯಸ್ಸಾಗಿದೆ ಹಾಗೂ ತಳಿವರ್ಧನೆಗೆೆ ಕಾಯಂ ಅನರ್ಹವಾಗಿದೆ ಎಂಬ ಪ್ರಮಾಣಪತ್ರವಿದ್ದರೆ ಗೂಳಿ ಮತ್ತು ಎತ್ತುಗಳ ಹತ್ಯೆಗೆ ಅವಕಾಶವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X