Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಸರಳ ಕೃಷಿ ವಿಜ್ಞಾನ ಮಾಹಿತಿ

ಸರಳ ಕೃಷಿ ವಿಜ್ಞಾನ ಮಾಹಿತಿ

​ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ24 July 2017 12:15 AM IST
share
ಸರಳ ಕೃಷಿ ವಿಜ್ಞಾನ ಮಾಹಿತಿ

ಇಂದು ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಸೇರಿದಂತೆ ಬೇರೆ ಬೇರೆ ತಂತ್ರಜ್ಞಾನಗಳನ್ನು ಸರಳವಾಗಿ ಕಲಿಸುವ, ಆಸಕ್ತಿ ಹುಟ್ಟಿಸುವ ಪ್ರಯತ್ನ ವ್ಯಾಪಕವಾಗಿ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಸಾಕಷ್ಟು ಕೃತಿಗಳೂ ಹೊರ ಬರುತ್ತಿವೆ. ಆದರೆ ಬದುಕಿನೊಂದಿಗೆ ಅವಿನಾಭಾವವಾಗಿ ಬೆಸೆದಿರುವ ಕೃಷಿಯ ಕುರಿತಂತೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಹುಟ್ಟಿಸುವ ಪ್ರಯತ್ನ ತೀರಾ ಕಡಿಮೆ ನಡೆದಿದೆ. ಕೃಷಿಯ ಕುರಿತಂತೆ ಇರುವ ಅಸಡ್ಡೆ, ಕೀಳರಿಮೆಯೂ ಇದಕ್ಕೆ ಕಾರಣವಾಗಿರಬಹುದು. ಕೃಷಿಕ ಕುಟುಂಬದಿಂದ ಬಂದವರೂ, ಕೃಷಿಯಿಂದ ಹೊರಬರುವ ಬಗ್ಗೆ ಯೋಚಿಸುತ್ತಾರೆಯೇ ಹೊರತು, ಅದನ್ನೊಂದು ಕುತೂಹಲಕಾರಿ ವಿಜ್ಞಾನವಾಗಿ ಗ್ರಹಿಸಿ, ಅದನ್ನು ಬೆಳೆಸುವ ಕುರಿತಂತೆ ವಿದ್ಯಾವಂತರು ಯೋಚಿಸುತ್ತಿಲ್ಲ. ಕೃಷಿಯೂ ಒಂದು ವಿಜ್ಞಾನ ಎನ್ನುವುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿ, ಆ ಕ್ಷೇತ್ರದ ಕುರಿತಂತೆ ಅವರಲ್ಲಿ ಕುತೂಹಲ ಹುಟ್ಟಿಸಿದ್ದೇ ಆದರೆ, ಕೃಷಿ ಕ್ಷೇತ್ರ ಇನ್ನಷ್ಟು ಆಧುನಿಕವಾಗಿ ಬೆಳೆಯಬಹುದು. ಬರೇ ಕಂಪ್ಯೂಟರ್ ಹಿಂದೆ ಬಿದ್ದಿರುವ ಯುವಕರ ಚಿಂತನೆಯಲ್ಲೂ ಮಹತ್ತರ ಬದಲಾವಣೆಗಳಾಗಬಹುದು. ಈ ಹಿನ್ನೆಲೆಯಲ್ಲಿ ನವಕರ್ನಾಟಕ ಪ್ರಕಾಶನ ಪ್ರಕಟಿಸಿರುವ, ‘ಕೃಷಿ ವಿಜ್ಞಾನ’ ಒಂದು ಒಳ್ಳೆಯ ಪ್ರಯೋಗವಾಗಿದೆ. ಡಾ. ಜಿ. ಕೆ. ವೀರೇಶ್, ಅಡ್ಡೂರು ಕೃಷ್ಣರಾವ್ ಅವರು ಜಂಟಿಯಾಗಿ ರಚಿಸಿರುವ ಈ ಕೃತಿ, ಕೃಷಿಯ ಕುರಿತಂತೆ ಯುವ ಸಮುದಾಯದಲ್ಲಿ ಜ್ಞಾನದ ಬೀಜವನ್ನು ಬಿತ್ತುತ್ತದೆ.
ಭಾರತಕ್ಕೂ ಕೃಷಿಗೂ ಇರುವ ಅನ್ಯೋನ್ಯ ಸಂಬಂಧವನ್ನು ಆರಂಭದ ಎರಡು ಅಧ್ಯಾಯಗಳು ಚರ್ಚಿಸುತ್ತವೆ. ಭಾರತದಲ್ಲಿ ಕೃಷಿಯ ಆರಂಭ ಮತ್ತು ಭಾರತದ ಕೃಷಿಯ ಕಾಲಘಟ್ಟವನ್ನು ಈ ಅಧ್ಯಾಯಗಳು ಚರ್ಚಿಸುತ್ತವೆ. ವೇದಕಾಲದ ಕೃಷಿ, ಮಧ್ಯಕಾಲೀನ ಕೃಷಿ, ಬ್ರಿಟಿಷರ ಕಾಲದ ಕೃಷಿ ಮತ್ತು ಆಧುನಿಕ ಕೃಷಿಯ ಕುರಿತಂತೆ ಇಲ್ಲಿ ಚರ್ಚಿಸಲಾಗಿದೆ. ಮೂರನೆ ಅಧ್ಯಾಯದಲ್ಲಿ ಕರ್ನಾಟಕದಲ್ಲಿ ಕೃಷಿ ಬೆಳೆದು ಬಂದ ಹಾದಿಯನ್ನು ಗುರುತಿಸಲಾಗಿದೆ. ಹಾಗೆಯೇ ಕೃಷಿಯಲ್ಲಿ ನಡೆದ ಸಂಶೋಧನೆ ಮತ್ತು ಕೃಷಿ ಕ್ಷೇತ್ರಕ್ಕೆ ಕೆಲವು ಮಹನೀಯರು ನೀಡಿದ ಕೊಡುಗೆಗಳನ್ನು ದಾಖಲಿಸಲಾಗಿದೆ. ಬಳಿಕ ಮಣ್ಣು, ಗೊಬ್ಬರ, ನೀರು, ಎರೆಗೊಬ್ಬರ, ಜೈವಿಕ ಗೊಬ್ಬರ, ಬೀಜ ವಿಜ್ಞಾನ ಮೊದಲಾದ ವಿಷಯಗಳ ಕುರಿತಂತೆ ಮಾಹಿತಿಗಳನ್ನು ನೀಡಲಾಗಿದೆ. ಅರಣ್ಯ ಕೃಷಿ, ಜೇನು ಕೃಷಿ ಸಾಗಣೆ, ಹೈನುಗಾರಿಕೆ, ಒಳನಾಡು ಮೀನುಗಾರಿಕೆಯನ್ನೂ ಇಲ್ಲಿ ಚರ್ಚಿಸಲಾಗಿದೆ. ಒಟ್ಟಿನಲ್ಲಿ ವಿದ್ಯಾರ್ಥಿಗಳಿಗೂ ಹಿರಿಯರಿಗೂ ಬೇಕಾದ ಅತ್ಯುತ್ತಮ ಅಗತ್ಯ ಮಾಹಿತಿಗಳು ಈ ಕೃತಿಯಲ್ಲಿವೆ. ಒಟ್ಟು ಪುಟಗಳು 120 ರೂ. ಕೃತಿಯ ಮುಖಬೆಲೆ 75 ರೂ.

share
-ಕಾರುಣ್ಯಾ
-ಕಾರುಣ್ಯಾ
Next Story
X