Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶ್ರುಬ್ಸೋಲ್ ಇಂಗ್ಲೆಂಡ್‌ನ ಗೆಲುವಿನ...

ಶ್ರುಬ್ಸೋಲ್ ಇಂಗ್ಲೆಂಡ್‌ನ ಗೆಲುವಿನ ರೂವಾರಿ

ವಾರ್ತಾಭಾರತಿವಾರ್ತಾಭಾರತಿ24 July 2017 11:42 PM IST
share
ಶ್ರುಬ್ಸೋಲ್ ಇಂಗ್ಲೆಂಡ್‌ನ ಗೆಲುವಿನ ರೂವಾರಿ

ಲಂಡನ್, ಜು.24: ಮಧ್ಯಮ ವೇಗಿ ಅನಿಯಾ ಶ್ರುಬ್ಸೋಲ್ ಇಂಗ್ಲೆಂಡ್‌ಗೆ ಮಹಿಳಾ ವಿಶ್ವಕಪ್‌ನಲ್ಲಿ ಗೆಲುವು ತಂದು ಕೊಟ್ಟ ಸ್ಟಾರ್ ಬೌಲರ್.

25ರ ಹರೆಯದ ಶ್ರುಬ್ಸೋಲ್ 9.4 ಓವರ್‌ಗಳಲ್ಲಿ 46ಕ್ಕೆ 6 ವಿಕೆಟ್‌ಗಳನ್ನು ಉಡಾಯಿಸುವ ಮೂಲಕ ಭಾರತದ ಪಾಲಾಗಲಿದ್ದ ವಿಶ್ವಕಪ್‌ನ್ನು ಕಸಿದುಕೊಂಡಿದ್ದರು.

 16ರ ಹರೆಯದಲ್ಲಿ ಇಂಗ್ಲೆಂಡ್ ತಂಡ ಪ್ರವೇಶಿಸಿದ್ದ ಶ್ರುಬ್ಸೋಲ್ 9 ವರ್ಷಗಳ ಹಿಂದೆ ಇಂಗ್ಲೆಂಡ್ ತಂಡಕ್ಕೆ ಪಾದಾರ್ಪಣೆ ಮಾಡಿದ್ದರು. 2008ರಲ್ಲಿ ದಕ್ಷಿಣ ಆಫ್ರಿಕ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ 8.3 ಓವರ್‌ಗಳಲ್ಲಿ 26ಕ್ಕೆ 1 ವಿಕೆಟ್ ಪಡೆದಿದ್ದರು.

10 ದಿನಗಳ ಬಳಿಕ ದಕ್ಷಿಣ ಆಫ್ರಿಕ ವಿರುದ್ಧ ಆಡಿದ್ದ ಟ್ವೆಂಟಿ-20 ಪಂದ್ಯದಲ್ಲಿ 4 ಓವರ್‌ಗಳಲ್ಲಿ 19 ಕ್ಕೆ 3 ವಿಕೆಟ್ ಉಡಾಯಿಸಿದ್ದರು. ಇಂಗ್ಲೆಂಡ್‌ಗೆ 3-0 ಅಂತರದಲ್ಲಿ ಸರಣಿ ಗೆಲುವಿಗೆ ನೆರವಾಗಿದ್ದರು. 2009ರ ವಿಶ್ವಕಪ್‌ನಲ್ಲಿ ದೊಡ್ಡ ಸಾಧನೆ ಮಾಡಲಿಲ್ಲ. ಮತ್ತೆ ಎರಡು ವರ್ಷಗಳಲ್ಲಿ ಗಾಯದ ಸಮಸ್ಯೆ ಎದುರಿಸಿದ್ದರು. 2013ರಲ್ಲಿ ಭಾರತದಲ್ಲಿ ನಡೆದ ವಿಶ್ವಕಪ್‌ಗೆ ಇಂಗ್ಲೆಂಡ್ ತಂಡದಲ್ಲಿ ಸ್ಥಾನ ಪಡೆದ ಶ್ರುಬ್ಸೋಲ್ ಪ್ರಮುಖ ಬೌಲರ್ ಆಗಿ ಗುರುತಿಸಿಕೊಂಡರು. ಶ್ರೀಲಂಕಾ ವಿರುದ್ಧ ಅವರಿಗೆ ಅವಕಾಶ ಸಿಗಲಿಲ್ಲ. ಆದರೆ ಎರಡನೆ ಪಂದ್ಯದಲ್ಲಿ ಭಾರತದ ವಿರುದ್ಧ 1 ವಿಕೆಟ್ ಪಡೆದರು. ಮುಂದಿನ ಮೂರು ಪಂದ್ಯಗಳಲ್ಲಿ 12 ವಿಕೆಟ್ ಪಡೆದರು. ಇಂಗ್ಲೆಂಡ್ ಪ್ಲೇ-ಆಫ್‌ನಲ್ಲಿ ನ್ಯೂಝಿಲೆಂಡ್‌ನ್ನು ಮಣಿಸಿ ಮೂರನೆ ಸ್ಥಾನ ಪಡೆದಿತ್ತು.

   ಶ್ರುಬ್ಸೊಲ್ ಟ್ವೆಂಟಿ-20 ವಿಶ್ವ್ವಕಪ್‌ನಲ್ಲಿ 12 ವಿಕೆಟ್‌ಗಳನ್ನು ಪಡೆದಿದ್ದರು. ಕಳೆದ ವರ್ಷ ತಂಡದ ಉಪನಾಯಕಿಯಾಗಿ ಭಡ್ತಿ ಪಡೆದಿದ್ದರು. 2017ರ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕ ವಿರುದ್ಧ 49.4ನೆ ಓವರ್‌ನಲ್ಲಿ ಬೌಂಡರಿ ಬಾರಿಸುವ ಮೂಲಕ ಇಂಗ್ಲೆಂಡ್‌ನ್ನು ಫೈನಲ್ ತಲುಪಿಸಿದ್ದರು. ಆಗ 8 ಪಂದ್ಯಗಳಲ್ಲಿ 6 ವಿಕೆಟ್ ಪಡೆದಿದ್ದರು. ಫೈನಲ್‌ನಲ್ಲಿ ಅವರು 6 ವಿಕೆಟ್ ಪಡೆದರು.

ಭಾರತದ ಆರಂಭಿಕ ಆಟಗಾರ್ತಿ ಸ್ಮತಿ ಮಂಧಾನ ಅವರನ್ನು ಖಾತೆ ತೆರೆಯುವ ಮೊದಲೇ ಪೆವಿಲಿಯನ್ ದಾರಿ ತೋರಿಸಿದ ಶ್ರುಬ್ಸೊಲ್ ಇಂಗ್ಲೆಂಡ್‌ಗೆ ಮೊದಲ ಯಶಸ್ಸು ತಂದು ಕೊಟ್ಟರು. ಇಂಗ್ಲೆಂಡ್ ವಿರುದ್ಧ ಅವರು ಮೊದಲ ಪಂದ್ಯದಲ್ಲಿ 90 ರನ್ ಗಳಿಸಿದ್ದರು. ಹರ್ಮನ್‌ಪೀತ್ ಕೌರ್ ಅವರನ್ನು ಹಾರ್ಟ್ಲಿ (51) ಪೆವಿಲಿಯನ್‌ಗೆ ಅಟ್ಟಿದರು. ಬಳಿಕ ಶ್ರುಬ್ಸೊಲ್ ಅವರದ್ದೇ ಆಟ. ಭಾರತದ ವಿಶ್ವಕಪ್ ಗೆಲ್ಲುವ ಕನಸನ್ನು ಮಣ್ಣುಗೂಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X